ವಾಯವ್ಯ ಚೀನಾದಲ್ಲಿ ಪ್ರಬಲ ಭೂಕಂಪ: ನೂರಕ್ಕೂ ಹೆಚ್ಚು ಜನ ಸಾವು

China Earthquake: ವಾಯವ್ಯ ಚೀನಾದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಇದುವರೆಗೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಮಾರು 200 ಮಂದಿ ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಭೂಕಂಪದಲ್ಲಿ ಕೆಲವು ಕಟ್ಟಡಗಳು ಸಹ ನಾಶವಾಗಿವೆ. ಸದ್ಯ ಜನರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.

ವಾಯವ್ಯ ಚೀನಾದಲ್ಲಿ ಪ್ರಬಲ ಭೂಕಂಪ: ನೂರಕ್ಕೂ ಹೆಚ್ಚು ಜನ ಸಾವು
ವಾಯವ್ಯ ಚೀನಾದಲ್ಲಿ ಪ್ರಬಲ ಭೂಕಂಪ: ನೂರಕ್ಕೂ ಹೆಚ್ಚು ಜನ ಸಾವು
Follow us
|

Updated on:Dec 19, 2023 | 8:33 AM

ಬೀಜಿಂಗ್, ಡಿಸೆಂಬರ್ 19: ವಾಯವ್ಯ ಚೀನಾದ (China) ಹಲವೆಡೆ ಸಂಭವಿಸಿದ ಭೂಕಂಪದಿಂದಾಗಿ (Earthquake) 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.9 ರಷ್ಟಿತ್ತು ಎನ್ನಲಾಗಿದೆ. ವಾಯವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ದುರಂತದಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ‘ಕ್ಸಿನ್ಹುವಾ’ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ‘ಎಪಿ’ ವರದಿ ಮಾಡಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ,ಭೂಕಂಪದಿಂದ ಹತ್ತಾರು ಕಟ್ಟಡಗಳು ನಾಶವಾಗಿವೆ. ಸದ್ಯ ಅವಶೇಷಗಡಳಡಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪವು ಲಿನ್ಕ್ಸಿಯಾ ಚೆಂಗ್ಗುವಾನ್ಜೆನ್, ಗನ್ಸು ಮತ್ತು ಗನ್ಸುವಿನ ಲಾಂಜೌದಿಂದ ಸುಮಾರು 100 ಕಿಮೀ ದೂರದಲ್ಲಿ ಸಂಭವಿಸಿದೆ. ಭೂಕಂಪವು ಸುಮಾರು 10 ಕಿಲೋಮೀಟರ್ ಆಳದಲ್ಲಿ ಕೇಂದ್ರಿತವಾಗಿತ್ತು ಎಂದು ಹೇಳಲಾಗಿದೆ.

ಸೋಮವಾರ ಸಂಜೆ ದೇಶದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಾದ ನಂತರ ಇತರೆಡೆಗಳಲ್ಲಿಯೂ ಭೂಮಿ ಕಂಪಿಸಿದೆ.

ಇದನ್ನೂ ಓದಿ: ಗಾಜಾ ಜಾಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

ರಕ್ಷಣಾ ಕಾರ್ಯಾಚರಣೆಗೆ ಅಧ್ಯಕ್ಷ ಜಿನ್‌ಪಿಂಗ್ ನಿರ್ದೇಶನ

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೂಕಂಪದ ನಂತರ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಮುಖ ನಿರ್ದೇಶನಗಳನ್ನು ನೀಡಿದರು. ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು, ಪೀಡಿತ ಜನರ ಪುನರ್ವಸತಿ ಮತ್ತು ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಗರಿಷ್ಠ ಪ್ರಯತ್ನಗಳನ್ನು ನಡೆಲಾಗುತ್ತಿದೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ‘ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ.

ಭೂಕಂಪದಿಂದ ಅಪಾರ ಹಾನಿಯಾಗಿದೆ. ಭೂಕಂಪದಿಂದ ಮನೆಗಳ ಕುಸಿತ ಸೇರಿದಂತೆ ಗಂಭೀರ ಹಾನಿ ಸಂಭವಿಸಿದೆ. ಭೀತಿಗೊಂಡ ಜನರು ಕಟ್ಟಡಗಳಿಂದ ಹೊರಬಂದು ಬೀದಿಗಳಿಗೆ ಓಡಲು ಪ್ರಾರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 am, Tue, 19 December 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ