AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಮತ್ತೆ ಕೊರೊನಾ ಅಬ್ಬರ; ಲಾಂಝೌ ನಗರ ಸಂಪೂರ್ಣ ಲಾಕ್​​ಡೌನ್​​

ಕೊರೊನಾ ಹೆಚ್ಚುತ್ತಿರುವ ಚೀನಾದಲ್ಲಿ ಪ್ರವಾಸಿ ತಾಣಗಳು, ಶಾಲೆಗಳು ಮತ್ತು ಮನರಂಜನಾ ಸ್ಥಳಗಳಿಗೆ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚೀನಾದಿಂದ ಬೇರೆ ದೇಶಗಳಿಗೆ ಹೋಗುವ ಕೆಲವು ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದೆ.

ಚೀನಾದಲ್ಲಿ ಮತ್ತೆ ಕೊರೊನಾ ಅಬ್ಬರ; ಲಾಂಝೌ ನಗರ ಸಂಪೂರ್ಣ ಲಾಕ್​​ಡೌನ್​​
ಲಾಂಝೌನಲ್ಲಿ ಲಾಕ್​ಡೌನ್​
TV9 Web
| Edited By: |

Updated on: Oct 26, 2021 | 4:38 PM

Share

ಚೀನಾದಲ್ಲಿ ಮತ್ತೆ ಕೊರೊನಾ ಸೋಂಕಿನ(Corona Virus) ತೀವ್ರತೆ ಮತ್ತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಇದೀಗ ಸುಮಾರು 4 ಮಿಲಿಯನ್​ ಜನಸಂಖ್ಯೆ ಇರುವ ಲಾಂಝೌ ನಗರವನ್ನು ಲಾಕ್​ಡೌನ್​ ಮಾಡಲಾಗಿದೆ. ಚೀನಾದಲ್ಲಿ ಕೊರೊನಾದಿಂದ ಮತ್ತೆ 29 ಮಂದಿ ಸತ್ತಿದ್ದಾಗಿ ವರದಿಯಾದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಲಾಂಝೌ ಚೀನಾದ ವಾಯುವ್ಯ ನಗರವಾಗಿದ್ದು, ಇಂದಿನಿಂದ ಕಠಿಣ ಲಾಕ್​ಡೌನ್​ ವಿಧಿಸಿ ಸ್ಥಳೀಯ ಸರ್ಕಾರ ಆದೇಶ ಹೊರಡಿಸಿದೆ. ತುರ್ತು ಪರಿಸ್ಥಿತಿಯನ್ನು ಹೊರತು ಪಡಿಸಿ ಇನ್ಯಾವುದೇ ಕಾರಣಕ್ಕೆ ಜನರು ಮನೆಯಿಂದ ಹೊರಗೆ ಬೀಳುವಂತಿಲ್ಲ ಎಂದು ಹೇಳಿದೆ. 

ಚೀನಾದಲ್ಲಿ ಕಳೆದ ಒಂದೇ ವಾರದಲ್ಲಿ 11ಕ್ಕೂ ಹೆಚ್ಚು ಪ್ರಾಂತ್ಯಗಳಲ್ಲಿ 100ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅದರ ಬೆನ್ನಲ್ಲೇ ದೇಶದ ವಿವಿಧ ಭಾಗಗಳಲ್ಲಿ ಲಾಕ್​ಡೌನ್​ ಜಾರಿಯಾಗುತ್ತಿದೆ. ಅಕ್ಟೋಬರ್​ 17ರಿಂದ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಅಷ್ಟೇ ಅಲ್ಲ ತುಂಬ ವೇಗವಾಗಿ ಪ್ರಸರಣ ಆಗುತ್ತಿವೆ ಎಂದು ಚೀನಾ ರಾಷ್ಟ್ರೀಯ ಆರೋಗ್ಯ ಆಯೋಗದ ವಕ್ತಾರ ಮಿ ಫೆಂಗ್​ ತಿಳಿಸಿದ್ದಾರೆ. ಇದಿಷ್ಟಕ್ಕೇ ಮುಗಿಯುವುದಿಲ್ಲ. ಮತ್ತೊಮ್ಮೆ ಚೀನಾದಲ್ಲಿ ಸೋಂಕಿನ ಅಟ್ಟಹಾಸ ಹೆಚ್ಚಾಗುವ ಸಾಧ್ಯತೆ ಜಾಸ್ತಿ ಇದೆ ಎಂದೂ ತಿಳಿಸಿದ್ದಾರೆ. ಇದರೊಂದಿಗೆ ಆರೋಗ್ಯ ಸಿಬ್ಬಂದಿಯೂ ಕೂಡ ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಚೀನಾದಲ್ಲಿ ಪ್ರವಾಸಿ ತಾಣಗಳು, ಶಾಲೆಗಳು ಮತ್ತು ಮನರಂಜನಾ ಸ್ಥಳಗಳಿಗೆ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚೀನಾದಿಂದ ಬೇರೆ ದೇಶಗಳಿಗೆ ಹೋಗುವ ಕೆಲವು ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದೆ. ಕ್ಸಿಯಾನ್ ಮತ್ತು ಲಾನ್ಸೂದಲ್ಲಿನ ಎರಡು ಮುಖ್ಯ ವಿಮಾನ ನಿಲ್ದಾಣಗಳಿಗೆ ಸುಮಾರು ಶೇ. 60ರಷ್ಟು ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬದಂದು ದೇಗುಲಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದ ಆದೇಶ

ಪೊಲೀಸ್ ಠಾಣೆಗಳಲ್ಲಿ ರಾಜಿ ಸಂಧಾನ ಮಾಡಬಾರದು: ಸ್ನೇಹಿತ್​ ಪುಂಡಾಟ ಕೇಸ್​ ಬಗ್ಗೆ ಕಮಲ್​ ಪಂತ್​ ಪ್ರತಿಕ್ರಿಯೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್