Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಮತ್ತೆ ಸೋಂಕಿನ ಭೀತಿ.. ಕಠಿಣ ನಿಯಮಗಳ ಜಾರಿಗೆ ಮುಂದಾದ ಚೀನಾ ಸರ್ಕಾರ

ಹೊಸದಾಗಿ ಪತ್ತೆಯಾದ ಒಟ್ಟು 14 ಸೋಂಕಿತರ ಪೈಕಿ 11 ಪ್ರಕರಣಗಳು ಶಿಜಿಯಾಜುಯಾಂಗ್​ ನಗರದಲ್ಲಿ, 3 ಪ್ರಕರಣಗಳು ಯಾಂತೈ ನಗರದಲ್ಲಿ ಪತ್ತೆಯಾಗಿದೆ. ಅಲ್ಲಿನ ವರದಿಗಳ ಪ್ರಕಾರ ಇದುವರೆಗೆ 87,183 ಕೊವಿಡ್​ ಪ್ರಕರಣ ದಾಖಲಾಗಿದ್ದು, 4,634 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಚೀನಾದಲ್ಲಿ ಮತ್ತೆ ಸೋಂಕಿನ ಭೀತಿ.. ಕಠಿಣ ನಿಯಮಗಳ ಜಾರಿಗೆ ಮುಂದಾದ ಚೀನಾ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 05, 2021 | 3:03 PM

ಬೀಜಿಂಗ್​: ಕೊರೊನಾ ವೈರಾಣುವಿನ ಮಾತೃಭೂಮಿ ಎಂಬ ಕುಖ್ಯಾತಿಗೆ ಈಡಾಗಿರುವ ಚೀನಾ ದೇಶದಲ್ಲೀಗ ಮತ್ತೆ ಸೋಂಕು ಹರಡುವ ಭೀತಿ ಉಂಟಾಗಿದೆ. ಹೊಸದಾಗಿ 14 ಕೊವಿಡ್​ ಪ್ರಕರಣಗಳು ದಾಖಲಾಗಿರುವ ಚೀನಾದ ಹೆಬೆ ಪ್ರಾಂತ್ಯವನ್ನು ಅತಿ ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ. ಇದರ ಪೈಕಿ 11 ಪ್ರಕರಣಗಳು ಶಿಜಿಯಾಜುಯಾಂಗ್​ ನಗರದಲ್ಲಿ ಪತ್ತೆಯಾಗಿದೆ.

2022 ರಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್​ ಕ್ರೀಡಾಕೂಟದ ಕೆಲವು ಕಾರ್ಯಕ್ರಮಗಳು ಶಿಜಿಯಾಜುಯಾಂಗ್​ ನಗರದಲ್ಲಿ ನಡೆಯಲಿದ್ದು ಕೊವಿಡ್​ ಪ್ರಕರಣದಲ್ಲಿ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಜೊತೆಗೆ, ಯಾವುದೇ ಲಕ್ಷಣಗಳಿಲ್ಲದ ಇತರೆ 30 ಜನರಲ್ಲೂ ಪಾಸಿಟಿವ್​ ಕಂಡುಬಂದಿರುವುದರಿಂದ ಸ್ಥಳೀಯ ಆಡಳಿತ ಕಟ್ಟೆಚ್ಚರ ವಹಿಸುತ್ತಿದೆ.

ಹೊಸದಾಗಿ ಪತ್ತೆಯಾದ ಒಟ್ಟು 14 ಸೋಂಕಿತರ ಪೈಕಿ ಉಳಿದ ಮೂವರು ಯಾಂತೈ ನಗರದವರಾಗಿದ್ದಾರೆ. ಸದ್ಯ ಶಿಜಿಯಾಜುಯಾಂಗ್​ ನಗರವನ್ನು ಅತಿ ಅಪಾಯಕಾರಿ ವಲಯವೆಂದೂ, ಯಾಂತೈ ನಗರವನ್ನು ಮಧ್ಯಮ ಅಪಾಯಕಾರಿ ವಲಯವೆಂದೂ ಗುರುತಿಸಲಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಚೀನಾ ಸರ್ಕಾರ ಯಾವ ಮೂಲದಿಂದ ಕೊರೊನಾ ಸೋಂಕು ಮತ್ತೆ ಹರಡಲು ಆರಂಭವಾಯಿತು ಎಂದು ಹುಡುಕಾಟ ನಡೆಸುತ್ತಿದೆ. ಅಲ್ಲಿನ ವರದಿಗಳ ಪ್ರಕಾರ ಇದುವರೆಗೆ 87,183 ಕೊವಿಡ್​ ಪ್ರಕರಣ ದಾಖಲಾಗಿದ್ದು, 4,634 ಜನ ಸೋಂಕಿತರು ಮೃತಪಟ್ಟಿದ್ದಾರೆ. ಆದರೆ, ಯಾವುದೇ ಲಕ್ಷಣಗಳಿಲ್ಲದೇ ಸೋಂಕಿತರಾದವರನ್ನು ಪ್ರತ್ಯೇಕವಾಗಿ ಎಣಿಸಲಾಗಿದೆ ಎಂಬುದನ್ನೂ ವರದಿ ತಿಳಿಸಿದೆ.

ಟ್ವಿಟರ್​ನಲ್ಲಿ ಮತ್ತೆ ಟ್ರೆಂಡ್​ ಆಯ್ತು #BoycottChina​; ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿರುವ ನೆಟ್ಟಿಗರು

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ