Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು. ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ […]

Breakfast ತಿಂಡಿಯಲ್ಲಿ 25 ಮಕ್ಕಳಿಗೆ ವಿಷವುಣಿಸಿದ್ದ ಶಿಕ್ಷಕಿಗೆ ಗಲ್ಲು ಶಿಕ್ಷೆ!

Updated on: Sep 30, 2020 | 11:37 AM

ಚೀನಾದಲ್ಲಿ ಮನುಷ್ಯರಿಗಿಂತ ದಾನವರೇ ಹೆಚ್ಚಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಇಡೀ ಜಗತ್ತಿಗೆ ಕೊರೊನಾ ವಿಷವುಣಿಸಿರುವ ಚೀನಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಶಿಶುವಿಹಾರದಲ್ಲಿ ಶಿಕ್ಷಕಿಯಾಗಿದ್ದ ಮಹಾತಾಯಿಯೊಬ್ಬಳು ಯಾರದೋ ಮೇಲಿನ ಕೋಪಕ್ಕೆ 25 ಮಕ್ಕಳಿಗೆ ವಿಷವುಣಿಸಿದ್ದಾಳೆ. ಸೋಡಿಯಂ ನೈಟ್ರೇಟ್​ ಎಂಬ ಮಾರಕ ರಾಸಾಯನಿಕವನ್ನು ಊಟದಲ್ಲಿ ಬೆರೆಸಿಕೊಟ್ಟಿದ್ದಕ್ಕೆ 25 ಮಕ್ಕಳ ಪೈಕಿ ಒಂದು ಮಗು ಅಸುನೀಗಿತ್ತು.

ಚೀನಾದ ಮಧ್ಯ ಪ್ರಾಂತ್ಯವಾದ ಹೆನಾನ್​ನಲ್ಲಿ ವಾಂಗ್ ಯುನ್​ ಎಂಬ ಶಿಕ್ಷಕಿ ಒಂದು ವರ್ಷದ ಹಿಂದೆ ತುಚ್ಛ ಮತ್ತು ಹೇಯವಾಗಿ ಉದ್ದೇಶಪೂರ್ವಕವಾಗಿ ಮುಗ್ಧ ಮಕ್ಕಳಿಗೆ ಬ್ರೇಕ್​ಫಾಸ್ಟ್​ ತಿಂಡಿಯಲ್ಲಿ ವಿಷವಿಟ್ಟಿದ್ದಳು. ಶಾಲಾ ಮಕ್ಕಳನ್ನು ಹೇಗೆ ನಿಭಾಯಿಸಬೇಕು, ಅವರಲ್ಲಿ ಹೇಗೆ ಶಿಸ್ತು ಮೂಡಿಸಬೇಕು ಎಂಬ ವಿಷಯದ ಬಗ್ಗೆ ಆಕೆ ಮತ್ತೊಬ್ಬ ಶಿಕ್ಷಕಿಯ ಜೊತೆ ಜಗಳವಾಡಿದ್ದು ಈ ರಾದ್ಧಾಂತಕ್ಕೆ ಕಾರಣವಾಗಿತ್ತು.

ವಿಷಯುಕ್ತ ತಿಂಡಿ ತಿಂದ ಎಲ್ಲ 25 ಮಕ್ಕಳೂ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಅವರ ಪೈಕಿ ಒಂದು ಮಗು ಸುಮಾರು 8 ತಿಂಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ, ಅಸುನೀಗಿತ್ತು. ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ವಿಚಾರಣೆ ವೇಳೆಯೇ ಆರೋಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಅದಕ್ಕೆಂದೇ ಶಿಕ್ಷಕಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಅದಕ್ಕೂ ಮುನ್ನ 3 ವರ್ಷದ ಹಿಂದೆ ಇದೇ ಮಹಿಳೆ ತನ್ನ ಗಂಡನೊಂದಿಗೆ ಖ್ಯಾತೆ ತೆಗೆದು ಆತನಿಗೂ ಇದೇ ರೀತಿ ಊಟದಲ್ಲಿ ವಿಷಯ ಬೆರೆಸಿಕೊಟ್ಟಿದ್ದಳು. ಆತ ಅದುಹೇಗೋ ಪ್ರಾಣಾಪಾಯದಿಂದ ಬಚಾವಾಗಿದ್ದ.

Published On - 11:29 am, Wed, 30 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us