AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಆಕ್ರಮಿತ ಕಾಶ್ಮೀರಕ್ಕೂ ಕಾಲಿಟ್ಟ ಚೀನಾ ಸೇನೆ; ಮಿಲಿಟರಿ ಮೂಲಸೌಕರ್ಯ ಬಲಪಡಿಸಲು ಕಾರ್ಯಾಚರಣೆ

ಭಾರತೀಯ ಸೇನೆಯೂ ಸಹ ಸುಮ್ಮನೆ ಕುಳಿತಿಲ್ಲ. ಕಳೆದ ವರ್ಷದ ಸಂಘರ್ಷದ ಬಳಿಕ ಗಡಿಭಾಗದಲ್ಲಿ ಭಾರತ ಕೂಡ ಸೇನಾ ಬಲವನ್ನು ಹೆಚ್ಚಿಸಿದೆ. ಯುದ್ಧ ಟ್ಯಾಂಕ್​​ಗಳನ್ನು ಶಸ್ತ್ರಾಸ್ತ್ರಗಳ ವಾಹನಗಳನ್ನೂ ನಿಯೋಜಿಸಿ, ಚೀನಾ ಸೈನಿಕರಿಗೆ ಕೌಂಟರ್​ ಕೊಟ್ಟಿದೆ.

ಪಾಕ್ ಆಕ್ರಮಿತ ಕಾಶ್ಮೀರಕ್ಕೂ ಕಾಲಿಟ್ಟ ಚೀನಾ ಸೇನೆ; ಮಿಲಿಟರಿ ಮೂಲಸೌಕರ್ಯ ಬಲಪಡಿಸಲು ಕಾರ್ಯಾಚರಣೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Jul 27, 2021 | 2:35 PM

Share

ದೆಹಲಿ: ಪೂರ್ವ ಲಡಾಖ್​​ನ ವಾಸ್ತವ ನಿಯಂತ್ರಣಾ ಗಡಿ ರೇಖೆ ಬಳಿ ಚೀನಾ ತನ್ನ ಸೇನಾಬಲವನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಕಳೆದ ಏಪ್ರಿಲ್​-ಮೇ ತಿಂಗಳಿಂದಲೂ ಇಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಿರಂತರವಾಗಿ ಸಂಘರ್ಷ ಆಗುತ್ತಲೇ ಬರುತ್ತಿದ್ದು, ಇತ್ತೀಚೆಗೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎಂದುಕೊಳ್ಳಲಾಗಿತ್ತು. ಆದರೆ ಚೀನಾ ಇಲ್ಲಿ ನಿರಂತರವಾಗಿ ತನ್ನ ಮಿಲಿಟರಿ ಬಲವನ್ನು ಹೆಚ್ಚಿಸುತ್ತಲೇ ಇದೆ. ವಾಯುನೆಲೆಗಳನ್ನು ವರ್ಧಿಸುತ್ತಿದೆ ಅಷ್ಟೇ ಅಲ್ಲ, ವಾಯು ರಕ್ಷಣಾ ಘಟಕಗಳನ್ನು ನಿರ್ಮಾಣ ಮಾಡುತ್ತಿದೆ. ಹೊಸ ವಾಯುನೆಲೆಗಳನ್ನು ಕಟ್ಟುವ ಜತೆ ಹೆಲಿಕಾಪ್ಟರ್​​ ಹಾರಾಟ ವ್ಯಾಪ್ತಿಯನ್ನು ಹೆಚ್ಚಿಸುವತ್ತ ಗಮನಕೊಟ್ಟಿದೆ. ರನ್​ವೇಗಳೂ ಸಿದ್ಧವಾಗುತ್ತಿವೆ. ಕಳೆದ ಒಂದು ವರ್ಷಗಳಿಂದಲೂ ಚೀನಾ ಇದೇ ಕೆಲಸ ನಡೆಸುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಹಾಗಂತ ಭಾರತೀಯ ಸೇನೆಯೂ ಸಹ ಸುಮ್ಮನೆ ಕುಳಿತಿಲ್ಲ. ಕಳೆದ ವರ್ಷದ ಸಂಘರ್ಷದ ಬಳಿಕ ಗಡಿಭಾಗದಲ್ಲಿ ಭಾರತ ಕೂಡ ಸೇನಾ ಬಲವನ್ನು ಹೆಚ್ಚಿಸಿದೆ. ಯುದ್ಧ ಟ್ಯಾಂಕ್​​ಗಳನ್ನು ಶಸ್ತ್ರಾಸ್ತ್ರಗಳ ವಾಹನಗಳನ್ನೂ ನಿಯೋಜಿಸಿ, ಚೀನಾ ಸೈನಿಕರಿಗೆ ಕೌಂಟರ್​ ಕೊಟ್ಟಿದೆ. ಆದರೆ ಕುತಂತ್ರಿ ಚೀನಾ ತನ್ನ ಕಾರ್ಯಚಟುವಟಿಕೆಗಳನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೂ ವಿಸ್ತರಿಸಿದೆ. ಕಳೆದ ಕೆಲವು ತಿಂಗಳಿಂದಲೂ ಚೀನಾ ಮತ್ತು ಪಾಕಿಸ್ತಾನ ಸೈನಿಕರ ನಡುವೆ ಸಹಕಾರ ಹೆಚ್ಚಿದೆ. ಇವೆರಡೂ ದೇಶಗಳು ಸೇರಿ ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಮಿಲಿಟರಿ ಮೂಲಸೌಕರ್ಯಗಳನ್ನು ಹೆಚ್ಚಿಸಲು ಪ್ರಯತ್ನ ಮಾಡುತ್ತಿವೆ. ಭೂ ಮೇಲ್ಮೈನಿಂದ, ಗಾಳಿಯಲ್ಲಿ ಹಾರಾಡುತ್ತಿರುವ ಯುದ್ಧ ವಿಮಾನಗಳನ್ನು ಧ್ವಂಸಗೊಳಿಸುವ ಕ್ಷಿಪಣಿ ವ್ಯವಸ್ಥೆಯನ್ನು ರೂಪಿಸಲು ಮುಂದಾಗಿವೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಹಾಗೇ, ಚೀನಾದ ಏರ್​ಕ್ರಾಫ್ಟ್​ಗಳಿಗೆ ಪಾಕಿಸ್ತಾನದ ಸ್ಕರ್ಡು ವಾಯುನೆಲೆಯಲ್ಲಿ ಇಂಧನ ತುಂಬಲಾಗುತ್ತಿದೆ. ಈ ಸ್ಕರ್ಡು ಏರ್​ಬೇಸ್​ ಲಡಾಖ್​​ನ ಲೇಹ್​ ವಾಯುನೆಲೆಯಿಂದ 100 ಕಿಮೀ ದೂರದಲ್ಲಿದೆ.

ಇದನ್ನೂ ಓದಿ: ಯಡಿಯೂರಪ್ಪಗೆ ವಯಸ್ಸು 75 ವರ್ಷ, ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ – ಕಾಂಗ್ರೆಸ್ ಎಂಎಲ್ಸಿ ಸಿ.ಎಂ. ಇಬ್ರಾಹಿಂ

China helping Pakistan toset  up missile defence system in POK

Published On - 2:23 pm, Tue, 27 July 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್