AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು. ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ […]

Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!
Follow us
ಸಾಧು ಶ್ರೀನಾಥ್​
|

Updated on:Sep 30, 2020 | 11:37 AM

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು.

ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ ಉದ್ದೇಶಪೂರ್ವಕವಾಗಿ ಮುಗ್ಧ ಮಕ್ಕಳಿಗೆ ಬ್ರೇಕ್​ಫಾಸ್ಟ್​ ತಿಂಡಿಯಲ್ಲಿ ವಿಷವಿಟ್ಟಿದ್ದಳು. ಶಾಲಾ ಮಕ್ಕಳನ್ನು ಹೇಗೆ ನಿಭಾಯಿಸಬೇಕು, ಅವರಲ್ಲಿ ಹೇಗೆ ಶಿಸ್ತು ಮೂಡಿಸಬೇಕು ಎಂಬ ವಿಷಯದ ಬಗ್ಗೆ ಆಕೆ ಮತ್ತೊಬ್ಬ ಶಿಕ್ಷಕಿಯ ಜೊತೆ ಜಗಳವಾಡಿದ್ದು ಈ ರಾದ್ಧಾಂತಕ್ಕೆ ಕಾರಣವಾಗಿತ್ತು.

ವಿಷಯುಕ್ತ ತಿಂಡಿ ತಿಂದ ಎಲ್ಲ 25 ಮಕ್ಕಳೂ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಅವರ ಪೈಕಿ ಒಂದು ಮಗು ಸುಮಾರು 8 ತಿಂಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ, ಅಸುನೀಗಿತ್ತು. ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ವಿಚಾರಣೆ ವೇಳೆಯೇ ಆರೋಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಅದಕ್ಕೆಂದೇ ಶಿಕ್ಷಕಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಅದಕ್ಕೂ ಮುನ್ನ 3 ವರ್ಷದ ಹಿಂದೆ ಇದೇ ಮಹಿಳೆ ತನ್ನ ಗಂಡನೊಂದಿಗೆ ಖ್ಯಾತೆ ತೆಗೆದು ಆತನಿಗೂ ಇದೇ ರೀತಿ ಊಟದಲ್ಲಿ ವಿಷಯ ಬೆರೆಸಿಕೊಟ್ಟಿದ್ದಳು. ಆತ ಅದುಹೇಗೋ ಪ್ರಾಣಾಪಾಯದಿಂದ ಬಚಾವಾಗಿದ್ದ.

Published On - 11:29 am, Wed, 30 September 20

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ