AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಭಾರಿ ಮಳೆ, ಸೇತುವೆ ಕುಸಿದು 11 ಮಂದಿ ಸಾವು, 30 ಜನರು ನಾಪತ್ತೆ

ಚೀನಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಾಯುವ್ಯ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಸೇತುವೆಯೊಂದು ಭಾಗಶಃ ಕುಸಿದಿದ್ದು, 11 ಮಂದಿ ಮೃತಪಟ್ಟಿದ್ದಾರೆ.

ಚೀನಾದಲ್ಲಿ ಭಾರಿ ಮಳೆ, ಸೇತುವೆ ಕುಸಿದು 11 ಮಂದಿ ಸಾವು, 30 ಜನರು ನಾಪತ್ತೆ
ಸೇತುವೆ ಕುಸಿತ
ನಯನಾ ರಾಜೀವ್
|

Updated on: Jul 20, 2024 | 2:33 PM

Share

ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಆಧುನಿಕ ಮೂಲಸೌಕರ್ಯಕ್ಕೆ ಹೆಸರುವಾಸಿಯಾಗಿರುವ ಚೀನಾದಲ್ಲಿ ಸೇತುವೆ ಕುಸಿದು 11 ಮಂದಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿದ್ದಾರೆ. ವಾಯುವ್ಯ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಸೇತುವೆಯೊಂದು ಭಾಗಶಃ ಕುಸಿದಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಹಠಾತ್ ಪ್ರವಾಹದಿಂದಾಗಿ ಹೆದ್ದಾರಿ ಸೇತುವೆ ಕುಸಿದು ಕೆಲವು ವಾಹನಗಳು ನದಿಗೆ ಬಿದ್ದಿವೆ. ಶನಿವಾರದ ಹೊತ್ತಿಗೆ ಐದು ವಾಹನಗಳು ನೀರಿನಲ್ಲಿ ಬಿದ್ದಿರುವುದು ದೃಢಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಶಾಂಕ್ಸಿಯ ಬಾವೋಜಿ ನಗರದಲ್ಲಿ ಮಳೆಯ ಪ್ರವಾಹ ಮತ್ತು ಮಣ್ಣಿನ ಕುಸಿತದ ನಂತರ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಕಾಣೆಯಾಗಿದ್ದಾರೆ. ಚೀನಾದಲ್ಲಿ ಈ ಬಾರಿ ಬೇಸಿಗೆಯಿಂದ ಜನರು ಪರಿತಪಿಸಿದ್ದರು. ನೈಋತ್ಯ ಚೀನಾದ ಜಿಗಾಂಗ್ ನಗರದಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಜನರು ಸಾವನ್ನಪ್ಪಿದ್ದಾರೆ.

14 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಬುಧವಾರ ಸಂಜೆ 6 ಗಂಟೆಯ ನಂತರ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಕರು ಬೆಂಕಿ ಕರೆಗೆ ಸ್ಪಂದಿಸಿದರು ಮತ್ತು 75 ಜನರನ್ನು ಸುರಕ್ಷಿತವಾಗಿ ರಕ್ಷಿಸಿದರು. ಕಳೆದ ಕೆಲವು ದಿನಗಳಿಂದ ಚೀನಾದಲ್ಲಿ ಭಾರಿ ಮಳೆಯಾಗುತ್ತಿದೆ, ಭಾರತದಲ್ಲಿಯೂ ಮುಂಗಾರು ಆರಂಭವಾದಾಗಿನಿಂದ ಹಲವು ಸೇತುವೆಗಳು ಕುಸಿದಿವೆ. ಉತ್ತರಾಖಂಡದ ಋಷಿಕೇಶ-ಬದ್ರಿನಾಥ ಹೆದ್ದಾರಿಯಲ್ಲಿ ರುದ್ರ ಪ್ರಯಾಗದ ಬಳಿ ನಿರ್ಮಾಣ ಹಂತದಲ್ಲಿದ್ದ ಸಿಗ್ನೇಚರ್ ಸೇತುವೆಯ ಒಂದು ಭಾಗವು ಕುಸಿದಿದೆ.

ಒಳ್ಳೆಯ ವಿಷಯವೇನೆಂದರೆ ಆ ಸಮಯದಲ್ಲಿ ಕಾರ್ಮಿಕರೂ ಯಾರೂ ಕೂಡ ಆ ಸ್ಥಳದಲ್ಲಿರಲಿಲ್ಲ. 66 ಕೋಟಿ ವೆಚ್ಚದಲ್ಲಿ ನಾರ್ಕೋಟಾದಲ್ಲಿ 110 ಮೀಟರ್ ಉದ್ದದ ಸಿಗ್ನೇಚರ್ ಸೇತುವೆಯನ್ನು ನಿರ್ಮಿಸಲಾಗುತ್ತಿದೆ.

ಮತ್ತಷ್ಟು ಓದಿ: ಬಿಹಾರದಲ್ಲಿ 15 ವರ್ಷ ಹಳೆಯ ಸೇತುವೆ ಕುಸಿತ; 15 ದಿನಗಳಲ್ಲಿ ಕುಸಿದಿದ್ದು 10 ಸೇತುವೆಗಳು!

ಈ ಯೋಜನೆಯ ಕೆಲಸ 2021ರಿಂದ ನಡೆಯುತ್ತಿದೆ. 2022ರಲ್ಲಿ ಈ ಸೇತುವೆಯ ತಳವು ಕುಸಿದು ಮೂರು ಮಂದಿ ಪ್ರಾಣ ಕಳೆದುಕೊಂಡಿದ್ದರು. ಬಿಹಾರದಲ್ಲಿ ಭಾರಿ ಮಳೆಗೆ ಅನೇಕ ಸೇತುವೆಗಳು ಕುಸಿದಿವೆ, ಜೂನ್ ತಿಂಗಳಲ್ಲಿ ಬಿಹಾರದಲ್ಲಿ 11 ದಿನಗಳಲ್ಲಿ ಐದು ಸೇತುವೆಗಳು ಕುಸಿದಿವೆ. ಜೂನ್ 28ರಂದು ಗಂಗಾ ನದಿಗೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದಿತ್ತು. ಸೇತುವೆ ಕುಸಿತದ ಬಗ್ಗೆಯೂ ರಾಜಕೀಯ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ