AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು. ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ […]

Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!
ಸಾಧು ಶ್ರೀನಾಥ್​
|

Updated on:Sep 30, 2020 | 11:37 AM

Share

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು.

ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ ಉದ್ದೇಶಪೂರ್ವಕವಾಗಿ ಮುಗ್ಧ ಮಕ್ಕಳಿಗೆ ಬ್ರೇಕ್​ಫಾಸ್ಟ್​ ತಿಂಡಿಯಲ್ಲಿ ವಿಷವಿಟ್ಟಿದ್ದಳು. ಶಾಲಾ ಮಕ್ಕಳನ್ನು ಹೇಗೆ ನಿಭಾಯಿಸಬೇಕು, ಅವರಲ್ಲಿ ಹೇಗೆ ಶಿಸ್ತು ಮೂಡಿಸಬೇಕು ಎಂಬ ವಿಷಯದ ಬಗ್ಗೆ ಆಕೆ ಮತ್ತೊಬ್ಬ ಶಿಕ್ಷಕಿಯ ಜೊತೆ ಜಗಳವಾಡಿದ್ದು ಈ ರಾದ್ಧಾಂತಕ್ಕೆ ಕಾರಣವಾಗಿತ್ತು.

ವಿಷಯುಕ್ತ ತಿಂಡಿ ತಿಂದ ಎಲ್ಲ 25 ಮಕ್ಕಳೂ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಅವರ ಪೈಕಿ ಒಂದು ಮಗು ಸುಮಾರು 8 ತಿಂಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ, ಅಸುನೀಗಿತ್ತು. ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ವಿಚಾರಣೆ ವೇಳೆಯೇ ಆರೋಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಅದಕ್ಕೆಂದೇ ಶಿಕ್ಷಕಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಅದಕ್ಕೂ ಮುನ್ನ 3 ವರ್ಷದ ಹಿಂದೆ ಇದೇ ಮಹಿಳೆ ತನ್ನ ಗಂಡನೊಂದಿಗೆ ಖ್ಯಾತೆ ತೆಗೆದು ಆತನಿಗೂ ಇದೇ ರೀತಿ ಊಟದಲ್ಲಿ ವಿಷಯ ಬೆರೆಸಿಕೊಟ್ಟಿದ್ದಳು. ಆತ ಅದುಹೇಗೋ ಪ್ರಾಣಾಪಾಯದಿಂದ ಬಚಾವಾಗಿದ್ದ.

Published On - 11:29 am, Wed, 30 September 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?