AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಆಕ್ರಮಣ ಜೋರಾಗಿದೆ, ಅಲ್ಲಿ ಚೀನಾದಲ್ಲಿ ಮತ್ತೆ ಏನಾಗಿದೆ?

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ. ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) […]

KUSHAL V
| Edited By: |

Updated on:Jul 27, 2020 | 10:03 PM

Share

ಇಡೀ ವಿಶ್ವಕ್ಕೆ ವೈರಸ್​ನ ಉಡುಗೊರೆಯಾಗಿ ನೀಡಿರುವ ಚೀನಾ ಕೆಲವು ತಿಂಗಳಿಂದ ಮಹಾಮಾರಿಯ ಪಾಶದಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರುಬಿಟ್ಟಿತ್ತು. ಆದರೆ, ಗುರುವಿಗೆ ತಿರುಮಂತ್ರ ಎಂಬಂತೆ ಕೊರೊನಾ ಇದೀಗ ಮತ್ತೊಮ್ಮೆ ತನ್ನ ತವರೂರಿನಲ್ಲಿ ಕಾಣಿಸಿಕೊಂಡಿದೆ. ಸೆಕೆಂಡ್​ ಇನ್ನಿಂಗ್ಸ್ ಆರಂಭಿಸೋಕೆ ಮುಂದಾಗಿದೆ.

ಹೌದು, ಕಳೆದ ಏಪ್ರಿಲ್​ ಬಳಿಕೆ ಇಂದು ಮೊದಲ ಬಾರಿಗೆ ಚೀನಾದಲ್ಲಿ 61 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 57 ಸ್ಥಳೀಯವಾಗಿ ವರದಿಯಾಗಿದ್ದು ಉಳಿದ ಪ್ರಕರಣಗಳು ವಿದೇಶದಿಂದ ಬಂದವರಲ್ಲಿ ಪತ್ತೆಯಾಗಿದೆ. ದೇಶದ ಜಿಂಜಿಯಾಂಗ್​ (Xinjiang) ಹಾಗೂ ಲಿಯಾವೋನಿಂಗ್ (Liaoning) ಪ್ರದೇಶದಲ್ಲಿ ಅತಿ ಹೆಚ್ಚು ಕೇಸ್​ಗಳು ಪತ್ತೆಯಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಹಾಗಾಗಿ, ಆರೋಗ್ಯ ಅಧಿಕಾರಿಗಳು ಸೋಂಕಿತ ಪ್ರದೇಶಗಳಲ್ಲಿ ಸಾಮೂಹಿಕ ಕೊವಿಡ್​ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ, ಸೋಂಕು ಪತ್ತೆಯಾದ ಪಟ್ಟಣಗಳನ್ನ ಲಾಕ್​ಡೌನ್ ಮಾಡಲಾಗಿದೆ. ವಿಪರ್ಯಾಸವೆಂದರೆ, ವೈರಸ್​ನ ಮತ್ತೆ ಹಬ್ಬಿಸಿದ ಪ್ರಾಥಮಿಕ ಸೋಂಕಿತ ಯಾರು ಎಂದು ಪತ್ತೆಯಾಗಿಲ್ಲ.

ಕರ್ನಾಟಕದಲ್ಲಿ ಏನಾಗಿದೆ? ಅದೇ ಕರ್ನಾಟಕದಲ್ಲಿ ನಿನ್ನೆಯ ವೇಳೆಗೆ 55,388 ಸಕ್ರಿಯ ಪ್ರಕರಣಗಳಿದ್ದು, ತಮಿಳುನಾಡಿನಲ್ಲಿ 52,273 ಸಕ್ರಿಯ ಕೇಸ್​ಗಳಿವೆ. ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರಕ್ಕೆ ಮೊದಲ ಸ್ಥಾನ ಪಕ್ಕಾ ಆಗಿದ್ದು, ಇಲ್ಲಿ 1.44 ಲಕ್ಷ ಸಕ್ರಿಯ ಕೇಸ್​ಗಳಿವೆ.

Published On - 12:10 pm, Mon, 27 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ