AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿ ಟ್ರಂಪ್ ಆಪ್ತ ಚಾರ್ಲಿ ಹತ್ಯೆ

ಅಮೆರಿಕದ ಉಟಾಹ್ ಕಾಲೇಜು ಕಾರ್ಯಕ್ರಮದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಚಾರ್ಲಿ ಕಿರ್ಕ್ ಅವರ ಹತ್ಯೆಯು ಅಮೆರಿಕದಲ್ಲಿ ರಾಜಕೀಯ ಹಿಂಸಾಚಾರದ ಬೆದರಿಕೆ ಇನ್ನೂ ಮುಗಿದಿಲ್ಲ ಎಂಬುದನ್ನು ತೋರಿಸುತ್ತದೆ.ಉತಾಹ್‌ನಲ್ಲಿ ನಡೆದ ಕಾಲೇಜು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗ ಅವರಿಗೆ ಗುಂಡು ಹಾರಿಸಲಾಯಿತು.ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನಲ್ಲಿ ಚಾರ್ಲಿ ಕಿರ್ಕ್ ಅವರ ಸಾವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.

Video: ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿ ಟ್ರಂಪ್ ಆಪ್ತ ಚಾರ್ಲಿ ಹತ್ಯೆ
ಚಾರ್ಲಿ Image Credit source: India TV
ನಯನಾ ರಾಜೀವ್
|

Updated on:Sep 11, 2025 | 9:38 AM

Share

ವಾಷಿಂಗ್ಟನ್, ಸೆಪ್ಟೆಂಬರ್ 11: ಅಮೆರಿಕ ಸಂಪ್ರದಾಯವಾದಿ ಹಾಗೂ ಅಧ್ಯಕ್ಷ ಡೊನಾಲ್ಡ್ಟ್ರಂಪ್(Donald Trump) ಆಪ್ತ ಚಾರ್ಲಿ ಕಿರ್ಕ್​​ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬುಧವಾರ ಉಟಾಹ್‌ನಲ್ಲಿ ನಡೆದ ಕಾಲೇಜು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗ ಅವರಿಗೆ ಗುಂಡು ಹಾರಿಸಲಾಯಿತು. ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನಲ್ಲಿ ಚಾರ್ಲಿ ಕಿರ್ಕ್ ಅವರ ಸಾವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ. ಕೊಲೆ ಅಮೆರಿಕದಾದ್ಯಂತ ರಾಜಕೀಯ ಹಿಂಸಾಚಾರದ ಬೆದರಿಕೆ ಬಗ್ಗೆ ಎಲ್ಲರ ಗಮನಸೆಳೆದಿದೆ. ಯುವ ರಿಪಬ್ಲಿಕನ್ ಮತದಾರರನ್ನು ಒಗ್ಗೂಡಿಸುವಲ್ಲಿ ಚಾರ್ಲಿ ಕಿರ್ಕ್ ಪ್ರಭಾವಶಾಲಿ ಪಾತ್ರ ವಹಿಸಿದ್ದಾರೆ. ಕಿರ್ಕ್ ಇಸ್ರೇಲ್‌ನ ಕಟ್ಟಾ ಬೆಂಬಲಿಗರೂ ಆಗಿದ್ದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಿರ್ಕ್ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಗುಂಡೇಟಿನ ಶಬ್ದ ಕೇಳಿ ವೇದಿಕೆಯ ಮೇಲೆ ಬಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಸತ್ತಿದ್ದಾರೆಂದು ಘೋಷಿಸಿದರು. ಚಾರ್ಲಿ ಕಿರ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತ್ಯಂತ ಆಪ್ತ ವ್ಯಕ್ತಿಗಳಲ್ಲಿ ಒಬ್ಬರು. ಚಾರ್ಲಿಗೆ 31 ವರ್ಷ ವಯಸ್ಸಾಗಿತ್ತು. ಸೆಪ್ಟೆಂಬರ್ 14ರಂದು ಯುಎಸ್ ಮತ್ತು ಉಟಾಹ್ ಧ್ವಜಗಳನ್ನು ಅರ್ಧಕ್ಕೆ ಹಾರಿಸಲು  ಉಟಾಹ್ ಗವರ್ನರ್ ಸೂಚಿಸಿದ್ದಾರೆ.

ಮತ್ತಷ್ಟು ಓದಿ:  ರಷ್ಯಾದ ವಿರುದ್ಧ ತನ್ನ ಹಠ ಸಾಧಿಸಲು ಮತ್ತೆ ಭಾರತ ಹಾಗೂ ಚೀನಾವನ್ನು ಬಲಿಪಶು ಮಾಡಲು ಹೊರಟ ಟ್ರಂಪ್

ಘಟನೆಯ ನಂತರ, SWAT ತಂಡ, ATF ಪೊಲೀಸರು ಮತ್ತು ಇತರ ಸಂಸ್ಥೆಗಳು UVU ಕ್ಯಾಂಪಸ್‌ಗೆ ಬೀಗ ಹಾಕಿ ಶೋಧ ಕಾರ್ಯಾಚರಣೆ ನಡೆಸಿದವು. ಆರಂಭಿಕ ವರದಿಗಳು ಪೊಲೀಸರು ಒಬ್ಬ ಶಂಕಿತನನ್ನು ಬಂಧಿಸಿದ್ದಾರೆ.ನಂತರ ಅಧಿಕಾರಿಗಳು ನಿಜವಾದ ದಾಳಿಕೋರ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಸ್ಪಷ್ಟಪಡಿಸಿದರು. ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಗುರುವಾರ ಉಟಾಹ್‌ಗೆ ಭೇಟಿ ನೀಡಲಿದ್ದಾರೆ. ವ್ಯಾನ್ಸ್ ಅವರನ್ನು ಕಿರ್ಕ್‌ಗೆ ತುಂಬಾ ಹತ್ತಿರವೆಂದು ಪರಿಗಣಿಸಲಾಗಿದೆ.

ಘಟನೆಯ ವಿಡಿಯೋ

ಟ್ರಂಪ್ ಹೇಳಿದ್ದೇನು?

ಮಹಾನ್ ಮತ್ತು ಶ್ರೇಷ್ಠ ವ್ಯಕ್ತಿ ಚಾರ್ಲಿ ಕಿರ್ಕ್ ನಿಧನರಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದಾರೆ. ಅಮೆರಿಕದಲ್ಲಿ ಚಾರ್ಲಿಗಿಂತ ಯುವಕರ ಹೃದಯವನ್ನು ಯಾರೂ ಚೆನ್ನಾಗಿ ಅರ್ಥಮಾಡಿಕೊಂಡಿಲ್ಲ. ಅವರನ್ನು ಎಲ್ಲರೂ ಪ್ರೀತಿಸುತ್ತಿದ್ದರು ಮತ್ತು ಗೌರವಿಸುತ್ತಿದ್ದರು, ವಿಶೇಷವಾಗಿ ನಾನು, ಮತ್ತು ಈಗ ಅವರು ನಮ್ಮೊಂದಿಗೆ ಇಲ್ಲ. ಮೆಲಾನಿಯಾ ಮತ್ತು ನಾನು ಅವರ ಪತ್ನಿ ಎರಿಕಾ ಮತ್ತು ಕುಟುಂಬಕ್ಕೆ ನಮ್ಮ ಸಂತಾಪ ಸೂಚಿಸುತ್ತೇವೆ. ಚಾರ್ಲಿ, ನಾವು ನಿನ್ನನ್ನು ಪ್ರೀತಿಸುತ್ತೇವೆ ಎಂದು ಬರೆದಿದ್ದಾರೆ.

ಉಟಾಹ್ ವ್ಯಾಲಿ ವಿಶ್ವವಿದ್ಯಾನಿಲಯವು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕಿರ್ಕ್ ಬಿಳಿ ಟೆಂಟ್ ಅಡಿಯಲ್ಲಿ ಕುಳಿತು, ದಿ ಅಮೆರಿಕನ್ ಕಮ್‌ಬ್ಯಾಕ್ ಮತ್ತು ಪ್ರೂವ್ ಮಿ ರಾಂಗ್ ಎಂಬ ಘೋಷಣೆಗಳನ್ನು ಬರೆದ ಹ್ಯಾಂಡ್‌ಹೆಲ್ಡ್ ಮೈಕ್ರೊಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ತೋರಿಸುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:34 am, Thu, 11 September 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ