AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಮತ್ತೆ ಕೊರೊನಾ ಅಬ್ಬರ; ಲಾಂಝೌ ನಗರ ಸಂಪೂರ್ಣ ಲಾಕ್​​ಡೌನ್​​

ಕೊರೊನಾ ಹೆಚ್ಚುತ್ತಿರುವ ಚೀನಾದಲ್ಲಿ ಪ್ರವಾಸಿ ತಾಣಗಳು, ಶಾಲೆಗಳು ಮತ್ತು ಮನರಂಜನಾ ಸ್ಥಳಗಳಿಗೆ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚೀನಾದಿಂದ ಬೇರೆ ದೇಶಗಳಿಗೆ ಹೋಗುವ ಕೆಲವು ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದೆ.

ಚೀನಾದಲ್ಲಿ ಮತ್ತೆ ಕೊರೊನಾ ಅಬ್ಬರ; ಲಾಂಝೌ ನಗರ ಸಂಪೂರ್ಣ ಲಾಕ್​​ಡೌನ್​​
ಲಾಂಝೌನಲ್ಲಿ ಲಾಕ್​ಡೌನ್​
TV9 Web
| Edited By: |

Updated on: Oct 26, 2021 | 4:38 PM

Share

ಚೀನಾದಲ್ಲಿ ಮತ್ತೆ ಕೊರೊನಾ ಸೋಂಕಿನ(Corona Virus) ತೀವ್ರತೆ ಮತ್ತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಇದೀಗ ಸುಮಾರು 4 ಮಿಲಿಯನ್​ ಜನಸಂಖ್ಯೆ ಇರುವ ಲಾಂಝೌ ನಗರವನ್ನು ಲಾಕ್​ಡೌನ್​ ಮಾಡಲಾಗಿದೆ. ಚೀನಾದಲ್ಲಿ ಕೊರೊನಾದಿಂದ ಮತ್ತೆ 29 ಮಂದಿ ಸತ್ತಿದ್ದಾಗಿ ವರದಿಯಾದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಲಾಂಝೌ ಚೀನಾದ ವಾಯುವ್ಯ ನಗರವಾಗಿದ್ದು, ಇಂದಿನಿಂದ ಕಠಿಣ ಲಾಕ್​ಡೌನ್​ ವಿಧಿಸಿ ಸ್ಥಳೀಯ ಸರ್ಕಾರ ಆದೇಶ ಹೊರಡಿಸಿದೆ. ತುರ್ತು ಪರಿಸ್ಥಿತಿಯನ್ನು ಹೊರತು ಪಡಿಸಿ ಇನ್ಯಾವುದೇ ಕಾರಣಕ್ಕೆ ಜನರು ಮನೆಯಿಂದ ಹೊರಗೆ ಬೀಳುವಂತಿಲ್ಲ ಎಂದು ಹೇಳಿದೆ. 

ಚೀನಾದಲ್ಲಿ ಕಳೆದ ಒಂದೇ ವಾರದಲ್ಲಿ 11ಕ್ಕೂ ಹೆಚ್ಚು ಪ್ರಾಂತ್ಯಗಳಲ್ಲಿ 100ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅದರ ಬೆನ್ನಲ್ಲೇ ದೇಶದ ವಿವಿಧ ಭಾಗಗಳಲ್ಲಿ ಲಾಕ್​ಡೌನ್​ ಜಾರಿಯಾಗುತ್ತಿದೆ. ಅಕ್ಟೋಬರ್​ 17ರಿಂದ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಅಷ್ಟೇ ಅಲ್ಲ ತುಂಬ ವೇಗವಾಗಿ ಪ್ರಸರಣ ಆಗುತ್ತಿವೆ ಎಂದು ಚೀನಾ ರಾಷ್ಟ್ರೀಯ ಆರೋಗ್ಯ ಆಯೋಗದ ವಕ್ತಾರ ಮಿ ಫೆಂಗ್​ ತಿಳಿಸಿದ್ದಾರೆ. ಇದಿಷ್ಟಕ್ಕೇ ಮುಗಿಯುವುದಿಲ್ಲ. ಮತ್ತೊಮ್ಮೆ ಚೀನಾದಲ್ಲಿ ಸೋಂಕಿನ ಅಟ್ಟಹಾಸ ಹೆಚ್ಚಾಗುವ ಸಾಧ್ಯತೆ ಜಾಸ್ತಿ ಇದೆ ಎಂದೂ ತಿಳಿಸಿದ್ದಾರೆ. ಇದರೊಂದಿಗೆ ಆರೋಗ್ಯ ಸಿಬ್ಬಂದಿಯೂ ಕೂಡ ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಚೀನಾದಲ್ಲಿ ಪ್ರವಾಸಿ ತಾಣಗಳು, ಶಾಲೆಗಳು ಮತ್ತು ಮನರಂಜನಾ ಸ್ಥಳಗಳಿಗೆ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚೀನಾದಿಂದ ಬೇರೆ ದೇಶಗಳಿಗೆ ಹೋಗುವ ಕೆಲವು ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದೆ. ಕ್ಸಿಯಾನ್ ಮತ್ತು ಲಾನ್ಸೂದಲ್ಲಿನ ಎರಡು ಮುಖ್ಯ ವಿಮಾನ ನಿಲ್ದಾಣಗಳಿಗೆ ಸುಮಾರು ಶೇ. 60ರಷ್ಟು ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬದಂದು ದೇಗುಲಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದ ಆದೇಶ

ಪೊಲೀಸ್ ಠಾಣೆಗಳಲ್ಲಿ ರಾಜಿ ಸಂಧಾನ ಮಾಡಬಾರದು: ಸ್ನೇಹಿತ್​ ಪುಂಡಾಟ ಕೇಸ್​ ಬಗ್ಗೆ ಕಮಲ್​ ಪಂತ್​ ಪ್ರತಿಕ್ರಿಯೆ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ