AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು. ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ […]

Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!
ಸಾಧು ಶ್ರೀನಾಥ್​
|

Updated on:Sep 30, 2020 | 11:37 AM

Share

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು.

ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ ಉದ್ದೇಶಪೂರ್ವಕವಾಗಿ ಮುಗ್ಧ ಮಕ್ಕಳಿಗೆ ಬ್ರೇಕ್​ಫಾಸ್ಟ್​ ತಿಂಡಿಯಲ್ಲಿ ವಿಷವಿಟ್ಟಿದ್ದಳು. ಶಾಲಾ ಮಕ್ಕಳನ್ನು ಹೇಗೆ ನಿಭಾಯಿಸಬೇಕು, ಅವರಲ್ಲಿ ಹೇಗೆ ಶಿಸ್ತು ಮೂಡಿಸಬೇಕು ಎಂಬ ವಿಷಯದ ಬಗ್ಗೆ ಆಕೆ ಮತ್ತೊಬ್ಬ ಶಿಕ್ಷಕಿಯ ಜೊತೆ ಜಗಳವಾಡಿದ್ದು ಈ ರಾದ್ಧಾಂತಕ್ಕೆ ಕಾರಣವಾಗಿತ್ತು.

ವಿಷಯುಕ್ತ ತಿಂಡಿ ತಿಂದ ಎಲ್ಲ 25 ಮಕ್ಕಳೂ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಅವರ ಪೈಕಿ ಒಂದು ಮಗು ಸುಮಾರು 8 ತಿಂಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ, ಅಸುನೀಗಿತ್ತು. ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ವಿಚಾರಣೆ ವೇಳೆಯೇ ಆರೋಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಅದಕ್ಕೆಂದೇ ಶಿಕ್ಷಕಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಅದಕ್ಕೂ ಮುನ್ನ 3 ವರ್ಷದ ಹಿಂದೆ ಇದೇ ಮಹಿಳೆ ತನ್ನ ಗಂಡನೊಂದಿಗೆ ಖ್ಯಾತೆ ತೆಗೆದು ಆತನಿಗೂ ಇದೇ ರೀತಿ ಊಟದಲ್ಲಿ ವಿಷಯ ಬೆರೆಸಿಕೊಟ್ಟಿದ್ದಳು. ಆತ ಅದುಹೇಗೋ ಪ್ರಾಣಾಪಾಯದಿಂದ ಬಚಾವಾಗಿದ್ದ.

Published On - 11:29 am, Wed, 30 September 20

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?