AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Gas Explosion ಚೀನಾದಲ್ಲಿ ಅನಿಲ ಸ್ಫೋಟ; 12 ಮಂದಿ ಸಾವು, 37 ಮಂದಿಗೆ ಗಂಭೀರ ಗಾಯ

China Gas Explosion: ಹುಬೇ ಪ್ರಾಂತ್ಯದಲ್ಲಿ ಈ ಭೀಕರ ಸ್ಫೋಟ ನಡೆದಿದ್ದು  ಸುಮಾರು 140 ಮಂದಿಯನ್ನು  ರಕ್ಷಿಸಲಾಗಿದೆ. 37 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಚೀನಾದ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ.

China Gas Explosion ಚೀನಾದಲ್ಲಿ ಅನಿಲ ಸ್ಫೋಟ; 12 ಮಂದಿ ಸಾವು, 37 ಮಂದಿಗೆ ಗಂಭೀರ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 13, 2021 | 2:09 PM

Share

 ಹಾಂಗ್ ಕಾಂಗ್: ಚೀನಾದ ಝಂಗ್ ವಾನ್ ಜಿಲ್ಲೆಯ ಶಿಯಾನ್  ನಗರದಲ್ಲಿ ಭಾನುವಾರ ಬೆಳಗ್ಗೆ 6.30ಕ್ಕೆ ಸಂಭವಿಸಿದ ಅನಿಲ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ. ಹುಬೇ ಪ್ರಾಂತ್ಯದಲ್ಲಿ ಈ ಭೀಕರ ಸ್ಫೋಟ ನಡೆದಿದ್ದು  ಸುಮಾರು 140 ಮಂದಿಯನ್ನು  ರಕ್ಷಿಸಲಾಗಿದೆ. 37 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಚೀನಾದ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ.

“ಅನೇಕ” ಜನರು ಒಳಗೆ ಸಿಲುಕಿದ್ದಾರೆ ಎಂದು ನಗರದ ಮುನ್ಸಿಪಲ್ ಕಚೇರಿ ಹೇಳಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಚಿತ್ರಗಳು, ದೃಶ್ಯಗಳನ್ನು ನೋಡಿದರೆ ಕಿತ್ತಳೆ ಬಣ್ಣದ ಜಂಪ್‌ಸೂಟ್‌ಗಳಲ್ಲಿ ರಕ್ಷಣಾ ಕಾರ್ಯಕರ್ತರು ಮನೆಗಳ ಭಗ್ನಾವಶೇಷದಲ್ಲಿ ಕೆಲಸ ಮಾಡುತ್ತಿರುವುದು ಕಾಣುತ್ತದೆ.

ಈ ಘಟನೆಗೆ ಕಾರಣ  ಏನು ಎಂಬುದು ತನಿಖೆ ನಡೆಯುತ್ತಿದೆ ಎಂದು ಸರ್ಕಾರ ತಿಳಿಸಿದೆ. ಚೀನಾದ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ವೀಬೊದಲ್ಲಿ ರಕ್ಷಣಾ ಕಾರ್ಯಗಳ ವಿಡಿಯೊ ಹರಿದಾಡುತ್ತಿದೆ.

ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗಳೊಂದಿಗೆ 39 ಮಂದಿ ಸೇರಿದಂತೆ ಸುಮಾರು 150 ಜನರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ ಎಂದು  ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿರುವುದರಿಂದ  ಸಾವುನೋವುಗಳನ್ನು ನಿಖರ ಸಂಖ್ಯೆಯನ್ನು ಇನ್ನೂ ಪರಿಶೀಲಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:  ಚೀನಾದ ಅಲೆಮಾರಿ ಆನೆಗಳ ವಿಶ್ವ ದಾಖಲೆ ನಡಿಗೆ; ಈ ಗಜಪಡೆಯ ಮಹಾಪ್ರವಾಸ ಎಷ್ಟು ಗಮ್ಮತ್ತಾಗಿದೆ ಗೊತ್ತಾ?

Published On - 2:02 pm, Sun, 13 June 21

ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!