AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Gas Explosion ಚೀನಾದಲ್ಲಿ ಅನಿಲ ಸ್ಫೋಟ; 12 ಮಂದಿ ಸಾವು, 37 ಮಂದಿಗೆ ಗಂಭೀರ ಗಾಯ

China Gas Explosion: ಹುಬೇ ಪ್ರಾಂತ್ಯದಲ್ಲಿ ಈ ಭೀಕರ ಸ್ಫೋಟ ನಡೆದಿದ್ದು  ಸುಮಾರು 140 ಮಂದಿಯನ್ನು  ರಕ್ಷಿಸಲಾಗಿದೆ. 37 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಚೀನಾದ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ.

China Gas Explosion ಚೀನಾದಲ್ಲಿ ಅನಿಲ ಸ್ಫೋಟ; 12 ಮಂದಿ ಸಾವು, 37 ಮಂದಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 13, 2021 | 2:09 PM

 ಹಾಂಗ್ ಕಾಂಗ್: ಚೀನಾದ ಝಂಗ್ ವಾನ್ ಜಿಲ್ಲೆಯ ಶಿಯಾನ್  ನಗರದಲ್ಲಿ ಭಾನುವಾರ ಬೆಳಗ್ಗೆ 6.30ಕ್ಕೆ ಸಂಭವಿಸಿದ ಅನಿಲ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ. ಹುಬೇ ಪ್ರಾಂತ್ಯದಲ್ಲಿ ಈ ಭೀಕರ ಸ್ಫೋಟ ನಡೆದಿದ್ದು  ಸುಮಾರು 140 ಮಂದಿಯನ್ನು  ರಕ್ಷಿಸಲಾಗಿದೆ. 37 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಚೀನಾದ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ.

“ಅನೇಕ” ಜನರು ಒಳಗೆ ಸಿಲುಕಿದ್ದಾರೆ ಎಂದು ನಗರದ ಮುನ್ಸಿಪಲ್ ಕಚೇರಿ ಹೇಳಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಚಿತ್ರಗಳು, ದೃಶ್ಯಗಳನ್ನು ನೋಡಿದರೆ ಕಿತ್ತಳೆ ಬಣ್ಣದ ಜಂಪ್‌ಸೂಟ್‌ಗಳಲ್ಲಿ ರಕ್ಷಣಾ ಕಾರ್ಯಕರ್ತರು ಮನೆಗಳ ಭಗ್ನಾವಶೇಷದಲ್ಲಿ ಕೆಲಸ ಮಾಡುತ್ತಿರುವುದು ಕಾಣುತ್ತದೆ.

ಈ ಘಟನೆಗೆ ಕಾರಣ  ಏನು ಎಂಬುದು ತನಿಖೆ ನಡೆಯುತ್ತಿದೆ ಎಂದು ಸರ್ಕಾರ ತಿಳಿಸಿದೆ. ಚೀನಾದ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ವೀಬೊದಲ್ಲಿ ರಕ್ಷಣಾ ಕಾರ್ಯಗಳ ವಿಡಿಯೊ ಹರಿದಾಡುತ್ತಿದೆ.

ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗಳೊಂದಿಗೆ 39 ಮಂದಿ ಸೇರಿದಂತೆ ಸುಮಾರು 150 ಜನರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ ಎಂದು  ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿರುವುದರಿಂದ  ಸಾವುನೋವುಗಳನ್ನು ನಿಖರ ಸಂಖ್ಯೆಯನ್ನು ಇನ್ನೂ ಪರಿಶೀಲಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:  ಚೀನಾದ ಅಲೆಮಾರಿ ಆನೆಗಳ ವಿಶ್ವ ದಾಖಲೆ ನಡಿಗೆ; ಈ ಗಜಪಡೆಯ ಮಹಾಪ್ರವಾಸ ಎಷ್ಟು ಗಮ್ಮತ್ತಾಗಿದೆ ಗೊತ್ತಾ?

Published On - 2:02 pm, Sun, 13 June 21

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್