AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಸಂಘರ್ಷದ ನಡುವೆ ಚೀನಾ ಸೇನೆಯಲ್ಲಿ ಮಹತ್ವದ ಬದಲಾವಣೆ; ಕಮಾಂಡರ್​ ಬದಲಾಗಿದ್ದೇಕೆ?

ಚೀನಾ ಮಾಧ್ಯಮಗಳ ಪ್ರಕಾರ, ಕ್ಸಿ ಒಟ್ಟು ನಾಲ್ವರು ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಬಡ್ತಿ ನೀಡಿದ್ದಾರೆ. ಅದರಲ್ಲಿ ಜನರಲ್​ ಝಾಂಗ್​ರಿಗೆ ಕಮಾಂಡರ್​ ಹುದ್ದೆ ನೀಡಲಾಗಿದೆ.

ಗಡಿ ಸಂಘರ್ಷದ ನಡುವೆ ಚೀನಾ ಸೇನೆಯಲ್ಲಿ ಮಹತ್ವದ ಬದಲಾವಣೆ; ಕಮಾಂಡರ್​ ಬದಲಾಗಿದ್ದೇಕೆ?
ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​
Lakshmi Hegde
|

Updated on:Dec 20, 2020 | 6:07 PM

Share

ಬೀಜಿಂಗ್​: ಪೂರ್ವ ಲಡಾಖ್​ನಲ್ಲಿ ಭಾರತ-ಚೀನಾ ಸೈನಿಕರ ನಡುವೆ ಒಂದಿಲ್ಲೊಂದು ಕಾರಣಕ್ಕೆ ಸಂಘರ್ಷದ ಕಿಡಿ ಹಾರುತ್ತಲೇ ಇದೆ. ಗಡಿಯಲ್ಲಿ ಚೀನಾ ತನ್ನ ಸೇನೆಗೆ ಬಲ ತುಂಬಲು ಚೀನಾ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ಭಾರತವೂ ಪ್ರತಿನಡೆಯ ಮೂಲಕ ತನ್ನ ನಿಯೋಜನೆ ಹೆಚ್ಚಿಸಿಕೊಳ್ಳುತ್ತಿದೆ. ಇದೀಗ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್​ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಭಾರತ-ಚೀನಾ ಗಡಿಯ ಮೇಲ್ವಿಚಾರಣೆ ಮಾಡುತ್ತಿರುವ ಚೀನಾ ಪೀಪಲ್ಸ್​ ಲಿಬರೇಷನ್​ ಆರ್ಮಿಯ ವೆಸ್ಟರ್ನ್​ ಥಿಯೇಟರ್​ ಕಮಾಂಡ್​ಗೆ ಕಮಾಂಡರ್​ ಆಗಿ ಹೊಸ ಜನರಲ್​​ ಒಬ್ಬರನ್ನು ಷಿ ಜಿನ್​ಪಿಂಗ್​ ನೇಮಕ ಮಾಡಿದ್ದಾರೆ. ಕೇಂದ್ರ ಮಿಲಿಟರಿ ಆಯೋಗದ (CMC) ಮಖ್ಯಸ್ಥರೂ ಆಗಿರುವ ಷಿ ಜಿನ್​ಪಿಂಗ್​, ಭಾರತ-ಚೀನಾ ಗಡಿ ವಿವಾದದ ನಡುವೆ ಜನರಲ್​ ಜಾಂಗ್ ಕ್ಸುಡಾಂಗ್​​ರನ್ನು ಕಮಾಂಡರ್​ ಆಗಿ ನೇಮಕ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಚೀನಾ ಮಾಧ್ಯಮಗಳ ಪ್ರಕಾರ, ಷಿ ಒಟ್ಟು ನಾಲ್ವರು ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಬಡ್ತಿ ನೀಡಿದ್ದಾರೆ. ಅದರಲ್ಲಿ ಜನರಲ್​ ಝಾಂಗ್​ರಿಗೆ ಕಮಾಂಡರ್​ ಹುದ್ದೆ ನೀಡಲಾಗಿದೆ.

ಮೇ ತಿಂಗಳಿಂದಲೂ ಪೂರ್ವ ಲಡಾಖ್​ನಲ್ಲಿ ಎರಡೂ ಸೇನೆಗಳ ಮಧ್ಯೆ ಪದೇಪದೆ ಸಂಘರ್ಷ ಏರ್ಪಡುತ್ತಿದೆ. ಭಾರತ-ಚೀನಾ ರಾಜತಾಂತ್ರಿಕ ಮಾತುಕತೆಯ ನಡುವೆಯೂ ಸೇನಾ ಸಂಘರ್ಷಗಳು ಕಡಿಮೆಯಾಗಿಲ್ಲ. ಇಷ್ಟು ದಿನ ಝಾವೋ ಜುಂಗ್ಕಿ ವೆಸ್ಟರ್ನ್​ ಥಿಯೇಟರ್​ ಕಮಾಂಡರ್​ ಆಗಿದ್ದರು. 2017ರಲ್ಲಿ ನಡೆದ ಡೋಕ್ಲಾಮ್​ ಸಂಘರ್ಷದ ವೇಳೆ ಇವರು ನೇಮಕರಾಗಿದ್ದರು. ಇದೀಗ ಝಾವೋ ಸ್ಥಾನಕ್ಕೆ ಜಾಂಗ್ ಕ್ಸುಡಾಂಗ್ ಆಗಮಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಮಹತ್ವದ ಬೆಳವಣಿಗೆ ಎನಿಸಿದೆ.

ನೇಪಾಳದಲ್ಲಿ ಹಠಾತ್ ರಾಜಕೀಯ ಬೆಳವಣಿಗೆ: ಸಂಸತ್ತು ವಿಸರ್ಜಿಸಿ ಚುನಾವಣೆ ಘೋಷಿಸಿದ ರಾಷ್ಟ್ರಪತಿ

Published On - 5:45 pm, Sun, 20 December 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ