AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಗಗನಯಾತ್ರಿಗಳನ್ನು ಹೊತ್ತು ಆಕಾಶಕ್ಕೆ ಹಾರಿದ ಚೀನಾದ ಮೊದಲ ಮಾನವ ಸಹಿತ ಬಾಹ್ಯಾಕಾಶ ನೌಕೆ

ಮೂವರು ಗಗನಯಾತ್ರಿಗಳು ಮೂರು ತಿಂಗಳುಗಳ ಕಾಲ ಹೊಸ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿಯಲಿದ್ದಾರೆ ಎಂಬುದರ ಕುರಿತಾಗಿ ಸಿಎಮ್​ಎಸ್​ಎ ನಿರ್ದೇಶಕ​ ಉಡಾವಣಾ ಕೇಂದ್ರಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಮೂವರು ಗಗನಯಾತ್ರಿಗಳನ್ನು ಹೊತ್ತು ಆಕಾಶಕ್ಕೆ ಹಾರಿದ ಚೀನಾದ ಮೊದಲ ಮಾನವ ಸಹಿತ ಬಾಹ್ಯಾಕಾಶ ನೌಕೆ
Follow us
TV9 Web
| Updated By: shruti hegde

Updated on:Jun 17, 2021 | 1:35 PM

ಹೊಸದಾಗಿ ನಿರ್ಮಿಸುತ್ತಿರುವ ಬಾಹ್ಯಾಕಾಶ ನಿಲ್ದಾಣಕ್ಕೆ ಮೂವರು ಗಗನಯಾತ್ರಿಗಳನ್ನು ಹೊತ್ತ ಚೀನಾದ ರಾಕೆಟ್​ ಗುರುವಾರ ಬೆಳಿಗ್ಗೆ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಚೀನಾದ ಮೊದಲ ಮಾನವ ಸಹಿತ ಬಾಹ್ಯಾಕಾಶಕ್ಕೆ ಇಬ್ಬರು ಅನುಭವಿ ಹಾಗೂ ಮತ್ತೋರ್ವ ಹೊಸ ಗಗನಯಾತ್ರಿ ತಲುಪಿದ್ದಾರೆ. ನಿಯೆ ಹೈಶೆಂಗ್​, ಲಿಯು ಬೋಮಿಂಗ್​ ಮತ್ತು ಟ್ಯಾಂಗ್​ ಹಾಂಗ್ಬೊ ಎಂಬ ಮೂವರು ಗಗನಯಾತ್ರಿಗಳನ್ನು ಹೊತ್ತ ಶೆನ್​ಶಾವ್​-12 ಆಕಾಶನೌಕೆ​ ಗುರುವಾರ ಬೆಳಿಗ್ಗೆ ಸರಿಸುಮಾರು 9:22ರ ಸಮಯಕ್ಕೆ ಉಡಾವಣೆಗೊಂಡಿದೆ.

ಬಾಹ್ಯಾಕಾಶದಲ್ಲಿ ಹೊಸದಾದ ಮೈಲುಗಲ್ಲು ಸಾಧಿಸುವ ಉದ್ದೇಶದಿಂದಾಗಿ ಈ ಮೂವರು ಗಗನಯಾತ್ರಿಗಳನ್ನು ಕಳುಹಿಸಿಕೊಡುವುದಾಗಿ ಚೀನಾ ಮ್ಯಾನ್ಡ್​ ಸ್ಪೇಸ್​ ಏಜಿನ್ಸಿ ಈ ಹಿಂದೆ ಹೇಳಿತ್ತು. ಹಾಗೆಯೇ ಮೂವರು ಗಗನಯಾತ್ರಿಗಳ ಪರಿಚಯವನ್ನು ಕೂಡಾ ಮಾಡಿಕೊಟ್ಟಿತ್ತು. ಆ ಸಂದರ್ಭದಲ್ಲಿ ಗಗನಯಾತ್ರಿ ನಿಯೆ ಹೈಶೆಂಗ್​​ ಅವರು ಮಾತನಾಡಿ, ಈ ಯೋಜನೆಯು ಸವಾಲಿನದ್ದಾಗಿದೆ. ನಾವು ಮೂವರು ಕೂಡಿ ಸವಾಲುಗಳನ್ನು ಎದುರಿಸಿ ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದ್ದರು.

2008ರಲ್ಲಿ ಸ್ಪೇಸ್​ ವಾಕ್​ ಮಾಡಿದ ಮೊದಲ ಚೀನಾದ ಗಗನಯಾತ್ರಿ ಲಿಯು ಬೋಮಿಂಗ್​ ಮಾತನಾಡಿ, ಹಲವು ಬಾರಿ ಸ್ಪೇಸ್​ ವಾಕ್​ ಮಾಡಲು ಅವಕಾಶ ಸಿಗಲಿದೆ. ಮುಂದಿನ ವರ್ಷ ಚೀನಾ ಬಾಹ್ಯಾಕಾಶ ಸಂಸ್ಥೆ ಕಳುಹಿಸಲಿರುವ ಎರಡು ಮಾಡ್ಯೂಲ್​ಗಳನ್ನು ಜೋಡಿಸುವ ಸಿದ್ಧತೆಯನ್ನು ಮಾಡಬೇಕಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದರು. ಹೊಸಬರಾದ ಟ್ಯಾಂಗ್​​ ಹಾಂಗ್ಬೊ ಮೊದಲ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಿದ್ದಾರೆ. ಕಳೆದ ಹಲವು ವರ್ಷಗಳಿಂದ ತರಬೇತಿಯನ್ನು ಪಡೆದಿದ್ದೇನೆ ನನ್ನ ತಂಡದ ಮೇಲೆ ಸಂಪೂರ್ಣವಾದ ವಿಶ್ವಾಸ ನನಗಿದೆ ಎಂದು ಮಾತನಾಡಿದ್ದರು.

ಈ ಮೂವರು ಗಗನಯಾತ್ರಿಗಳು ಮೂರು ತಿಂಗಳುಗಳ ಕಾಲ ಹೊಸ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿಯಲಿದ್ದಾರೆ ಎಂಬುದರ ಕುರಿತಾಗಿ ಸಿಎಮ್​ಎಸ್​ಎ ನಿರ್ದೇಶಕ​ ಉಡಾವಣಾ ಕೇಂದ್ರಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅಮೇರಿಕ ಮತ್ತು ರಷ್ಯಾ ಬಳಿಕ ಸ್ವಂತ ಬಾಹ್ಯಾಕಾಶ ನೌಕೆಯಲ್ಲಿ ಗಗನಯಾತ್ರಿಗಳನ್ನು ಕಳುಹಿಸಿಕೊಟ್ಟ ಮೂರನೇ ದೇಶ ಚೀನಾವಾಗಿದೆ. ಈ ಹಿಂದೆ 2003ರಲ್ಲಿ ಗಗನಯಾತ್ರಿಗಳನ್ನು ಕಳುಹಿಸಿಕೊಟ್ಟಿತ್ತು.

ಇದನ್ನೂ ಓದಿ:

Jeff Bezos: ಬಾಹ್ಯಾಕಾಶಕ್ಕೆ ಸೈಟ್​ ಸೀಯಿಂಗ್​ಗೆ ಹೊರಟಿದ್ದಾರೆ ಅಮೆಜಾನ್ ಸಂಸ್ಥಾಪಕ ಜೆಫ್ ಬಿಜೋಸ್, ನೀವೂ ಜತೆಯಾಗಬಹುದು!

ವಿದ್ಯಾಬ್ಯಾಸಕ್ಕೆಂದು ವಿದೇಶಕ್ಕೆ ತೆರಳಿದ ಯುವಕ ಬಾಹ್ಯಾಕಾಶ ಇಂಜಿನಿಯರ್​ ಆಗಿ ವಾಪಸ್: ಭವ್ಯ ಸ್ವಾಗತ ಕೋರಿದ ಗ್ರಾಮಸ್ಥರು

Published On - 1:32 pm, Thu, 17 June 21

Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ