AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ಶಸ್ತ್ರ ಚಿಕಿತ್ಸೆ ವೇಳೆ ರೋಗಿಗೆ ಥಳಿಸಿದ ವೈದ್ಯ ಅಮಾನತು

ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರೊಬ್ಬರು ರೋಗಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದ್ದು, ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ, 82 ವರ್ಷದ ಮಹಿಳೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದಾಗ ಈ ಘಟನೆ ನಡೆದಿದೆ. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ರೋಗಿ ಅವರದ್ದೇ ಸ್ಥಳೀಯ ಭಾಷೆಯಲ್ಲಿ ಮಾತನಾಡುತ್ತಿದ್ದರು, ಅದು ವೈದ್ಯರಿಗೆ ಅರ್ಥವಾಗುತ್ತಿರಲಿಲ್ಲ, ಕೋಪಗೊಂಡು ರೋಗಿಯ ತಲೆಗೆ ಮೂರು ಬಾರಿ ವೈದ್ಯ ಹೊಡೆದಿದ್ದಾರೆ.

ಚೀನಾ: ಶಸ್ತ್ರ ಚಿಕಿತ್ಸೆ ವೇಳೆ ರೋಗಿಗೆ ಥಳಿಸಿದ ವೈದ್ಯ ಅಮಾನತು
ವೈದ್ಯರು-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Dec 27, 2023 | 11:57 AM

Share

ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರೊಬ್ಬರು ರೋಗಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದ್ದು, ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ, 82 ವರ್ಷದ ಮಹಿಳೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದಾಗ ಈ ಘಟನೆ ನಡೆದಿದೆ. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ರೋಗಿ ಅವರದ್ದೇ ಸ್ಥಳೀಯ ಭಾಷೆಯಲ್ಲಿ ಮಾತನಾಡುತ್ತಿದ್ದರು, ಅದು ವೈದ್ಯರಿಗೆ ಅರ್ಥವಾಗುತ್ತಿರಲಿಲ್ಲ, ಕೋಪಗೊಂಡು ರೋಗಿಯ ತಲೆಗೆ ಮೂರು ಬಾರಿ ವೈದ್ಯ ಹೊಡೆದಿದ್ದಾರೆ.

ಆಘಾತಕಾರಿ ಘಟನೆಯು 2019 ರಲ್ಲಿ ಚೀನಾದ ಗೈಗಾಂಗ್‌ನಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಬಿಬಿಸಿ ವರದಿ ಮಾಡಿದೆ. ಸಂಪೂರ್ಣ ಘಟನೆಯನ್ನು ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಲಾಗಿದೆ.

ವುಹಾನ್​ನಲ್ಲಿ ಕೊರೊನಾ ಸೋಂಕು ಹರಡುತ್ತಿದೆ ಎಂದು ಆರಂಭದಲ್ಲೇ ಎಚ್ಚರಿಕೆ ನೀಡಿದ್ದ ವೈದ್ಯರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಮತ್ತಷ್ಟು ಓದಿ: ಪ್ರತ್ಯೇಕ ಘಟನೆ: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು, ಹಾಸನದಲ್ಲಿ ಕೋಟೆ ನೋಡಲು ಬಂದು ಕಾಲು ಜಾರಿ ಬಿದ್ದಿದ್ದ ಯುವಕ ಪಾರು

ಶಸ್ತ್ರಚಿಕಿತ್ಸೆ ವೇಳೆ ರೋಗಿಗೆ ಅರವಳಿಕೆ ನೀಡಲಾಗಿತ್ತು. ಆ ಸಮಯದಲ್ಲಿ ಏನೇ ಹೇಳಿದರೂ ರೋಗಿಗೆ ಅರ್ಥವಾಗುತ್ತಿರಲಿಲ್ಲ, ಕಣ್ಣುಗಳನ್ನು ಆ ಕಡೆ ಈ ಕಡೆ ಚಲಿಸುತ್ತಿದ್ದರು, ಎಷ್ಟೇ ಹೇಳಿದರು ಪ್ರಯೋಜನವಾಗಲಿಲ್ಲ. ವೈದ್ಯರ ಭಾಷೆಯೂ ರೋಗಿಗೆ ಅರ್ಥವಾಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ಸಮಯದಲ್ಲಿ ಅರವಳಿಕೆಯಿಂದಾಗಿ ಮಂಪರಿದ್ದ ಕಾರಣ ರೋಗಿ ತಮ್ಮ ಕಣ್ಣುಗಳನ್ನು ಸ್ಪರ್ಶಿಸಲು ಪ್ರಯತ್ನಿಸುತ್ತಿದ್ದರು. ಸ್ಪರ್ಶಿಸಿದರೆ ಸೋಂಕಿಗೆ ಕಾರಣವಾಗಬಹುದು ಎಂದು ಹೊಡೆದಿದ್ದೇನೆ ಎಂದು ವೈದ್ಯರು ಹೇಳಿದ್ದಾರೆ.

ವೃದ್ಧೆಯೊಬ್ಬರ ಬಳಿ ಅಮಾನವೀಯವಾಗಿ ನಡೆದುಕೊಂಡಿದ್ದಕ್ಕೆ, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬಳಿಕ ಆಸ್ಪತ್ರೆ ಆಡಳಿತ ವೈದ್ಯರನ್ನು ಅಮಾನತುಗೊಳಿಸಿದೆ. ಆಸ್ಪತ್ರೆಯು ಕ್ಷಮೆಯಾಚಿಸಿ 500 ಯುವಾನ್ ಪರಿಹಾರ ನೀಡಿತು. ಆ ಘಟನೆಯಿಂದಾಗಿ ಎಡ ಕಣ್ಣಿನ ದೃಷ್ಟಿಯೇ ಹೋಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!