AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಮಾತುಕತೆಯಿಂದ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಿ: ಚೀನಾದಿಂದ ರಷ್ಯಾ-ಉಕ್ರೇನ್​ಗೆ ಶಾಂತಿ ಪಾಠ

ಎಲ್ಲಾ ಸಮಸ್ಯೆಗೂ ಪರಮಾಣು ಅಸ್ತ್ರವೇ   ಪರಿಹಾರವಲ್ಲ ಶಾಂತಿಯುತ ಮಾತುಕತೆಯಿಂದ ಸಮಸ್ಯೆಯನ್ನು ಬರೆಹರಿಸಿಕೊಳ್ಳಿ ಎಂದು ರಷ್ಯಾ ಹಾಗೂ ಉಕ್ರೇನ್​ಗೆ ಚೀನಾ ಪಾಠ ಮಾಡಿದೆ.

Russia Ukraine War: ಮಾತುಕತೆಯಿಂದ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಿ: ಚೀನಾದಿಂದ ರಷ್ಯಾ-ಉಕ್ರೇನ್​ಗೆ ಶಾಂತಿ ಪಾಠ
ರಷ್ಯಾ-ಉಕ್ರೇನ್ ಯುದ್ಧ
Follow us
ನಯನಾ ರಾಜೀವ್
|

Updated on: Feb 24, 2023 | 8:47 AM

ಎಲ್ಲಾ ಸಮಸ್ಯೆಗೂ ಪರಮಾಣು ಅಸ್ತ್ರವೇ   ಪರಿಹಾರವಲ್ಲ ಶಾಂತಿಯುತ ಮಾತುಕತೆಯಿಂದ ಸಮಸ್ಯೆಯನ್ನು ಬರೆಹರಿಸಿಕೊಳ್ಳಿ ಎಂದು ರಷ್ಯಾ ಹಾಗೂ ಉಕ್ರೇನ್​ಗೆ ಚೀನಾ ಪಾಠ ಮಾಡಿದೆ. ಉಕ್ರೇನ್​ನಲ್ಲಿ ನಡೆಯುತ್ತಿರುವ ಸಂಘರ್ಷವು ತೀವ್ರಗೊಳ್ಳುತ್ತಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಚೀನಾ ತೀವ್ರ ಕಳವಳ ವ್ಯಕ್ತಪಡಿಸಿದೆ. ರಷ್ಯಾ ಹಾಗೂ ಉಕ್ರೇನ್ ಯುದ್ಧ ಆರಂಭವಾಗಿ ಒಂದು ವರ್ಷ ಕಳೆದಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧದಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಬೆದರಿಕೆ ಹಾಕಿದ್ದಾರೆ.

ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ಮಾತ್ರವಲ್ಲ, ಅವುಗಳನ್ನು ನಿಯೋಜಿಸುವ ಬೆದರಿಕೆಗೂ ಚೀನಾ ತನ್ನ ವಿರೋಧವನ್ನು ಸ್ಪಷ್ಟಪಡಿಸಿದೆ. ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬಾರದು ಮತ್ತು ಪರಮಾಣು ಯುದ್ಧಗಳನ್ನು ಮಾಡಬಾರದು. ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆ ಅಥವಾ ಬಳಕೆಯನ್ನು ವಿರೋಧಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಓದಿ: Ukraine Russia War: ಜೋ ಬೈಡನ್ ಉಕ್ರೇನ್ ಭೇಟಿ ಬೆನ್ನಲ್ಲೇ ಅಮೆರಿಕ ಜತೆಗಿನ ಮಹತ್ವ ಒಪ್ಪಂದ ಮುರಿದುಕೊಂಡ ರಷ್ಯಾ

ಆಯಕಟ್ಟಿನ ಮಿತ್ರ ರಷ್ಯಾದೊಂದಿಗೆ ನಿಕಟ ಸಂಬಂಧವನ್ನು ಉಳಿಸಿಕೊಂಡು ಸಂಘರ್ಷದಲ್ಲಿ ತಟಸ್ಥ ಪಕ್ಷವಾಗಿ ತನ್ನ ಸ್ಥಾನವನ್ನು ಪಡೆದುಕೊಳ್ಳಲು ಚೀನಾ ಪ್ರಯತ್ನಿಸಿದೆ. ಚೀನಾದ ಉನ್ನತ ರಾಜತಾಂತ್ರಿಕ ವಾಂಗ್ ಯಿ ಬುಧವಾರ ಮಾಸ್ಕೋದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದರು.

ರಷ್ಯಾ ಸೇನೆಯು 2022ರ ಫೆಬ್ರವರಿ 24 ರಂದು ಉಕ್ರೇನ್​ನಲ್ಲಿ ಸೇನಾ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಸಂಘರ್ಷವು ಒಂದು ವರ್ಷ ಪೂರ್ಣಗೊಳ್ಳುತ್ತಿರುವುದನ್ನು ಉಲ್ಲೇಖಿಸಿದ ಕ್ವಿನ್, ಶಾಂತಿ ಮಾತುಕತೆಯನ್ನು ಉತ್ತೇಜಿಸುವುದನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಉಕ್ರೇನ್​ ಬಿಕ್ಕಟ್ಟಿಗೆ ರಾಜಕೀಯ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ವಾರ ಪ್ರಸ್ತಾವನೆಯನ್ನು ಪ್ರಕಟಿಸುವುದಾಗಿಯೂ ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ