AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chile Wildfires: ಚಿಲಿ ಗಾಡ್ಗಿಚ್ಚಿಗೆ ಇಲ್ಲಿಯವರೆಗೆ 120ಕ್ಕೂ ಅಧಿಕ ಜನರು ಬಲಿ

ಚಿಲಿಯ ಅರಣ್ಯ ಪ್ರದೇಶಗಳಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ, 120 ಕ್ಕೂ ಹೆಚ್ಚು ಜನರು ಈ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಹೆಚ್ಚಿನ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಸೋಮವಾರದವರೆಗೆ ಕನಿಷ್ಠ 122 ಜನರು ಸಾವನ್ನಪ್ಪಿದ್ದಾರೆ ಎಂದು ವಾಲ್ಪಾರೈಸೊ ಕಾನೂನು ವೈದ್ಯಕೀಯ ಸೇವೆಗಳು ತಿಳಿಸಿವೆ. ಇದಲ್ಲದೇ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ, ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆ (ಸೆನಾಪ್ರೆಡ್) ದೇಶಾದ್ಯಂತ ಪ್ರಸ್ತುತ 161 ಕಾಡುಗಳು ಬೆಂಕಿಯಲ್ಲಿವೆ ಎಂದು ಕಂಡುಹಿಡಿದಿದೆ.

Chile Wildfires: ಚಿಲಿ ಗಾಡ್ಗಿಚ್ಚಿಗೆ ಇಲ್ಲಿಯವರೆಗೆ 120ಕ್ಕೂ ಅಧಿಕ ಜನರು ಬಲಿ
ಚಿಲಿ ಕಾಡ್ಗಿಚ್ಚುImage Credit source: NDTV
ನಯನಾ ರಾಜೀವ್
|

Updated on: Feb 06, 2024 | 10:05 AM

Share

ಚಿಲಿಯ ಕಾಡುಗಳಲ್ಲಿ ಬೆಂಕಿ(Fire) ತನ್ನ ಕೆನ್ನಾಲಿಗೆ ಚಾಚಿದೆ, ಕಾಡ್ಗಿಚ್ಚಿಗೆ ಅಲ್ಲಿಯ ಪಕ್ಷಿ, ಪ್ರಾಣಿ ಸಂಕುಲ, ಮನುಷ್ಯರು ಕೂಡ ನಲುಗಿಹೋಗಿದ್ದಾರೆ. ಇದುವರೆಗೆ 120ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದಲ್ಲದೇ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ, ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆ (ಸೆನಾಪ್ರೆಡ್) ದೇಶಾದ್ಯಂತ ಪ್ರಸ್ತುತ 161 ಕಾಡುಗಳು ಬೆಂಕಿಯಲ್ಲಿ ಬೇಯುತ್ತಿವೆ.

ವಾಲ್ಪಾರೈಸೊ ಮತ್ತು ವಿನಾ ಡೆಲ್ ಮಾರ್ ಸೇರಿದಂತೆ ಕರಾವಳಿ ಸಮುದಾಯಗಳು ಹೊಗೆಯಿಂದ ತೊಂದರೆಗೀಡಾಗಿರುವುದನ್ನು ನೋಡಿದ ನಂತರ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

ರಕ್ಷಣಾ ಕಾರ್ಯಕರ್ತರೊಂದಿಗೆ ಸಹಕರಿಸುವಂತೆ ಬೋರಿಕ್ ಚಿಲಿಯವರಿಗೆ ಮನವಿ ಮಾಡಿದರು . ಜಾಗ ಖಾಲಿ ಮಾಡುವಂತೆ ಕೇಳಿದರೆ ಹಿಂಜರಿಯಬೇಡಿ ಎಂದು ಹೇಳಿದರು. ಬೆಂಕಿ ವೇಗವಾಗಿ ಹರಡುತ್ತಿದ್ದು, ಹವಾಮಾನ ವೈಪರೀತ್ಯದಿಂದ ನಿಯಂತ್ರಿಸಲು ಕಷ್ಟವಾಗುತ್ತಿದೆ. ತಾಪಮಾನ ಹೆಚ್ಚಿದೆ, ಗಾಳಿ ಜೋರಾಗಿ ಬೀಸುತ್ತಿದೆ ಮತ್ತು ತೇವಾಂಶ ಕಡಿಮೆಯಾಗಿದೆ.

ಮತ್ತಷ್ಟು ಓದಿ:Forest Fire: ಕಾಡ್ಗಿಚ್ಚಿನಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ 250 ಹೆಕ್ಟರ್​​ನಷ್ಟು ಅರಣ್ಯ ಸಂಪತ್ತು ಹಾನಿ

ಹೆಚ್ಚುವರಿಯಾಗಿ, ರಕ್ಷಣಾ ಸಚಿವಾಲಯವು ಪೀಡಿತ ಪ್ರದೇಶಗಳಿಗೆ ಹೆಚ್ಚುವರಿ ಮಿಲಿಟರಿ ಸಿಬ್ಬಂದಿಯನ್ನು ಕಳುಹಿಸುತ್ತದೆ ಮತ್ತು ಅಗತ್ಯವಿರುವ ಎಲ್ಲಾ ಸರಬರಾಜುಗಳನ್ನು ಒದಗಿಸುತ್ತದೆ ಎಂದು ಅಧ್ಯಕ್ಷರು ಹೇಳಿದರು. ಬೆಂಕಿ ಸಂತ್ರಸ್ತರ ಗೌರವಾರ್ಥ ಫೆಬ್ರವರಿ 5 ಮತ್ತು ಫೆಬ್ರವರಿ 6 ರಾಷ್ಟ್ರೀಯ ಶೋಕಾಚರಣೆಯ ದಿನಗಳನ್ನು ಘೋಷಿಸಿದರು.

ಕಳೆದ ವರ್ಷವೂ ಬೆಂಕಿ ಕಾಣಿಸಿಕೊಂಡಿತ್ತು ಇದರಿಂದಾಗಿ ಮಧ್ಯ ಚಿಲಿಯ ಹಲವು ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಯಿತು. ಕಳೆದ ವರ್ಷ ಫೆಬ್ರವರಿಯಲ್ಲಿ, ದೇಶದಲ್ಲಿ ಬೆಂಕಿ 400,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಹರಡಿತು ಮತ್ತು 22 ಕ್ಕೂ ಹೆಚ್ಚು ಜನರು ಸುಟ್ಟು ಕರಕಲಾಗಿದ್ದಾರೆ.

ಚಿಲಿ ದೇಶದ ಅಧ್ಯಕ್ಷ ಬ್ರಿಜೆ ಬೋರಿಕ್ ಹೆಚ್ಚಿನ ಜನನಿಬಿಡ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಮಿಲಿಟರಿ ಪಡೆಗಳನ್ನು ಕಳುಹಿಸಿದ್ದರು. ಫೆಬ್ರವರಿ 2 ರಂದು ಪ್ರಾರಂಭವಾದ ಬೆಂಕಿ ಸಾವಿರಾರು ಹೆಕ್ಟೇರ್ ಕಾಡುಗಳನ್ನು ನಾಶಪಡಿಸಿದೆ.

ಚಿಲಿಯಲ್ಲಿ 92 ಕಡೆಗಳಲ್ಲಿ ಬೆಂಕಿ ಉರಿಯುತ್ತಿದ್ದು, 43,000 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಹೊತ್ತಿ ಉರಿದಿದೆ ಎಂದು ಚಿಲಿಯ ಆಂತರಿಕ ಸಚಿವ ಕೆರೊಲಿನಾ ತೋಹಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜೊತೆಗೆ 1,100 ಕ್ಕೂ ಹೆಚ್ಚು ಮನೆಗಳು ಈಗಾಗಲೇ ಹಾನಿಗೊಳಗಾಗಿವೆ ಎಂದು ತೋಹಾ ಹೇಳಿದ್ದಾರೆ.

ಚಿಲಿ ಅರಣ್ಯದಲ್ಲಿ ಉಂಟಾದ ಭಯಾನಕ ಕಾಡ್ಗಿಚ್ಚಿನಿಂದ ಜನರು ಪ್ರಾಣ ಕಳೆದುಕೊಂಡಿದ್ದು ಮತ್ತು ಮನೆಗಳು ಸುಟ್ಟು ಬೂದಿಯಾಗಿರೋದನ್ನು ಆ ದೇಶದ ಅಧ್ಯಕ್ಷ ಒಪ್ಪಿಕೊಂಡಿದ್ದು, ಪೂರಕ ಸಂಪನ್ಮೂಲಗಳನ್ನು ಒದಗಿಸಲು ಸರ್ಕಾರವು ಸಕ್ರಿಯವಾಗಿದೆ ಎಂದು ಚಿಲಿಯರಿಗೆ ಭರವಸೆ ನೀಡಿದ್ದಾರೆ.

ಅಂತಾರಾಷ್ಟ್ರೀಯ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್