AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ […]

ಚೀನಾದಲ್ಲಿ 9 ದಿನಗಳಿಂದ ಕೊರೊನಾ ಕೇಸ್ ಇಲ್ಲ.. ಆದರೆ?
KUSHAL V
| Edited By: ಸಾಧು ಶ್ರೀನಾಥ್​|

Updated on: Jul 15, 2020 | 3:21 PM

Share

ದೆಹಲಿ: ತನ್ನೊಳಗೆ ಹುಟ್ಟಿದ ಕೊರೊನಾ ವೈರಸ್​ನಿಂದ ಬಳಲಿ ಬೆಂಡಾಗಿ ಹೋಗಿದ್ದ ನೆರೆಯ ಚೀನಾಕ್ಕೆ ಇದೀಗ ಕೊಂಚ ನಿಟ್ಟುಸಿರು ಬಿಡಲು ಅವಕಾಶ ಸಿಕ್ಕಿದೆ. ದೇಶದಲ್ಲಿ ಕಳೆದ 9 ದಿನಗಳಿಂದ ಯಾವುದೇ ಹೊಸ ಕೇಸ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ದೇಶದಲ್ಲಿ ಸ್ಥಳೀಯವಾಗಿ ಈವರೆಗೆ ಹೊಸ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ. ಕೇವಲ ವಿದೇಶದಿಂದ ಬಂದವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಚೀನಾದಲ್ಲಿ ಒಟ್ಟು 83,611 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಮಹಾಮಾರಿಯಿಂದ ಇಷ್ಟು ದಿನ ನಲುಗಿ ಹೋಗಿದ್ದ ಚೀನಾದಲ್ಲಿ ಇದೀಗ ಸ್ಥಳೀಯ ಪ್ರವಾಸೋದ್ಯಮ ಪುನಃ ಆರಂಭವಾಗಿದೆ. ಆದರೆ, ಚೀನಾದ ಹಾಂಗ್​ಕಾಂಗ್ ನಗರದಲ್ಲಿ ಸೋಂಕಿನ ಕೇಸ್​ಗಳು ಹೆಚ್ಚಳವಾಗಿರೋ ಹಿನ್ನೆಲೆಯಲ್ಲಿ ಅಲ್ಲಿನ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸಿದೆ.  ಹೋಟೆಲ್​, ರೆಸ್ಟೋರೆಂಟ್ ಮತ್ತು ಥೀಮ್​ ಪಾರ್ಕ್​ಗಳನ್ನ ಬಂದ್​ ಮಾಡಲು ನಿರ್ಧರಿಸಿದೆ. ಹಾಗಾಗಿ, ಕಳೆದ ಜೂನ್​ನಲ್ಲಿ ಓಪನ್​ ಆಗಿದ್ದ ಖ್ಯಾತ ಥೀಮ್​ ಪಾರ್ಕ್​ ಡಿಸ್ನಿಲ್ಯಾಂಡ್ ಇದೀಗ ಮತ್ತೆ ಬಂದ್ ಆಗಲಿದೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್