AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಪುತ್ರಾ ನದಿಯಲ್ಲಿ ಜಲವಿದ್ಯುತ್​ ಯೋಜನೆ ಪ್ರಾರಂಭಕ್ಕೆ ಮುಂದಾದ ಚೀನಾ: ಭಾರತ-ಬಾಂಗ್ಲಾ ಕಳವಳ

ಟಿಬೆಟ್​ನಲ್ಲಿ ಬ್ರಹ್ಮಪುತ್ರಾ ನದಿಗೆ ಅಣೆಕಟ್ಟು ಕಟ್ಟಲು ಚೀನಾ ಮುಂದಾಗಿದ್ದು, ನದಿಯ ಕೆಳಪಾತ್ರದ ದೇಶಗಳಾದ ಭಾರತ ಮತ್ತು ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ. ನದಿ ನೀರಿನ ಬಳಕೆ ಮಾಡುತ್ತಿರುವವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಭಾರತ ಚೀನಾಕ್ಕೆ ಹೇಳಿದೆ.

ಬ್ರಹ್ಮಪುತ್ರಾ ನದಿಯಲ್ಲಿ ಜಲವಿದ್ಯುತ್​ ಯೋಜನೆ ಪ್ರಾರಂಭಕ್ಕೆ ಮುಂದಾದ ಚೀನಾ: ಭಾರತ-ಬಾಂಗ್ಲಾ ಕಳವಳ
ಬ್ರಹ್ಮಪುತ್ರ ನದಿ (ಎಎನ್​ಐ ಚಿತ್ರ)
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 01, 2020 | 3:02 PM

Share

ಬೀಜಿಂಗ್​: ಬ್ರಹ್ಮಪುತ್ರ ನದಿಯ ಮೇಲೆ ನೆರೆ ರಾಷ್ಟ್ರ ಚೀನಾದ ಕಣ್ಣು ಬಿದ್ದಿದೆ. ಈ ನದಿಗೆ ಟಿಬೆಟ್​ನಲ್ಲಿ ಅಣೆಕಟ್ಟು ಕಟ್ಟಿ, ಬೃಹತ್​ ಜಲವಿದ್ಯುತ್​ ಯೋಜನೆ ಪ್ರಾರಂಭ ಮಾಡಲು ಮುಂದಾಗಿದೆ.

14ನೇ ಪಂಚವಾರ್ಷಿಕ ಯೋಜನೆಯಡಿ ಅಣೆಕಟ್ಟು ನಿರ್ಮಿಸಲು ಚೀನಾ ಮುಂದಾಗಿದ್ದು, ಮುಂದಿನ ವರ್ಷದಲ್ಲಿ ಕಾರ್ಯ ಪ್ರಾರಂಭವಾಗಲಿದೆ ಎಂದು ಅಲ್ಲಿನ ಮಾಧ್ಯಮವೊಂದು ಹೇಳಿದೆ.

ಟಿಬೆಟ್​ನಲ್ಲಿ ಬ್ರಹ್ಮಪುತ್ರಾ ನದಿಗೆ ಯಾರ್ಲುಂಗ್​ ಝಾಂಗ್​ಬೋ ನದಿ ಎಂದು ಕರೆಯಲಾಗುತ್ತಿದೆ. ಈ ನದಿಪಾತ್ರದಲ್ಲಿಯೇ ಚೀನಾ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ. ಈ ಬಗ್ಗೆ ಚೀನಾದ ವಿದ್ಯುತ್​ ನಿರ್ಮಾಣ ನಿಗಮದ ಅಧ್ಯಕ್ಷ ಯಾನ್​ ಝಿಯಾಂಗ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾಗಿ ಗ್ಲೋಬಲ್ ಟೈಮ್ಸ್ ಕೂಡ ವರದಿ ಮಾಡಿದೆ. ಈ ಯೋಜನೆಯ ಸಂಪೂರ್ಣ ವರದಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಇದು ಚೀನಾದ ಜಲವಿದ್ಯುತ್​ ನಿರ್ಮಾಣ ನಿಗಮದ ಉದ್ಯಮದಲ್ಲಿಯೇ ಒಂದು ಐತಿಹಾಸಿಕ ಯೋಜನೆ ಎಂದೂ ಯಾನ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ-ಬಾಂಗ್ಲಾ ಆತಂಕ ಟಿಬೆಟ್​ನಲ್ಲಿ ಬ್ರಹ್ಮಪುತ್ರಾ ನದಿಗೆ ಅಣೆಕಟ್ಟು ಕಟ್ಟಲು ಚೀನಾ ಮುಂದಾಗಿದ್ದು, ನದಿಯ ಕೆಳಪಾತ್ರದ ದೇಶಗಳಾದ ಭಾರತ ಮತ್ತು ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ. ನದಿ ನೀರಿನ ಬಳಕೆ ಮಾಡುತ್ತಿರುವವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಭಾರತ ಚೀನಾಕ್ಕೆ ಹೇಳಿದೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಚೀನಾ, ಭಾರತ ಮತ್ತು ಬಾಂಗ್ಲಾದೇಶಗಳ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು, ಯಾವುದೇ ತೊಂದರೆ ಆಗದ ರೀತಿಯಲ್ಲಿ ಅಣೆಕಟ್ಟು ಕಟ್ಟಲಾಗುವುದು. ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದೆ.

ಟಿಬೆಟ್​ನಲ್ಲಿ ಚೀನಾ 2015ರಲ್ಲಿ 1.5 ಶತಕೋಟಿ​ ಡಾಲರ್​ ವೆಚ್ಚದಲ್ಲಿ ಝಾಮ್​ ಜಲಶಕ್ತಿ ಸ್ಥಾವರವನ್ನು ನಿರ್ಮಾಣ ಮಾಡಿದೆ. ಇದೀಗ ಹೊಸ ಡ್ಯಾಮ್​ನ್ನು ಟಿಬೆಟ್​-ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ ಮೆಡೋಗ್​ ಪ್ರದೇಶದಲ್ಲಿ ಕಟ್ಟಲು ಮುಂದಾಗಿದೆ.

ಇದನ್ನೂ ಓದಿ: ಕೊರೊನಾ ಹುಟ್ಟಿದ್ದು ಚೀನಾದಲ್ಲಿ ಅಲ್ಲ ಭಾರತದಲ್ಲಿ.. ಚೀನಾ ಹೊಸ ವರಸೆಗೆ ಬಿದ್ದು ಬಿದ್ದು ನಕ್ಕ ಸಂಶೋಧಕರು

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ