AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯ ಈ ಒಂದು ಎಕ್ಸ್​​​​ ಪ್ರತಿಕ್ರಿಯೆಗೆ ಉರಿದುಕೊಂಡ ಚೀನಾ, ಕಾರಣವೇನು?

ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಅನೇಕ ದೇಶದ ನಾಯಕರು ಶುಭಾಶಯಗಳನ್ನು ತಿಳಸಿದ್ದಾರೆ. ಈ ಪೈಕಿ ತೈವಾನ್​​​ ಅಧ್ಯಕ್ಷರು ಒಬ್ಬರು. ಇದೀಗ ಅವರ ಶುಭಾಶಯಕ್ಕೆ ಪ್ರಧಾನಿ ಮೋದಿ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಈ ಪ್ರತಿಕ್ರಿಯೆಯಿಂದ ಚೀನಾ ಉರಿದುಕೊಂಡಿದೆ. ಅದಷ್ಟು ಮೋದಿ ಪ್ರತಿಕ್ರಿಯಿಸಿದ್ದೇನು? ಚೀನಾ ಯಾಕೆ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಮಾಹಿತಿ ಇಲ್ಲಿದೆ.

ಮೋದಿಯ ಈ ಒಂದು ಎಕ್ಸ್​​​​ ಪ್ರತಿಕ್ರಿಯೆಗೆ ಉರಿದುಕೊಂಡ ಚೀನಾ, ಕಾರಣವೇನು?
ಅಕ್ಷಯ್​ ಪಲ್ಲಮಜಲು​​
|

Updated on: Jun 08, 2024 | 11:02 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂ.9ಕ್ಕೆ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಜಗತ್ತಿನ ಬೇರೆ ಬೇರೆ ದೇಶದ ನಾಯಕರು ಮೋದಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ತೈವಾನ್ ಅಧ್ಯಕ್ಷ ಕೂಡ ಮೋದಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಕೂಡ ರಾಜತಂತ್ರಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಈ ಪ್ರತಿಕ್ರಿಯೆಯನ್ನು ಚೀನಾಕ್ಕೆ ಸಹಿಕೊಳ್ಳಲಾಗುತ್ತಿಲ್ಲ. ಈಗಾಗಲೇ ತೈವಾನ್ ಜತೆಗೆ ದ್ವೇಷ ಕಟ್ಟಿಕೊಂಡಿರುವ ಚೀನಾ, ಮೋದಿ ಅವರ ಪ್ರತಿಕ್ರಿಯೆಯನ್ನು ವಿರೋಧಿಸಿದೆ. ನರೇಂದ್ರ ಮೋದಿ ಮತ್ತು ತೈವಾನ್ ಅಧ್ಯಕ್ಷ ಲಾಯ್ ಚಿಂಗ್-ಟೆ ಇಬ್ಬರು ಕೂಡ ಎಕ್ಸ್​ನಲ್ಲಿ​​​​ ಅಭಿನಂದನೆಯನ್ನು ತಿಳಿಸಿದ್ದಾರೆ. ಆದರೆ ಚೀನಾ ಭಾರತ ಮತ್ತು ತೈವಾನ್​​​ನ ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದೆ. ಈಗಾಗಲೇ ಭಾರತ ಮತ್ತು ಚೀನಾ ನಡುವೆ ವ್ಯಾಪರ ಒಪ್ಪಂದಗಳು ಹಾಗೂ ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ಒಪ್ಪಂದಗಳು ಇದೆ. ಇದರ ಮಧ್ಯೆ ತೈವಾನ್ ಜತೆಗೆ ಭಾರತ ಸಂಬಂಧ ಬೆಳಸಿಕೊಳ್ಳುವುದು ಸರಿಯಲ್ಲ, ನಮಗೂ ತೈವಾನ್​​ ನಡುವೆ ಈಗಾಗಲೇ ಬಿರುಕು ಇದೆ ಎಂದು ಚೀನಾ ಹೇಳಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್, ಅಭಿನಂದನಾ ಸಂದೇಶಗಳು ರಾಜತಾಂತ್ರಿಕ ವ್ಯವಹಾರದ ಭಾಗವಾಗಿದೆ ಎಂದು ಹೇಳಿದೆ.

ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೈವಾನ್​​ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಒಂದು ದೇಶದ ಪ್ರಧಾನಿ ಅಥವಾ ಅಧ್ಯಕ್ಷರು ಚುನಾವಣೆಯಲ್ಲಿ ಗೆಲುವು ಸಾಧಿಸಿದಾಗ ಹಾಗೂ ಒಳ್ಳೆಯ ವಿಚಾರಕ್ಕೆ ಅಭಿನಂದನೆ ಸಲ್ಲಿಸುವುದು ರಾಜತಾಂತ್ರಿಕ ವ್ಯವಹಾರದ ಸಾಮಾನ್ಯ ಭಾಗವಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ವಿಜಯಕ್ಕಾಗಿ ನನ್ನ ಪ್ರಾಮಾಣಿಕ ಅಭಿನಂದನೆಗಳು. ವೇಗವಾಗಿ ಬೆಳೆಯುತ್ತಿರುವ ತೈವಾನ್- ಭಾರತ. ತಮ್ಮ ಪಾಲುದಾರಿಕೆಯಲ್ಲಿ ಇನ್ನು ಹೆಚ್ಚಿನ ಬೆಂಬಲವನ್ನು ಎದುರು ನೋಡುತ್ತಿದೆ. ಹಾಗೂ ಇಂಡೋಪೆಸಿಫಿಕ್‌ನಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ವ್ಯಾಪಾರ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ಎರಡು ದೇಶಗಳ ಸಹಯೋಗವನ್ನು ಬಯಸುತ್ತೇನೆ ಎಂದು ತೈವಾನ್ ಅಧ್ಯಕ್ಷ ಲಾಯ್ ಚಿಂಗ್-ಟೆ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದರು.

ಇದನ್ನೂ ಓದಿ: ರಾಹುಲ್ ಭರವಸೆ​​ ನೀಡಿದ್ದ 1 ಲಕ್ಷ ರೂ. ಗ್ಯಾರಂಟಿ ನೀಡಿ, ಚಡ್ಡಾ, ಸಂಜಯ್ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ ನಿಮ್ಮ ಶುಭಾಶಯಕ್ಕೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ನಾವು ಪರಸ್ಪರ ಲಾಭದಾಯಕ ಆರ್ಥಿಕ ಮತ್ತು ತಾಂತ್ರಿಕ ಪಾಲುದಾರಿಕೆಯಲ್ಲಿ ನಿಮ್ಮ ಜತೆಗೆ ಕೆಲಸ ಮಾಡಲು ಬಯಸುತ್ತೇವೆ ಎಂದು ಹೇಳಿದ್ದಾರೆ. ಈ ಒಂದು ಪ್ರತಿಕ್ರಿಯೆ ಚೀನಾಕ್ಕೆ ಭಯಗೊಳಿಸಿದೆ. ಇನ್ನು ಈ ಬಗ್ಗೆ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ತೈವಾನ್ ಅಧಿಕಾರಿಗಳು ಮತ್ತು ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ದೇಶಗಳ ನಡುವಿನ ಎಲ್ಲಾ ರೀತಿಯ ಅಧಿಕೃತ ಸಂವಹನಗಳನ್ನು ಚೀನಾ ವಿರೋಧಿಸುತ್ತದೆ. ಜಗತ್ತಿನಲ್ಲಿ ಒಂದೇ ಒಂದು ಚೀನಾ ಇದೆ. ತೈವಾನ್ ಭೂಪ್ರದೇಶದ ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!