AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಪುಗಾರಿಕೆಯಿಂದ ಯುದ್ಧಭೀತಿ: ನ್ಯಾಟೊ ವಿರುದ್ಧ ಹರಿಹಾಯ್ದ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್

ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ನ್ಯಾಟೊ ಪ್ರಚೋಚನೆಯೇ ಕಾರಣ ಎಂದು ಚೀನಾ ಮೊದಲಿನಿಂದಲೂ ಪ್ರತಿಪಾದಿಸುತ್ತಿದೆ.

ಗುಂಪುಗಾರಿಕೆಯಿಂದ ಯುದ್ಧಭೀತಿ: ನ್ಯಾಟೊ ವಿರುದ್ಧ ಹರಿಹಾಯ್ದ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್
ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್
TV9 Web
| Edited By: |

Updated on: Jun 23, 2022 | 10:19 AM

Share

ಬೀಚಿಂಗ್: ಗುಂಪುಗಾರಿಕೆ, ಒಕ್ಕೂಟಗಳ ಸಂಘರ್ಷ ಮತ್ತು ಸೇನಾ ಮೈತ್ರಿಗಳಿಂದ ಸಂಘರ್ಷ ಮತ್ತು ಯುದ್ಧದ ಅಪಾಯ ಹೆಚ್ಚಾಗುತ್ತದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ (Xi Jinping) ಹೇಳಿದರು. ವಿಶ್ವ ಸಮುದಾಯವು ಇಂಥ ಗುಂಪುಗಾರಿಕೆಗಳನ್ನು ವಿರೋಧಿಸಬೇಕು ಎಂದು ಕರೆ ನೀಡಿದರು. ಈ ಮಾತುಗಳನ್ನು ಷಿ ಜಿನ್​ಪಿಂಗ್ ಅವರು ಅಮೆರಿಕ ನೇತೃತ್ವದ ನ್ಯಾಟೊ (North Atlantic Treaty Organisation – NATO) ಒಕ್ಕೂಟವನ್ನೇ ಗಮನದಲ್ಲಿ ಇರಿಸಿಕೊಂಡು ಹೇಳಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ನ್ಯಾಟೊ ಪ್ರಚೋಚನೆಯೇ ಕಾರಣ ಎಂದು ಚೀನಾ ಮೊದಲಿನಿಂದಲೂ ಪ್ರತಿಪಾದಿಸುತ್ತಿದೆ.

ಜಗತ್ತಿನಲ್ಲಿ ಈ ಹಿಂದೆ ಸಂಭವಿಸಿರುವ ಹಲವು ದುರಂತಗಳು ವಿವಿಧ ದೇಶಗಳ ಯುದ್ಧೋತ್ಸಾಹಿ ಮೈತ್ರಿಗಳಿಂದ ಶಾಂತಿ ಮತ್ತು ಭದ್ರತೆಗೆ ಏನೆಲ್ಲಾ ಸಮಸ್ಯೆ ತಂದೊಡ್ಡಿದೆ ಎನ್ನುವ ಪಾಠವನ್ನು ನಮಗೆ ಕಲಿಸಿದೆ. ಇಂಥ ಮೈತ್ರಿಗಳು ನಮ್ಮನ್ನು ಯುದ್ಧದತ್ತ ಕೊಂಡೊಯ್ಯುತ್ತವೆ ಎಂದು ಅವರು ತಿಳಿಸಿದರು.

ಬ್ರಿಕ್ಸ್​ ವ್ಯಾಪಾರ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ತಮ್ಮ ಭಾಷಣದ ಬಹುತೇಕ ಅವಧಿಯನ್ನು ನ್ಯಾಟೊ ಮೈತ್ರಿಕೂಟದ ಟೀಕೆ ಮತ್ತು ರಷ್ಯಾಕ್ಕೆ ಬೆಂಬಲ ಸೂಚಿಸುವ ಉದ್ದೇಶಕ್ಕೆ ಮೀಸಲಿಟ್ಟಿದ್ದರು. ಆದರೆ ಅಮೆರಿಕ ಅಥವಾ ರಷ್ಯಾದ ಹೆಸರನ್ನು ನೇರವಾಗಿ ಎಲ್ಲಿಯೂ ಪ್ರಸ್ತಾಪಿಸಲಿಲ್ಲ. ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ಚೀನಾ ಈವರೆಗೆ ಬಹಿರಂಗವಾಗಿ ಖಂಡಿಸಿಲ್ಲ. ಉಕ್ರೇನ್ ಮೇಲಿನ ಆಕ್ರಮಣ ಎಂದೂ ಚೀನಾ ಈವರೆಗೆ ಒಪ್ಪಿಕೊಂಡಿಲ್ಲ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ