China Covid Updates: ಮುಂದಿನ 90 ದಿನಗಳಲ್ಲಿ ಚೀನಾದ ಶೇ.60ರಷ್ಟು ಜನತೆ ಕೊರೊನಾ ಸೋಂಕಿಗೆ ಒಳಗಾಗಬಹುದು: ಲಕ್ಷಾಂತರ ಮಂದಿ ಸಾಯಬಹುದು

ಚೀನಾದಲ್ಲಿ ಮುಂದಿನ 90 ದಿನಗಳಲ್ಲಿ ಶೇ.60 ರಷ್ಟು ಮಂದಿ ಕೊರೊನಾ(Corona) ಸೋಂಕಿಗೆ ತುತ್ತಾಗಲಿದ್ದು, ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಳ್ಳಬಹುದು ಎಂದು ಸಾಂಕ್ರಾಮಿಕ ರೋಗ ಶಾಸ್ತ್ರಜ್ಞ ಎರಿಕ್ ಫೀಗಲ್ ಹೇಳಿದ್ದಾರೆ.

China Covid Updates: ಮುಂದಿನ 90 ದಿನಗಳಲ್ಲಿ ಚೀನಾದ ಶೇ.60ರಷ್ಟು ಜನತೆ ಕೊರೊನಾ ಸೋಂಕಿಗೆ ಒಳಗಾಗಬಹುದು: ಲಕ್ಷಾಂತರ ಮಂದಿ ಸಾಯಬಹುದು
China Covid Updates
Follow us
| Updated By: ನಯನಾ ರಾಜೀವ್

Updated on: Dec 20, 2022 | 9:36 AM

ಚೀನಾದಲ್ಲಿ ಮುಂದಿನ 90 ದಿನಗಳಲ್ಲಿ ಶೇ.60 ರಷ್ಟು ಮಂದಿ ಕೊರೊನಾ(Corona) ಸೋಂಕಿಗೆ ತುತ್ತಾಗಲಿದ್ದು, ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಳ್ಳಬಹುದು ಎಂದು ಸಾಂಕ್ರಾಮಿಕ ರೋಗ ಶಾಸ್ತ್ರಜ್ಞ ಎರಿಕ್ ಫೀಗಲ್ ಹೇಳಿದ್ದಾರೆ. ಮುಂದಿನ 90 ದಿನಗಳಲ್ಲಿ ಚೀನಾದ ಶೇಕಡಾ 60 ಕ್ಕಿಂತ ಹೆಚ್ಚು ಜನರು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಅಂದಾಜಿಸಿದ್ದಾರೆ ಮತ್ತು ಲಕ್ಷಾಂತರ ಜನರು ಸಾವನ್ನಪ್ಪುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಕೋವಿಡ್​-19 ರೋಗಗಿಗಳಿಗಾಗಿಯೇ ಬೀಜಿಂಗ್​ನಲ್ಲಿ ಮೀಸಲಿಟ್ಟಿರುವ ಸ್ಮಶಾನವು ಈಗಾಗಲೇ ಮೃತದೇಹಗಳಿಂದ ತುಂಬಿದೆ. ಏಕೆಂದರೆ ವೈರಸ್ ಚೀನಾದ ರಾಜಧಾನಿಯ ಮೂಲಕ ವ್ಯಾಪಿಸುತ್ತಿದೆ, ಇದು ದೇಶದ ಸಾಂಕ್ರಾಮಿಕ ನಿರ್ಬಂಧಗಳ ಹಠಾತ್ ಸಡಿಲಗೊಳಿಸುವಿಕೆಯ ಕಾರಣದಿಂದಾಗಿ ಏಕಾಏಕಿ ಹೆಚ್ಚುತ್ತಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಮತ್ತಷ್ಟು ಓದಿ: China Covid Updates: ಚೀನಾದಲ್ಲಿ 2023ರ ವೇಳೆಗೆ 1 ಮಿಲಿಯನ್ ಮಂದಿ ಕೋವಿಡ್​ನಿಂದ ಸಾವಿಗೀಡಾಗಬಹುದು: ವರದಿ

ಸದಾ ತನ್ನ ವೈಫಲ್ಯವನ್ನು  ಮುಚ್ಚಿಡಲು ಯತ್ನಿಸುವ ಚೀನಾ ಸರ್ಕಾರವು ಕೋವಿಡ್‌ನಿಂದ ಸಾವಿಗೀಡಾದವರ ಅಧಿಕೃತ ಅಂಕಿಸಂಖ್ಯೆಯನ್ನು ಸರಿಯಾಗಿ ನೀಡುತ್ತಿಲ್ಲ. ಡಿ.4ರಿಂದ ಕೋವಿಡ್‌ ಸಾವಿನ ಪ್ರಕಟಣೆಯನ್ನೇ ಅದು ನಿಲ್ಲಿಸಿದೆ. ಇದಲ್ಲದೆ ಕೋವಿಡ್‌ ಹಾವಳಿ 3 ವರ್ಷದಿಂದ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಕೇವಲ 5,235 ಜನರು ಮಾತ್ರ ಸೋಂಕಿಗೆ (Virus) ಬಲಿಯಾಗಿದ್ದಾರೆ ಎಂದು ಸರ್ಕಾರ ಹೇಳುತ್ತದೆ.

ಆದರೆ ಬೀಜಿಂಗ್‌ ಹಾಗೂ ಚೀನಾದ ಇತರ ನಗರಗಳ ಬೀದಿ, ರುದ್ರಭೂಮಿಗಳಲ್ಲಿ ಸಂಚರಿಸಿದಾಗ ವಾಸ್ತವಿಕ ಚಿತ್ರಣವೇ ಬೇರೆ ಗೋಚರಿಸುತ್ತಿದೆ. ಮಾಧ್ಯಮ ಪ್ರತಿನಿಧಿಗಳು ಬೀಜಿಂಗ್‌ನ ಮೈಯುನ್‌ ಚಿತಾಗಾರಕ್ಕೆ ಹೋದಾಗ ಅಲ್ಲಿ, ಭಾರಿ ಪ್ರಮಾಣದ ಶವಗಳ ಸಾಲು ಕಂಡುಬಂದಿತ್ತು.

ಇದಲ್ಲದೆ, ಅನೇಕ ಶವಗಳು ಇನ್ನೂ ಕಾರಿನಲ್ಲೇ ಇವೆ’ ಎಂದು ಕೆಲವರು ಹೇಳಿದರು. ಚಿತಾಗಾರದ ಸಿಬ್ಬಂದಿಗಳು, ‘ನಮ್ಮ ಸಾಕಷ್ಟುನೌಕರರಿಗೆ ಕೋವಿಡ್‌ ಬಂದಿದೆ. ಹೀಗಾಗಿ ಶವ ಸುಡಲೂ ಸಿಬ್ಬಂದಿ ಕೊರತೆ ಇದೆ. ಇದ್ದ ಸಿಬ್ಬಂದಿಯೇ ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇವೆ ಎಂದರು.

ನವೆಂಬರ್ 19 ಮತ್ತು 23 ರ ನಡುವೆ ಅಧಿಕಾರಿಗಳು ನಾಲ್ಕು ಸಾವುಗಳು ವರದಿಯಾಗಿವೆ ಅದನ್ನು ಹೊರತುಪಡಿಸಿ ಚೀನಾ ಬೀಜಿಂಗ್‌ನಲ್ಲಿ ಯಾವುದೇ ಕೋವಿಡ್ ಸಾವುಗಳು ವರದಿಯಾಗಿಲ್ಲ. ವಿಶ್ವದಾದ್ಯಂತ ಹೊಸ ಕೋವಿಡ್‌ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದ್ದರೂ, ಸೋಂಕಿನ ಮೇಲೆ ನಿಗಾ, ಸೋಂಕಿತರ ಪತ್ತೆಗೆ ಪರೀಕ್ಷೆ , ಹೊಸ ತಳಿಗಳ ಪತ್ತೆಗೆ ಸ್ವೀಕ್ಸೆನ್ಸಿಂಗ್‌, ಲಸಿಕಾಕರಣದಲ್ಲಿನ ನಿರ್ಲಕ್ಷ್ಯವು ಹೊಸ ಕುಲಾಂತರಿ ಉಗಮಕ್ಕೆ ವೇದಿಕೆ ಸೃಷ್ಟಿಸಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮುಖ್ಯಸ್ಥ ಟೆಡ್ರೋಸ್‌ ಅಧನೋಮ್‌ ಹೇಳಿದ್ದಾರೆ.

ನಾವು ಕೋವಿಡ್‌ ಸಾಂಕ್ರಾಮಿಕದ ಅಂತ್ಯದ ಹತ್ತಿರದಲ್ಲಿದ್ದೇವೆಯೇ ಹೊರತೂ, ಸಾಂಕ್ರಾಮಿಕ ಇನ್ನೂ ಅಂತ್ಯಗೊಂಡಿಲ್ಲ. ಹೀಗಾಗಿ ಎಚ್ಚರಿಕೆ ಅಗತ್ಯ ಎಂದು ಹೇಳಿದ್ದಾರೆ. ಚೀನಾ ಮತ್ತು ಬ್ರಿಟನ್‌ನ ಕೆಲ ಭಾಗಗಳಲ್ಲಿ ಮತ್ತೆ ಹೊಸ ಕೋವಿಡ್‌ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೇ ಟೆಡ್ರೋಸ್‌ ಈ ಹೇಳಿಕೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ