AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಬಾಲಾಪರಾಧಿಗಳ ವಯೋಮಿತಿ 14 ರಿಂದ 12 ವರ್ಷಕ್ಕೆ ಇಳಿಕೆ

ಈ ಮೊದಲು, ಚೀನಾದಲ್ಲಿ 14ರಿಂದ 16 ವರ್ಷದವರೆಗಿನ ಮಕ್ಕಳಿಗೆ ಕ್ರಿಮಿನಲ್ ಅಪರಾಧದ ಶಿಕ್ಷೆ ಅನ್ವಯವಾಗುತ್ತಿತ್ತು. ಇದೀಗ ಮಕ್ಕಳ ಅಪರಾಧದ ವಯಸ್ಸನ್ನು 12ರಿಂದ 14 ವರ್ಷದೊಳಗೆ ತರಲಾಗಿದೆ.

ಚೀನಾದಲ್ಲಿ ಬಾಲಾಪರಾಧಿಗಳ ವಯೋಮಿತಿ 14 ರಿಂದ 12 ವರ್ಷಕ್ಕೆ ಇಳಿಕೆ
ಈ ಮೊದಲು, ಚೀನಾದಲ್ಲಿ 14ರಿಂದ 16 ವರ್ಷದವರೆಗಿನ ಮಕ್ಕಳಿಗೆ ಕ್ರಿಮಿನಲ್ ಅಪರಾಧದ ಶಿಕ್ಷೆ ಅನ್ವಯವಾಗುತ್ತಿತ್ತು.
TV9 Web
| Updated By: ganapathi bhat|

Updated on:Apr 06, 2022 | 11:13 PM

Share

ಬೀಜಿಂಗ್: ಚೀನಾ ದೇಶ ತನ್ನ ಅಪರಾಧ ಕಾನೂನಿನಲ್ಲಿ ಕೆಲ ಬದಲಾವಣೆಗಳನ್ನು ತರಲು ಮುಂದಾಗಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳಿಂದ ನಡೆಯುತ್ತಿರುವ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಈ ಮೊದಲು 14 ವರ್ಷಗಳಿಗಿಂತ ದೊಡ್ಡವರು ಅಪರಾಧ ಮಾಡಿದರೆ ಅಂಥವರನ್ನು ಅಪರಾಧಿ ಎಂದು ಪರಿಗಣಿಸಲಾಗುತ್ತಿತ್ತು. ಈಗ ಅಪರಾಧದ ವಯಸ್ಸಿನ ಮಿತಿಯನ್ನು 12 ವರ್ಷಗಳಿಗೆ ಇಳಿಕೆ ಮಾಡಲಾಗಿದೆ.

ಚೀನಾದ ಕೆಲ ಅಪರಾಧಗಳಿಗೆ ಈ ನಿಯಮ ಅನ್ವಯವಾಗಲಿದೆ. ಉದ್ದೇಶಪೂರ್ವಕ ಹತ್ಯೆ, ಹಲ್ಲೆಯಿಂದ ಆದ ಸಾವು ಅಥವಾ ಅಂಗವೈಕಲ್ಯ, ಹಿಂಸಾಚಾರ ಕೃತ್ಯಗಳು ಅಪರಾಧವೆಂದು ಪರಿಗಣನೆಯಾಗಲಿದೆ. ಈ ಅಪರಾಧಗಳಿಗೆ ಹೊರತಾಗಿ ಇತರ ಕೃತ್ಯಗಳನ್ನು ಎಸಗಿದರೆ, ಅಂತಹ ಮಕ್ಕಳಿಗೆ ಶಿಕ್ಷೆ ನೀಡಲಾಗುವುದಿಲ್ಲ. ಬದಲಾಗಿ, ಅವರಿಗೆ ತಪ್ಪನ್ನು ತಿದ್ದಿಕೊಳ್ಳುವಂತೆ ಶಿಕ್ಷಣ ನೀಡಲಾಗುವುದು ಎಂದು ತಿಳಿಸಲಾಗಿದೆ.

ಈ ಮೊದಲು, ಚೀನಾದಲ್ಲಿ 14ರಿಂದ 16 ವರ್ಷದವರೆಗಿನ ಮಕ್ಕಳಿಗೆ ಕ್ರಿಮಿನಲ್ ಅಪರಾಧದ ಶಿಕ್ಷೆ ಅನ್ವಯವಾಗುತ್ತಿತ್ತು. ಇದೀಗ ಮಕ್ಕಳ ಅಪರಾಧದ ವಯಸ್ಸನ್ನು 12ರಿಂದ 14 ವರ್ಷದೊಳಗೆ ತರಲಾಗಿದೆ. ಚೀನಾದಲ್ಲಿ ಇತ್ತೀಚೆಗೆ ಕೆಲವಾರು ಬಾಲಾಪರಾಧಗಳು ದಾಖಲಾದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಚೀನಾ ಶಾಸಕಾಂಗ ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್​ನ ಸ್ಟಾಂಡಿಂಗ್ ಕಮಿಟಿಯಲ್ಲಿ ಈ ತಿದ್ದುಪಡಿ ಅಂಗೀಕಾರವಾಗಿದ್ದು, ಮಾರ್ಚ್ 1ರಿಂದ ಜಾರಿಗೆ ಬರಲಿದೆ. ನೂತನ ಕಾನೂನಿನ ಪ್ರಕಾರ ಗಂಭೀರ ಅಪರಾಧಗಳಲ್ಲಿ ಬಾಲಕರನ್ನೇ ಅಪರಾಧಕ್ಕೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.

ಭಾರತದ ಕಾಯ್ದೆಯ ಪ್ರಕಾರ 18 ವರ್ಷಗಳಿಗಿಂತ ಕಡಿಮೆ ಇರುವವರನ್ನು ಬಾಲಾಪರಾಧಿ ಎಂದು ಪರಿಗಣಿಸಲಾಗುತ್ತಿದೆ. ಅದೇ ಕಾರಣಕ್ಕೆ ದೆಹಲಿ ನಿರ್ಭಯಾ ಪ್ರಕರಣದ ಒಬ್ಬ ಆರೋಪಿ ಶಿಕ್ಷೆಯಿಂದ ಪಾರಾಗಿದ್ದ. ಅಪರಾಧ ಕೃತ್ಯ ನಡೆದ ದಿನ ಆತನಿಗೆ 17 ವರ್ಷ, ಆರು ತಿಂಗಳು ಎಂದು ಗುರುತಿಸಲಾಗಿತ್ತು. ಹಾಗಾಗಿ ಆರು ಅಪರಾಧಿಗಳಲ್ಲಿ ಒಬ್ಬನಾಗಿದ್ದ ಆತನನ್ನು ಬಾಲಾಪರಾಧಿ ಎಂದು ಹೇಳಲಾಗಿತ್ತು. ಇದನ್ನು ವಿರೋಧಿಸಿ ಹಲವು ಜನರು ಧ್ವನಿ ಎತ್ತಿದ್ದರು. ಭಾರತೀಯ ಬಾಲಾಪರಾಧಿ ಕಾಯ್ದೆಯಲ್ಲಿ ತಿದ್ದುಪಡಿ ಆಗಬೇಕೆಂದು ಅಭಿಪ್ರಾಯಪಟ್ಟಿದ್ದರು.

5ತಿಂಗಳಲ್ಲಿ 4ಕೇಸ್.. ಆ ಐವರು ಅಪ್ರಾಪ್ತ ರಾಕ್ಷಸರು ಮಾಡಿದ ಕೃತ್ಯ ತಿಳಿದ್ರೆ ಬೆಚ್ಚಿ ಬೀಳ್ತೀರಾ!

Published On - 6:35 pm, Mon, 28 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ