AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಭಾರಿ ಮಳೆ, ಸೇತುವೆ ಕುಸಿದು 11 ಮಂದಿ ಸಾವು, 30 ಜನರು ನಾಪತ್ತೆ

ಚೀನಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಾಯುವ್ಯ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಸೇತುವೆಯೊಂದು ಭಾಗಶಃ ಕುಸಿದಿದ್ದು, 11 ಮಂದಿ ಮೃತಪಟ್ಟಿದ್ದಾರೆ.

ಚೀನಾದಲ್ಲಿ ಭಾರಿ ಮಳೆ, ಸೇತುವೆ ಕುಸಿದು 11 ಮಂದಿ ಸಾವು, 30 ಜನರು ನಾಪತ್ತೆ
ಸೇತುವೆ ಕುಸಿತ
ನಯನಾ ರಾಜೀವ್
|

Updated on: Jul 20, 2024 | 2:33 PM

Share

ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಆಧುನಿಕ ಮೂಲಸೌಕರ್ಯಕ್ಕೆ ಹೆಸರುವಾಸಿಯಾಗಿರುವ ಚೀನಾದಲ್ಲಿ ಸೇತುವೆ ಕುಸಿದು 11 ಮಂದಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿದ್ದಾರೆ. ವಾಯುವ್ಯ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಸೇತುವೆಯೊಂದು ಭಾಗಶಃ ಕುಸಿದಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಹಠಾತ್ ಪ್ರವಾಹದಿಂದಾಗಿ ಹೆದ್ದಾರಿ ಸೇತುವೆ ಕುಸಿದು ಕೆಲವು ವಾಹನಗಳು ನದಿಗೆ ಬಿದ್ದಿವೆ. ಶನಿವಾರದ ಹೊತ್ತಿಗೆ ಐದು ವಾಹನಗಳು ನೀರಿನಲ್ಲಿ ಬಿದ್ದಿರುವುದು ದೃಢಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಶಾಂಕ್ಸಿಯ ಬಾವೋಜಿ ನಗರದಲ್ಲಿ ಮಳೆಯ ಪ್ರವಾಹ ಮತ್ತು ಮಣ್ಣಿನ ಕುಸಿತದ ನಂತರ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಕಾಣೆಯಾಗಿದ್ದಾರೆ. ಚೀನಾದಲ್ಲಿ ಈ ಬಾರಿ ಬೇಸಿಗೆಯಿಂದ ಜನರು ಪರಿತಪಿಸಿದ್ದರು. ನೈಋತ್ಯ ಚೀನಾದ ಜಿಗಾಂಗ್ ನಗರದಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ.

14 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಬುಧವಾರ ಸಂಜೆ 6 ಗಂಟೆಯ ನಂತರ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಕರು ಬೆಂಕಿ ಕರೆಗೆ ಸ್ಪಂದಿಸಿದರು ಮತ್ತು 75 ಜನರನ್ನು ಸುರಕ್ಷಿತವಾಗಿ ರಕ್ಷಿಸಿದರು. ಕಳೆದ ಕೆಲವು ದಿನಗಳಿಂದ ಚೀನಾದಲ್ಲಿ ಭಾರಿ ಮಳೆಯಾಗುತ್ತಿದೆ, ಭಾರತದಲ್ಲಿಯೂ ಮುಂಗಾರು ಆರಂಭವಾದಾಗಿನಿಂದ ಹಲವು ಸೇತುವೆಗಳು ಕುಸಿದಿವೆ. ಉತ್ತರಾಖಂಡದ ಋಷಿಕೇಶ-ಬದ್ರಿನಾಥ ಹೆದ್ದಾರಿಯಲ್ಲಿ ರುದ್ರ ಪ್ರಯಾಗದ ಬಳಿ ನಿರ್ಮಾಣ ಹಂತದಲ್ಲಿದ್ದ ಸಿಗ್ನೇಚರ್ ಸೇತುವೆಯ ಒಂದು ಭಾಗವು ಕುಸಿದಿದೆ.

ಒಳ್ಳೆಯ ವಿಷಯವೇನೆಂದರೆ ಆ ಸಮಯದಲ್ಲಿ ಕಾರ್ಮಿಕರೂ ಯಾರೂ ಕೂಡ ಆ ಸ್ಥಳದಲ್ಲಿರಲಿಲ್ಲ. 66 ಕೋಟಿ ವೆಚ್ಚದಲ್ಲಿ ನಾರ್ಕೋಟಾದಲ್ಲಿ 110 ಮೀಟರ್ ಉದ್ದದ ಸಿಗ್ನೇಚರ್ ಸೇತುವೆಯನ್ನು ನಿರ್ಮಿಸಲಾಗುತ್ತಿದೆ.

ಮತ್ತಷ್ಟು ಓದಿ: ಬಿಹಾರದಲ್ಲಿ 15 ವರ್ಷ ಹಳೆಯ ಸೇತುವೆ ಕುಸಿತ; 15 ದಿನಗಳಲ್ಲಿ ಕುಸಿದಿದ್ದು 10 ಸೇತುವೆಗಳು!

ಈ ಯೋಜನೆಯ ಕೆಲಸ 2021ರಿಂದ ನಡೆಯುತ್ತಿದೆ. 2022ರಲ್ಲಿ ಈ ಸೇತುವೆಯ ತಳವು ಕುಸಿದು ಮೂರು ಮಂದಿ ಪ್ರಾಣ ಕಳೆದುಕೊಂಡಿದ್ದರು. ಬಿಹಾರದಲ್ಲಿ ಭಾರಿ ಮಳೆಗೆ ಅನೇಕ ಸೇತುವೆಗಳು ಕುಸಿದಿವೆ, ಜೂನ್ ತಿಂಗಳಲ್ಲಿ ಬಿಹಾರದಲ್ಲಿ 11 ದಿನಗಳಲ್ಲಿ ಐದು ಸೇತುವೆಗಳು ಕುಸಿದಿವೆ. ಜೂನ್ 28ರಂದು ಗಂಗಾ ನದಿಗೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದಿತ್ತು. ಸೇತುವೆ ಕುಸಿತದ ಬಗ್ಗೆಯೂ ರಾಜಕೀಯ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ