AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China: ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿತ, 10 ಮಂದಿ ಸಾವು

ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಮಾಹಿತಿ ನೀಡಿದೆ

China: ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿತ, 10 ಮಂದಿ ಸಾವು
ಚೀನಾದ ಜಿಮ್ ಮೇಲ್ಛಾವಣಿ ಕುಸಿತImage Credit source: CNN
ನಯನಾ ರಾಜೀವ್
|

Updated on:Jul 24, 2023 | 10:22 AM

Share

ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಮಾಹಿತಿ ನೀಡಿದೆ. ಸೋಮವಾರ ಬೆಳಗಿನ ಜಾವ 5.30ರಷ್ಟೊತ್ತಿಗೆ 14 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯದಲ್ಲಿ ಜಿಮ್​ನ ಮೇಲ್ಛಾವಣಿ ಸಂಪೂರ್ಣ ಕುಸಿದಿದ್ದು, ಅವಶೇಷಗಳಿಂದ ಜನರನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

ಸುಮಾರು 160 ಅಗ್ನಿಶಾಮಕ ಸಿಬ್ಬಂದಿ ಮತ್ತು 39 ಅಗ್ನಿಶಾಮಕ ಟ್ರಕ್‌ಗಳನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಭಾರಿ ಮಳೆಯಿಂದಾಗಿ ಜಿಮ್​ನ ಮೇಲ್ಛಾವಣಿ ಕುಸಿದಿದೆ, ನಿರ್ಮಾಣ ಕಂಪನಿಯ ಉಸ್ತುವಾರಿ ವಹಿಸಿರುವವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಕಡಿಮೆ ಸುರಕ್ಷತಾ ಮಾನದಂಡಗಳು ಮತ್ತು ಕಳಪೆ ಕಾಮಗಾರಿಯಿಂದಾಗಿ ಚೀನಾದಲ್ಲಿ ಕಟ್ಟಡಗಳ ಕುಸಿತ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:22 am, Mon, 24 July 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್