China: ವರುಣ ಆರ್ಭಟಕ್ಕೆ ತತ್ತರಿಸಿದ ಚೀನಾ, 15 ಸಾವು, 4 ಜನ ನಾಪತ್ತೆ

ನೈಋತ್ಯ ಚೀನಾದಲ್ಲಿ ಧಾರಾಕಾರ ಮಳೆಯಿಂದಾಗಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಮಾಧ್ಯಮ ಬುಧವಾರ ತಿಳಿಸಿದೆ.

China: ವರುಣ ಆರ್ಭಟಕ್ಕೆ ತತ್ತರಿಸಿದ ಚೀನಾ, 15 ಸಾವು, 4 ಜನ ನಾಪತ್ತೆ
ಚೀನಾದಲ್ಲಿ ಭಾರಿ ಮಳೆ
Follow us
|

Updated on:Jul 05, 2023 | 1:11 PM

ಬೀಜಿಂಗ್: ಭಾರತದ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಅಷ್ಟೊಂದು ಹಾನಿ ಉಂಟಾಗಿಲ್ಲ, ಆದರೆ ಹೊರದೇಶಗಳಲ್ಲಿ ಭಾರೀ ಮಳೆಯಿಂದ ದೊಡ್ಡ ಪ್ರಮಾಣದ ನಷ್ಟ ಉಂಟಾಗಿದೆ. ಇದೀಗ ಚೀನಾದಲ್ಲಿ 15 ಜನ ಸಾವನ್ನಪ್ಪಿದ್ದು, ಹಲವು ಜನರು ಕಾಣೆಯಾಗಿದ್ದಾರೆ. ಬಿಪರ್​ಜಾಯ್ ಚಂಡಮಾರುತದಿಂದ ಭಾರತ, ಚೀನಾ, ಪಾಕಿಸ್ತಾನದ ಅನೇಕ ಭಾಗಗಳಿಗೆ ಇದರ ಪರಿಣಾಮ ಎದುರಿಸಿತ್ತು. ಭಾರತದ ಗುಜರಾತ್​​ ಸೇರಿದಂತೆ ದಕ್ಷಿಣ ಭಾಗಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿತ್ತು. ಪಾಕಿಸ್ತಾನದಲ್ಲೂ ಭಾರಿ ಮಳೆಯಾಗಿದೆ. ಇನ್ನೂ ಚೀನಾ ವರುಣ ಆರ್ಭಟಕ್ಕೆ ತತ್ತರಿಸಿದೆ.

ನೈಋತ್ಯ ಚೀನಾದಲ್ಲಿ ಧಾರಾಕಾರ ಮಳೆಯಿಂದಾಗಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಮಾಧ್ಯಮ ಬುಧವಾರ ತಿಳಿಸಿದೆ. ಸೋಮವಾರದಿಂದ ಸುರಿದ ಭಾರಿ ಮಳೆಗೆ 15 ಜನರು ಸಾವನ್ನಪ್ಪಿದ್ದಾರೆ ಮತ್ತು ನೈಋತ್ಯ ಚೀನಾದ ಚಾಂಗ್ಕಿಂಗ್ ಪುರಸಭೆಯಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ನಾಲ್ಕು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಹೇಳಿದೆ.

ಮಧ್ಯ ಮತ್ತು ನೈಋತ್ಯ ಚೀನಾ ದೊಡ್ಡ ಪ್ರದೇಶಗಳಾಗಿದ್ದು, ಇಲ್ಲಿ ಈಗಾಗಲೇ ಮಳೆಯಿಂದಾಗುವ ವಿಪತ್ತುಗಳ ಬಗ್ಗೆ ಅಧಿಕಾರಿಗಳು ಮಂಗಳವಾರ ಎಚ್ಚರಿಕೆಯನ್ನು ನೀಡಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎಲ್ಲಾ ಹಂತಗಳ ಸುರಕ್ಷತೆ ಬಗ್ಗೆ ಅಧಿಕಾರಿಗಳೊಂದಿ ಸಭೆ ನಡೆಸಿದ್ದು, ಈಗಾಗಲೇ ಜನರ ಸುರಕ್ಷತೆ ಮತ್ತು ಆಸ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ:China: ಪರ್ವತ ಕುಸಿದು 14 ಜನರು ಸಾವು, ಐವರು ನಾಪತ್ತೆ

ಪ್ರವಾಹದ ವಿರುದ್ಧ ಹೋರಾಡಲು ಅಧಿಕಾರಿಗಳು ಮುಂದಾಳತ್ವ ವಹಿಸಬೇಕು, ಜನರ ಸುರಕ್ಷತೆ ಮೊದಲ ಆದ್ಯತೆ ಮತ್ತು ಎಲ್ಲಾ ರೀತಿಯ ನಷ್ಟಗಳನ್ನು ಕಡಿಮೆ ಮಾಡಲು ಶ್ರಮಿಸಬೇಕು ಎಂದು ಚೀನಾ ಅಧ್ಯಕ್ಷರು ಹೇಳಿದ್ದಾರೆ ಎಂದು ರಾಜ್ಯದ ಸುದ್ದಿ ಸಂಸ್ಥೆಗಳು ಹೇಳಿದೆ.

ಸಿಚುವಾನ್‌ನಲ್ಲಿ ಈ ತಿಂಗಳು ಭಾರೀ ಮಳೆಯಿಂದ 460,000 ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಕ್ಸಿನ್ಹುವಾ ವರದಿ ಮಾಡಿದೆ. ಮಳೆಯ ಪರಿಣಾಮದಿಂದ ಸುಮಾರು 85,000 ಜನರನ್ನು ತಮ್ಮ ಮನೆಗಳಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಈ ವಾರ ದೇಶದ ಕೆಲವು ಭಾಗಗಳಲ್ಲಿ ಸಂಭವನೀಯ ಮಣ್ಣಿನ ಕುಸಿತ ಮತ್ತು ಪರ್ವತ ಪ್ರದೇಶಗಳ ಕುಸಿತದಿಂದ ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:06 pm, Wed, 5 July 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ