AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ, ಚೀನಾ ಏಷ್ಯಾದ ಡಬಲ್ ಎಂಜಿನ್‌ಗಳು; ಟ್ರಂಪ್ ಸುಂಕದ ವಿರುದ್ಧ ಭಾರತಕ್ಕೆ ಬೀಜಿಂಗ್ ಬೆಂಬಲ

ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣ ನೀಡಿ ಅಮೆರಿಕ ಭಾರತದ ಮೇಲೆ ಶೇ. 50ರಷ್ಟು ವ್ಯಾಪಾರ ಸುಂಕ ವಿಧಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿನ ಚೀನಾ ರಾಯಭಾರಿ ಕ್ಸು ಫೀಹಾಂಗ್, ಅಮೆರಿಕ ಭಾರತದ ಮೇಲೆ ಶೇ. 50ರವರೆಗೆ ಸುಂಕಗಳನ್ನು ವಿಧಿಸಿ, ಇನ್ನೂ ಹೆಚ್ಚಿನ ಸುಖ ವಿಧಿಸುವ ಬೆದರಿಕೆ ಹಾಕಿರುವುದನ್ನು ಚೀನಾ ದೃಢವಾಗಿ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಭಾರತ, ಚೀನಾ ಏಷ್ಯಾದ ಡಬಲ್ ಎಂಜಿನ್‌ಗಳು; ಟ್ರಂಪ್ ಸುಂಕದ ವಿರುದ್ಧ ಭಾರತಕ್ಕೆ ಬೀಜಿಂಗ್ ಬೆಂಬಲ
Modi With China President
ಸುಷ್ಮಾ ಚಕ್ರೆ
|

Updated on: Aug 21, 2025 | 9:50 PM

Share

ನವದೆಹಲಿ, ಆಗಸ್ಟ್ 21: ಭಾರತ ಮತ್ತು ಚೀನಾದ ನಡುವಿನ ಸಂಬಂಧ ಇತ್ತೀಚೆಗೆ ಕೊಂಚ ಸುಧಾರಿಸುತ್ತಿದೆ. ಇದೀಗ ಭಾರತದ ವಿರುದ್ಧ ಅಮೆರಿಕ (US Tariff)  ಹೇರಿರುವ ಹೆಚ್ಚುವರಿ ಸುಂಕವನ್ನು ವಿರೋಧಿಸುವ ಮೂಲಕ ಚೀನಾ ಭಾರತಕ್ಕೆ ಬಹಿರಂಗವಾಗಿ ಬೆಂಬಲ ನೀಡಿದೆ. ಅಮೆರಿಕದ ಜೊತೆ ಉತ್ತಮ ಸಂಬಂಧ ಹೊಂದಿಲ್ಲದ ಚೀನಾ ಈ ವಿಷಯದಲ್ಲಿ ಭಾರತದ ಪರ ಬ್ಯಾಟಿಂಗ್ ಮಾಡಿದೆ. ಭಾರತದ ಮೇಲೆ ಶೇ. 50ರಷ್ಟು ವ್ಯಾಪಾರ ಸುಂಕ ವಿಧಿಸಿರುವ ಟ್ರಂಪ್ ನಿರ್ಧಾರವನ್ನು ಟೀಕಿಸಿರುವ ಭಾರತದಲ್ಲಿನ ಚೀನಾ ರಾಯಭಾರಿ ಕ್ಸು ಪೀಹಾಂಗ್ “ನಮ್ಮ ಮೌನವು ಗೂಂಡಾಗಿರಿಗೆ ಧೈರ್ಯ ತುಂಬುತ್ತದೆ. ಚೀನಾ ಭಾರತದೊಂದಿಗೆ ದೃಢವಾಗಿ ನಿಲ್ಲುತ್ತದೆ. ಭಾರತ ಮತ್ತು ಚೀನಾ ಎರಡೂ ಏಷ್ಯಾದ ಡಬಲ್ ಎಂಜಿನ್​ಗಳು” ಎಂದು ಹೇಳಿದ್ದಾರೆ.

ಭಾರತ ಮತ್ತು ಚೀನಾ ನಡುವಿನ ಸಹಕಾರವು ಎರಡೂ ದೇಶಗಳ ಅಭಿವೃದ್ಧಿಗೆ ಮಾತ್ರವಲ್ಲದೆ ಜಾಗತಿಕ ಸ್ಥಿರತೆಗೂ ಅತ್ಯಗತ್ಯ ಎಂದು ಚೀನಾ ರಾಯಭಾರಿ ಹೇಳಿದ್ದಾರೆ. “ಇಷ್ಟು ದೊಡ್ಡದಾದ ಎರಡು ನೆರೆಯ ರಾಷ್ಟ್ರಗಳಿಗೆ ಏಕತೆ ಮತ್ತು ಸಹಕಾರವು ಸಾಮಾನ್ಯ ಅಭಿವೃದ್ಧಿಯನ್ನು ಸಾಧಿಸುವ ಏಕೈಕ ಮಾರ್ಗವಾಗಿದೆ. ನಾವೆರಡೂ ದೇಶಗಳು ಏಷ್ಯಾದಲ್ಲಿ ಆರ್ಥಿಕ ಬೆಳವಣಿಗೆಯ ಡಬಲ್ ಎಂಜಿನ್‌ಗಳು. ಭಾರತ ಮತ್ತು ಚೀನಾದ ಏಕತೆಯು ಜಗತ್ತಿಗೆ ದೊಡ್ಡ ಪ್ರಯೋಜನವನ್ನು ನೀಡುತ್ತದೆ”ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸುಂಕ ವಿವಾದದ ನಡುವೆ ಪ್ರಧಾನಿ ಮೋದಿಯನ್ನು ಭೇಟಿಯಾದ ಚೀನಾದ ವಿದೇಶಾಂಗ ಸಚಿವ, ಮೊದಲಿನಂತಾಗುತ್ತಾ ಉಭಯ ದೇಶಗಳ ಸಂಬಂಧ?

“ಮುಕ್ತ ವ್ಯಾಪಾರದಿಂದ ಅಮೆರಿಕ ದೀರ್ಘಕಾಲದಿಂದ ಲಾಭ ಪಡೆದಿದೆ. ಆದರೆ ಈಗ ಸುಂಕಗಳನ್ನು ಚೌಕಾಶಿ ಸಾಧನಗಳಾಗಿ ಪರಿಗಣಿಸುತ್ತಿದೆ” ಎಂದು ಕ್ಸು ಫೀಹಾಂಗ್ ಟೀಕಿಸಿದ್ದಾರೆ. “ಅಮೆರಿಕ ಭಾರತದ ಮೇಲೆ ಶೇ. 50ರವರೆಗೆ ಸುಂಕಗಳನ್ನು ವಿಧಿಸಿದೆ. ನಾವು ಮೌನವಾಗಿರುವುದು ಬೆದರಿಸುವವರಿಗೆ ಧೈರ್ಯವನ್ನು ತುಂಬುತ್ತದೆ. ಇದು ಅವರ ಗೂಂಡಾಗಿರಿಯನ್ನು ಹೆಚ್ಚಿಸುತ್ತದೆ. ಚೀನಾ ಭಾರತದೊಂದಿಗೆ ದೃಢವಾಗಿ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತದೊಂದಿಗೆ ಸುಂಕ ಯುದ್ಧ, ಟ್ರಂಪ್ ತನ್ನನ್ನು ತಾನೇ ನಾಶ ಮಾಡಿಕೊಳ್ಳುತ್ತಿದ್ದಾರೆ ಎಂದ ಅಮೆರಿಕ ಅರ್ಥಶಾಸ್ತ್ರಜ್ಞ

“ಚೀನಾದ ಮಾರುಕಟ್ಟೆಗೆ ಹೆಚ್ಚಿನ ಭಾರತೀಯ ಸರಕುಗಳನ್ನು ಪ್ರವೇಶಿಸಲು ನಾವು ಸ್ವಾಗತಿಸುತ್ತೇವೆ. ಭಾರತವು ಐಟಿ, ಸಾಫ್ಟ್‌ವೇರ್ ಮತ್ತು ಬಯೋಮೆಡಿಸಿನ್‌ನಲ್ಲಿ ಬಹಳ ಮುಂದಿದೆ. ಆದರೆ ಚೀನಿಯರು ಎಲೆಕ್ಟ್ರಾನಿಕ್ ಉತ್ಪಾದನೆ, ಮೂಲಸೌಕರ್ಯ ನಿರ್ಮಾಣ ಮತ್ತು ಹೊಸ ಇಂಧನ ಕ್ಷೇತ್ರಗಳಲ್ಲಿ ತ್ವರಿತ ವಿಸ್ತರಣೆಯನ್ನು ನೋಡುತ್ತಿದ್ದಾರೆ” ಎಂದು ಫೀಹಾಂಗ್ ಹೇಳಿದ್ದಾರೆ. ಚೀನಾ ಮತ್ತು ಭಾರತದ ನಡುವಿನ ಕಾರ್ಯತಂತ್ರದ ನಂಬಿಕೆ ಮತ್ತು ಸಹಕಾರವನ್ನು ಬಲಪಡಿಸುವ ಮಹತ್ವವನ್ನು ಕ್ಸು ಫೀಹಾಂಗ್ ಒತ್ತಿ ಹೇಳಿದರು. ಹಾಗೇ, ಎರಡೂ ದೇಶಗಳು ಪ್ರತಿಸ್ಪರ್ಧಿಗಳಲ್ಲ; ಪಾಲುದಾರರು. ಏನೇ ಸಮಸ್ಯೆಯಿದ್ದರೂ ಮಾತುಕತೆಯ ಮೂಲಕ ಅದನ್ನು ಬಗೆಹರಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಚೀನಾ ಪವಿತ್ರ ಪರ್ವತ ಮತ್ತು ಸರೋವರಕ್ಕೆ ಭಾರತೀಯ ಯಾತ್ರಿಕರ ಭೇಟಿಯನ್ನು ಪುನರಾರಂಭಿಸಿದೆ. ಭಾರತವು ಚೀನೀ ಪ್ರಜೆಗಳಿಗೆ ಪ್ರವಾಸಿ ವೀಸಾಗಳನ್ನು ನೀಡುವುದನ್ನು ಪುನರಾರಂಭಿಸಿದೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ