AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

China Covid Cases: ಚೀನಾದಲ್ಲಿ ಕೊರೊನಾ ಪ್ರಕರಣ ಹೆಚ್ಚಿದ್ದರೂ ವಿದೇಶಿ ಪ್ರಯಾಣ ನಿರ್ಬಂಧ ತೆರವು, ಕ್ವಾರಂಟೈನ್ ಇಲ್ಲ

ಚೀನಾದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ವಿದೇಶಿ ಪ್ರಯಾಣ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇತರೆ ದೇಶಗಳಿಗೆ ತಲೆನೋವಾಗಿ ಪರಿಣಮಿಸಿದೆ.

China Covid Cases: ಚೀನಾದಲ್ಲಿ ಕೊರೊನಾ ಪ್ರಕರಣ ಹೆಚ್ಚಿದ್ದರೂ ವಿದೇಶಿ ಪ್ರಯಾಣ ನಿರ್ಬಂಧ ತೆರವು, ಕ್ವಾರಂಟೈನ್ ಇಲ್ಲ
ಚೀನಾ ಏರ್​ಪೋರ್ಟ್​
TV9 Web
| Edited By: |

Updated on: Jan 08, 2023 | 1:12 PM

Share

ಚೀನಾದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ವಿದೇಶಿ ಪ್ರಯಾಣ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಜತೆಗೆ ಕ್ವಾರಂಟೈನ್ ನಿಮವನ್ನು ಕೂಡ ತೆಗೆದುಹಾಕಿದೆ.  ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇತರೆ ದೇಶಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚೀನಾದಲ್ಲಿ ಈಗಾಗಲೇ ಶೂನ್ಯ ಕೋವಿಡ್ ನಿಯಮವನ್ನು ಕೂಡ ಹಿಂಪಡೆದಿದ್ದು, ಇದೀಗ ವಿದೇಶಿ ಪ್ರಯಾಣ ನಿರ್ಬಂಧವನ್ನು ಕೂಡ ಕೊನೆಗೊಳಿಸಿದೆ. ಯುರೋಪಿಯನ್ ಯೂನಿಯನ್ ಸದಸ್ಯ ರಾಷ್ಟ್ರಗಳಿಗೆ ಬರುವ ಚೀನ ಪ್ರಜೆಗಳು ಕೊವಿಡ್- ನೆಗೆಟಿವ್‍ ಪ್ರಮಾಣ ಪತ್ರ ಕಡ್ಡಾಯ ಎಂದು ಕಠಿಣ ನಿರ್ಬಂಧ ಹೇರುವ ಚಿಂತನೆ ಮುಂದುವರೆಸಿದೆ.

ಕಳೆದ ಒಂದು ವಾರದಿಂದ ಐರೋಪ್ಯ ಒಕ್ಕೂಟದ ಆರೋಗ್ಯ ತಜ್ಞರ ನಡುವಿನ ಮಾತುಕತೆಯ ನಂತರ, ಇಟಲಿ, ಫ್ರಾನ್ಸ್ ಮತ್ತು ಸ್ಪೇನ್‍ನಂತಹ ದೇಶಗಳು ಈಗಾಗಲೇ ಜಾರಿಗೆ ತಂದ ಪ್ರಯಾಣದ ನಿರ್ಬಂಧವನ್ನು ಎಲ್ಲಾ 27 ಸದಸ್ಯ ರಾಷ್ಟ್ರಗಳು ಪಾಲಿಸಲು ಮುಂದಾಗಿದೆ. ಚೀನಾ ಈ ಕ್ರಮಗಳನ್ನು ತೀವ್ರವಾಗಿ ತಿರಸ್ಕರಿಸಿದೆ ಮತ್ತು ಪ್ರತಿಕ್ರಮದ ಎಚ್ಚರಿಕೆ ನೀಡಿದೆ.

ಮತ್ತಷ್ಟು ಓದಿ: China Covid Updates: ಮುಂದಿನ 90 ದಿನಗಳಲ್ಲಿ ಚೀನಾದ ಶೇ.60ರಷ್ಟು ಜನತೆ ಕೊರೊನಾ ಸೋಂಕಿಗೆ ಒಳಗಾಗಬಹುದು: ಲಕ್ಷಾಂತರ ಮಂದಿ ಸಾಯಬಹುದು

ಚೀನಾದಿಂದ ಹೊರಹೊಮ್ಮುವ ಕೊರೊನಾವೈರಸ್ ರೂಪಾಂತರಗಳು ಈಗಾಗಲೇ ಯುರೋಪ್‍ನಲ್ಲಿ ಪ್ರಚಲಿತದಲ್ಲಿರುವುದರಿಂದ ಪ್ರಯಾಣದ ಮೇಲೆ ಯಾವುದೇ ನಿರ್ಬಂಧಗಳ ಅಗತ್ಯವಿಲ್ಲ ಎಂದು ಚೀನಾ ಸರ್ಕಾರ ಮತ್ತು ಯುರೋಪಿಯನ್ ಆರೋಗ್ಯ ತಜ್ಞರು ಹೇಳಿದ್ದಾರೆ.

ವಿಶ್ವಾದ್ಯಂತ ಸುಮಾರು 300 ವಿಮಾನಯಾನ ಸಂಸ್ಥೆಗಳನ್ನು ಪ್ರತಿನಿಧಿಸುವ ಇಂಟನ್ರ್ಯಾಷನಲ್ ಏರ್ ಟ್ರಾನ್ಸ್‍ಪೋರ್ಟ್ ಅಸೋಸಿಯೇಷನ್ ಇದಕ್ಕೆ ಪ್ರಬಲ ಧ್ವನಿನೀಡಿದೆ.

ಯುರೋಪಿಯನ್ ಯೂನಿಯನ್ ಅಧ್ಯಕ್ಷ ಸ್ಥಾನವನ್ನು ಹೊಂದಿರುವ ಸ್ವೀಡನ್ ಮಾತ್ರ , ಚೀನಾದಿಂದ ಬರುವ ಪ್ರಯಾಣಿಕರು ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳುವ ನಿರ್ಧಾರಗಳಿಗೆ ಸಿದ್ಧರಾಗಿರಬೇಕು ಎಂದು ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ