AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಯೆಟ್ನಾಂನ ಡ್ರ್ಯಾಗನ್ ಹಣ್ಣಿನಲ್ಲೂ ಕೊರೊನಾ ವೈರಸ್ ಪತ್ತೆ; ಚೀನಾದಲ್ಲಿ ಸೂಪರ್ ಮಾರ್ಕೆಟ್​ಗಳು ಬಂದ್

ಚೀನಾದ ಝೆಜಿಯಾಂಗ್ ಮತ್ತು ಜಿಯಾಂಗ್ಕ್ಸಿ ಪ್ರಾಂತ್ಯಗಳ ಕನಿಷ್ಠ 9 ನಗರಗಳಲ್ಲಿ ವಿಯೆಟ್ನಾಂನಿಂದ ಆಮದು ಮಾಡಿಕೊಂಡ ಡ್ರ್ಯಾಗನ್ ಹಣ್ಣಿನಲ್ಲಿ ಕೊವಿಡ್ ವೈರಸ್ ಮಾದರಿಗಳು ಪತ್ತೆಯಾಗಿವೆ ಎನ್ನಲಾಗಿದೆ.

ವಿಯೆಟ್ನಾಂನ ಡ್ರ್ಯಾಗನ್ ಹಣ್ಣಿನಲ್ಲೂ ಕೊರೊನಾ ವೈರಸ್ ಪತ್ತೆ; ಚೀನಾದಲ್ಲಿ ಸೂಪರ್ ಮಾರ್ಕೆಟ್​ಗಳು ಬಂದ್
ಡ್ರ್ಯಾಗನ್ ಫ್ರೂಟ್
TV9 Web
| Updated By: ಸುಷ್ಮಾ ಚಕ್ರೆ|

Updated on: Jan 06, 2022 | 3:57 PM

Share

ವಿಯೆಟ್ನಾಂ: ವಿಯೆಟ್ನಾಂನಿಂದ ಆಮದು ಮಾಡಿಕೊಂಡ ಹಣ್ಣುಗಳಲ್ಲಿ ಕೊರೊನಾವೈರಸ್ ಕುರುಹುಗಳು ಕಂಡುಬಂದ ಹಿನ್ನೆಲೆಯಲ್ಲಿ ಚೀನಾದ ಅಧಿಕಾರಿಗಳು ಹಲವಾರು ಸೂಪರ್ ಮಾರ್ಕೆಟ್​ಗಳನ್ನು ಬಂದ್ ಮಾಡಿದ್ದಾರೆ. ಚೀನಾದ ಝೆಜಿಯಾಂಗ್ ಮತ್ತು ಜಿಯಾಂಗ್ಕ್ಸಿ ಪ್ರಾಂತ್ಯಗಳ ಕನಿಷ್ಠ 9 ನಗರಗಳಲ್ಲಿ ವಿಯೆಟ್ನಾಂನಿಂದ ಆಮದು ಮಾಡಿಕೊಂಡ ಡ್ರ್ಯಾಗನ್ ಹಣ್ಣಿನಲ್ಲಿ ಕೊವಿಡ್ ವೈರಸ್ ಮಾದರಿಗಳು ಪತ್ತೆಯಾಗಿವೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಚೀನಾದ ಅಧಿಕಾರಿಗಳು ಆಮದು ಮಾಡಿಕೊಂಡ ಆಹಾರ ಉತ್ಪನ್ನಗಳ ತುರ್ತು ತಪಾಸಣೆಯನ್ನು ಪ್ರಾರಂಭಿಸಿದ್ದಾರೆ. ಹಣ್ಣು ಖರೀದಿದಾರರು ಎಚ್ಚರ ವಹಿಸಲು ಆದೇಶಿಸಿದ್ದಾರೆ. ಆದರೆ ಆಹಾರದಿಂದ ಕೊರೊನಾವೈರಸ್ ಹರಡಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಿದ್ದರೂ ಚೀನಾದ ಆರೋಗ್ಯ ಅಧಿಕಾರಿಗಳು ಚೀನಾ ದೇಶವು ವೈರಸ್ ಅಲೆಯೊಂದಿಗೆ ಹೋರಾಡುತ್ತಿರುವುದರಿಂದ ಹೆಚ್ಚು ಎಚ್ಚರ ವಹಿಸಿದ್ದಾರೆ.

ಡಿಸೆಂಬರ್ ಕೊನೆಯ ವಾರದಲ್ಲಿ ಕೊವಿಡ್-19 ಕುರುಹುಗಳು ಪತ್ತೆಯಾಗಿದ್ದರಿಂದ ಚೀನಾ ಈ ಹಿಂದೆ ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳುವ ಡ್ರ್ಯಾಗನ್ ಹಣ್ಣಿನ ಮೇಲೆ ಜನವರಿ 26ರವರೆಗೆ ನಿಷೇಧ ಹೇರಿತ್ತು. ಚೀನಾಕ್ಕೆ ಡ್ರ್ಯಾಗನ್ ಫ್ರೂಟ್ ಕಳುಹಿಸುವ ಲ್ಯಾಂಗ್ ಸನ್ ಪ್ರಾಂತ್ಯದ ಹುಯು ಘಿ ಬಾರ್ಡರ್ ಗೇಟ್ ಮೇಲೆ ನಿಷೇಧ ಹೇರಲಾಗಿದೆ. ಕಂಟೈನರ್ ಟ್ರಕ್‌ಗಳನ್ನು ಹಿಂದಕ್ಕೆ ಕಳುಹಿಸಿದ್ದರಿಂದ ಅಧಿಕಾರಿಗಳು ಟಾನ್ ಥಾನ್ ಎಂಬ ಮತ್ತೊಂದು ಗಡಿ ಗೇಟ್‌ನಿಂದ ಡ್ರ್ಯಾಗನ್ ಹಣ್ಣಿನ ಆಮದನ್ನು ನಿಷೇಧಿಸಿದ್ದಾರೆ.

China Closed supermarkets

ಡ್ರ್ಯಾಗನ್ ಫ್ರೂಟ್

ಮುಂದಿನ ತಿಂಗಳು ಚಳಿಗಾಲದ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಚೀನಾ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾವೈರಸ್ ಅನ್ನು ಎದುರಿಸಲು ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ. ಕೊವಿಡ್ ಪ್ರಕರಣಗಳ ಉಲ್ಬಣದ ಮಧ್ಯೆ ಚೀನಾದಲ್ಲಿ ಲಾಕ್‌ಡೌನ್ ಮಾಡಲಾಗಿದೆ.

ಇದನ್ನೂ ಓದಿ: ಕೊವಿಡ್ ಉಲ್ಬಣದ ನಡುವೆ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿನ ಪರಿಸ್ಥಿತಿಯ ಕುರಿತು ಚುನಾವಣಾ ಆಯೋಗಕ್ಕೆ ಕೇಂದ್ರ ವಿವರಣೆ

ಅಮೆರಿಕಾದ ಶ್ವೇತ ಭವನದಲ್ಲಿ ಕ್ವಾಡ್ ರಾಷ್ಟ್ರಗಳ ನಾಯಕರ ಸಭೆ; ಚೀನಾ, ಕೊವಿಡ್, ಹವಾಮಾನ, ರಕ್ಷಣಾ ವಿಚಾರಗಳ ಚರ್ಚೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?