AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Covid: ದೈನಂದಿನ ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡುವಂತೆ ಚೀನಾಗೆ ಡಬ್ಲ್ಯುಎಚ್​ಒ ತಾಕೀತು

ಚೀನಾದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪರಿಸ್ಥಿತಿ ಶೋಚನೀಯವಾಗಿದೆ. ಕೊರೊನಾ ಸ್ಥಿತಿಗತಿ ಬಗ್ಗೆ ನಿಖರ ಮಾಹಿತಿ ನೀಡುವಂತೆ ಚೀನಾಗೆ ಡಬ್ಲ್ಯುಎಚ್​ಒ ತಾಕೀತು ಮಾಡಿದೆ.

China Covid: ದೈನಂದಿನ ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡುವಂತೆ ಚೀನಾಗೆ ಡಬ್ಲ್ಯುಎಚ್​ಒ ತಾಕೀತು
ಸಂಗ್ರಹ ಚಿತ್ರ
Follow us
TV9 Web
| Updated By: Rakesh Nayak Manchi

Updated on:Dec 31, 2022 | 7:41 AM

ಜಿನಿವಾ (ಸ್ವಿಟ್ಜರ್ಲೆಂಡ್): ಚೀನಾದಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು (Covid Cases) ಇದೀಗ ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಚೀನಾದಲ್ಲಿ (China Coronavirus Variant) ಕಾಣಿಸಿಕೊಂಡಿರುವ ಕೋವಿಡ್​ನ ಬಿಎಫ್​.7 (BF.7) ಉಪರೂಪಾಂತರಿ ಕೊವಿಡ್​ ಪ್ರಕರಣಗಳ ಭಾರೀ ಏರಿಕೆಗೆ ಕಾರಣವಾಗಬಹುದು ಎನ್ನಲಾಗುತ್ತಿದೆ. ಚೀನಾದಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ್ದು, ಕೊರೊನಾ ಸ್ಥಿತಿಗತಿ ಬಗ್ಗೆ ನಿಖರ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪರಿಸ್ಥಿತಿ ಶೋಚನೀಯವಾಗಿದೆ. ದೈನಂದಿನ ಕೋವಿಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡುವಂತೆ ಚೀನಾಗೆ ಡಬ್ಲ್ಯುಹೆಚ್​ಒ (WHO) ತಾಕೀತು ಮಾಡಿದೆ.

ಕೊರೊನಾವೈರಸ್‌ನ ಬಿಎ.5 ಉಪರೂಪಾಂತರಿ ಕೂಡ ಮನುಷ್ಯನ ಮೆದುಳಿನ ಮೇಲೆ ದಾಳಿ ಮಾಡಲು ವಿಕಸನಗೊಳ್ಳುತ್ತಿರಬಹುದು ಎಂದು ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಜ್ಞಾನಿಗಳ ಹೊಸ ಅಧ್ಯಯನವು ಕೊವಿಡ್ ವೈರಸ್‌ಗಳು ವಿಕಸನಗೊಂಡಂತೆ ಕಡಿಮೆ ಅಪಾಯಕಾರಿಯಾಗುತ್ತವೆ ಎಂಬ ಊಹೆಗಳಿಗೆ ಸವಾಲು ಹಾಕಿದೆ. ಕೊವಿಡ್ -19 ಮಾನವನ ದೇಹದ ಮೇಲೆ ದಾಳಿ ಮಾಡುವ ಮಾರ್ಗವನ್ನು ಬದಲಾಯಿಸುತ್ತಿರಬಹುದು ಮತ್ತು ಮನುಷ್ಯನ ಉಸಿರಾಟದ ವ್ಯವಸ್ಥೆಯ ಬದಲಿಗೆ ಮೆದುಳನ್ನು ಹೆಚ್ಚು ಗುರಿಯಾಗಿಸಿಕೊಳ್ಳುತ್ತಿರಬಹುದು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

ಇದನ್ನೂ ಓದಿ: Covid-19 4th Wave: ಚೀನಾದ ಹೊಸ ಕೊವಿಡ್ ರೂಪಾಂತರಿ ಮನುಷ್ಯನ ಮೆದುಳಿನ ಮೇಲೆ ದಾಳಿ ಮಾಡುತ್ತದಾ?; ತಜ್ಞರು ಹೇಳೋದಿಷ್ಟು

ಹಿಂದಿನ BA.1 ಸಬ್‌ವೇರಿಯಂಟ್‌ಗೆ ಹೋಲಿಸಿದರೆ ಚೀನಾದಲ್ಲಿ ಇದೀಗ ಕಾಣಿಸಿಕೊಂಡಿರುವ BF.7 ಉಪರೂಪಾಂತರಿ ಹೆಚ್ಚು ಆತಂಕಕಾರಿಯಾಗಿದೆ. ಇದಕ್ಕೂ ಹಿಂದೆ ಇದ್ದ BA.5 ಎಂಬ ಸಬ್‌ವೇರಿಯಂಟ್ ಇಲಿಗಳ ಮಿದುಳುಗಳು ಮತ್ತು ಮಾನವ ಮೆದುಳಿನ ಅಂಗಾಂಶಗಳಿಗೆ ತೀವ್ರ ಹಾನಿಯನ್ನುಂಟುಮಾಡಿದೆ ಎಂದು ಆಸ್ಟ್ರೇಲಿಯಾ ಮತ್ತು ಫ್ರಾನ್ಸ್‌ನ ಸಂಶೋಧಕರು ಹೇಳಿದ್ದಾರೆ. ಮೆದುಳಿನ ಮೇಲಿನ ದಾಳಿಯು ಮೆದುಳಿನ ಉರಿಯೂತ, ತೂಕ ಕಡಿಮೆಯಾಗುವುದು ಮತ್ತು ಸಾವಿಗೂ ಕಾರಣವಾಗಿದೆ ಎಂದು ಚೀನಾ ಮೂಲದ ದಿನಪತ್ರಿಕೆ ವರದಿ ಮಾಡಿದೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:41 am, Sat, 31 December 22

ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್