AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Covid Cases: ಚೀನಾದಲ್ಲಿ ಕೋವಿಡ್ ರೂಪಾಂತರಿಯ ಹೊಸ ಅಲೆ, ಜೂನ್​ನಲ್ಲಿ ಸೋಂಕಿನ ಪ್ರಮಾಣ ಉತ್ತುಂಗಕ್ಕೇರಲಿದೆ

ಚೀನಾದಲ್ಲಿ  ಕೋವಿಡ್ ರೂಪಾಂತರಿಯ ಹೊಸ ಅಲೆಯು ಜೂನ್​ನಲ್ಲಿ ಉತ್ತುಂಗಕ್ಕೇರಲಿದೆ ಎನ್ನುವ ಎಚ್ಚರಿಕೆ ದೊರೆತಿದೆ. ಕೊರೊನಾ ವೈರಸ್‌ನ ಹೊಸ ಅಲೆಯ ಬಗ್ಗೆ ಚೀನಾದ ಅಧಿಕಾರಿಗಳು ಈಗಾಗಲೇ ಎಚ್ಚರಿಕೆ ವಹಿಸಿದ್ದಾರೆ.

China Covid Cases: ಚೀನಾದಲ್ಲಿ ಕೋವಿಡ್ ರೂಪಾಂತರಿಯ ಹೊಸ ಅಲೆ, ಜೂನ್​ನಲ್ಲಿ ಸೋಂಕಿನ ಪ್ರಮಾಣ ಉತ್ತುಂಗಕ್ಕೇರಲಿದೆ
ಚೀನಾ ಕೊರೊನಾ
ನಯನಾ ರಾಜೀವ್
|

Updated on: May 26, 2023 | 11:56 AM

Share

ಚೀನಾದಲ್ಲಿ  ಕೋವಿಡ್ ರೂಪಾಂತರಿಯ ಹೊಸ ಅಲೆಯು ಜೂನ್​ನಲ್ಲಿ ಉತ್ತುಂಗಕ್ಕೇರಲಿದೆ ಎನ್ನುವ ಎಚ್ಚರಿಕೆ ದೊರೆತಿದೆ. ಕೊರೊನಾ ವೈರಸ್‌ನ ಹೊಸ ಅಲೆಯ ಬಗ್ಗೆ ಚೀನಾದ ಅಧಿಕಾರಿಗಳು ಈಗಾಗಲೇ ಎಚ್ಚರಿಕೆ ವಹಿಸಿದ್ದಾರೆ. ವಾಸ್ತವವಾಗಿ, ಚೀನಾದ ಅಧಿಕಾರಿಗಳು ಕೋವಿಡ್‌ನ ಹೊಸ ರೂಪಾಂತರವನ್ನು ಎದುರಿಸಲು ಲಸಿಕೆಗಳನ್ನು ತೆಗೆದುಕೊಳ್ಳಲು ಒತ್ತಾಯಿಸುತ್ತಿದ್ದಾರೆ. ಜೂನ್ ವೇಳೆಗೆ ಈ ಹೊಸ ರೂಪಾಂತರವು ದೇಶದಾದ್ಯಂತ ವೇಗವಾಗಿ ಹರಡುತ್ತದೆ ಮತ್ತು ಆ ಸಮಯದಲ್ಲಿ ವಾರಕ್ಕೆ ಸುಮಾರು 65 ಮಿಲಿಯನ್ ಜನರಿಗೆ ಸೋಂಕು ತಗುಲಬಹುದು ಎಂದು ಅಂದಾಜಿಸಲಾಗಿದೆ. XBB ರೂಪಾಂತರಿಯು ದಿನದಿಂದ ದಿನಕ್ಕೆ ಸೋಂಕನ್ನು ಹೆಚ್ಚಿಸುತ್ತಿದೆ.

ಚೀನಾ ತನ್ನ ಶೂನ್ಯ-ಕೋವಿಡ್ ನೀತಿಯನ್ನು ಕೊನೆಗೊಳಿಸಿದ ನಂತರ ಇದು ಬಹುದೊಡ್ಡ ಕೊರೊನಾ ಅಲೆ ಎಂದು ಹೇಳಲಾಗುತ್ತಿದೆ. ಆದರೆ ಅಲೆಯನ್ನು ಎದುರಿಸಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಸಾವಿನ ಪ್ರಮಾಣದಲ್ಲಿ ಮತ್ತೊಂದು ಉಲ್ಬಣವು ಸಂಭವಿಸಬಹುದು ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಭಯಪಟ್ಟಿದ್ದಾರೆ.

ಮತ್ತಷ್ಟು ಓದಿ: ದೇಶದಲ್ಲಿ ಕೋವಿಡ್ ಪ್ರಕರಣ ಏರಿಕೆ; ಸೋಂಕು ಹರಡದಂತೆ ಕಟ್ಟುನಿಟ್ಟಾದ ನಿಗಾ ವಹಿಸಲು 6 ರಾಜ್ಯಗಳಿಗೆ ಕೇಂದ್ರ ಪತ್ರ

ಬೀಜಿಂಗ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಪ್ರಕಾರ, ಕಳೆದ ತಿಂಗಳಿಗೆ ಹೋಲಿಸಿದರೆ ಈ ಹೊಸ ರೂಪಾಂತರದಿಂದಾಗಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಆದರೆ ಸೌಮ್ಯ ಲಕ್ಷಣಗಳು ಕಂಡುಬರುತ್ತಿವೆ ಎಂದು ಚೀನಾದ ಜನರಿಗೆ ಆರೋಗ್ಯ ತಜ್ಞರು ಹೇಳಿದ್ದಾರೆ. ಆದರೆ ಕಳೆದ ಚಳಿಗಾಲದಂತೆ ಆಸ್ಪತ್ರೆಗಳು ಕಿಕ್ಕಿರಿದು ತುಂಬುವುದಿಲ್ಲ. ಜನಸಂದಣಿ ಇರುವ ಪ್ರದೇಶಗಳಿಂದ ದೂರವಿರಿ ಮತ್ತು ಮಾಸ್ಕ್ ಧರಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸೋಂಕುಗಳ ಹೆಚ್ಚಳ ಕಂಡುಬಂದರೂ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯು ಮೇ 11 ರಂದು ಕೊನೆಗೊಂಡಿತು, ಆದಾಗ್ಯೂ ತಜ್ಞರು ಹೊಸ ರೂಪಾಂತರಗಳ ಸಾಧ್ಯತೆಯನ್ನು ತಳ್ಳಿಹಾಕಲಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ