AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಪುಗಾರಿಕೆಯಿಂದ ಯುದ್ಧಭೀತಿ: ನ್ಯಾಟೊ ವಿರುದ್ಧ ಹರಿಹಾಯ್ದ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್

ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ನ್ಯಾಟೊ ಪ್ರಚೋಚನೆಯೇ ಕಾರಣ ಎಂದು ಚೀನಾ ಮೊದಲಿನಿಂದಲೂ ಪ್ರತಿಪಾದಿಸುತ್ತಿದೆ.

ಗುಂಪುಗಾರಿಕೆಯಿಂದ ಯುದ್ಧಭೀತಿ: ನ್ಯಾಟೊ ವಿರುದ್ಧ ಹರಿಹಾಯ್ದ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್
ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್
TV9 Web
| Edited By: |

Updated on: Jun 23, 2022 | 10:19 AM

Share

ಬೀಚಿಂಗ್: ಗುಂಪುಗಾರಿಕೆ, ಒಕ್ಕೂಟಗಳ ಸಂಘರ್ಷ ಮತ್ತು ಸೇನಾ ಮೈತ್ರಿಗಳಿಂದ ಸಂಘರ್ಷ ಮತ್ತು ಯುದ್ಧದ ಅಪಾಯ ಹೆಚ್ಚಾಗುತ್ತದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ (Xi Jinping) ಹೇಳಿದರು. ವಿಶ್ವ ಸಮುದಾಯವು ಇಂಥ ಗುಂಪುಗಾರಿಕೆಗಳನ್ನು ವಿರೋಧಿಸಬೇಕು ಎಂದು ಕರೆ ನೀಡಿದರು. ಈ ಮಾತುಗಳನ್ನು ಷಿ ಜಿನ್​ಪಿಂಗ್ ಅವರು ಅಮೆರಿಕ ನೇತೃತ್ವದ ನ್ಯಾಟೊ (North Atlantic Treaty Organisation – NATO) ಒಕ್ಕೂಟವನ್ನೇ ಗಮನದಲ್ಲಿ ಇರಿಸಿಕೊಂಡು ಹೇಳಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ನ್ಯಾಟೊ ಪ್ರಚೋಚನೆಯೇ ಕಾರಣ ಎಂದು ಚೀನಾ ಮೊದಲಿನಿಂದಲೂ ಪ್ರತಿಪಾದಿಸುತ್ತಿದೆ.

ಜಗತ್ತಿನಲ್ಲಿ ಈ ಹಿಂದೆ ಸಂಭವಿಸಿರುವ ಹಲವು ದುರಂತಗಳು ವಿವಿಧ ದೇಶಗಳ ಯುದ್ಧೋತ್ಸಾಹಿ ಮೈತ್ರಿಗಳಿಂದ ಶಾಂತಿ ಮತ್ತು ಭದ್ರತೆಗೆ ಏನೆಲ್ಲಾ ಸಮಸ್ಯೆ ತಂದೊಡ್ಡಿದೆ ಎನ್ನುವ ಪಾಠವನ್ನು ನಮಗೆ ಕಲಿಸಿದೆ. ಇಂಥ ಮೈತ್ರಿಗಳು ನಮ್ಮನ್ನು ಯುದ್ಧದತ್ತ ಕೊಂಡೊಯ್ಯುತ್ತವೆ ಎಂದು ಅವರು ತಿಳಿಸಿದರು.

ಬ್ರಿಕ್ಸ್​ ವ್ಯಾಪಾರ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ತಮ್ಮ ಭಾಷಣದ ಬಹುತೇಕ ಅವಧಿಯನ್ನು ನ್ಯಾಟೊ ಮೈತ್ರಿಕೂಟದ ಟೀಕೆ ಮತ್ತು ರಷ್ಯಾಕ್ಕೆ ಬೆಂಬಲ ಸೂಚಿಸುವ ಉದ್ದೇಶಕ್ಕೆ ಮೀಸಲಿಟ್ಟಿದ್ದರು. ಆದರೆ ಅಮೆರಿಕ ಅಥವಾ ರಷ್ಯಾದ ಹೆಸರನ್ನು ನೇರವಾಗಿ ಎಲ್ಲಿಯೂ ಪ್ರಸ್ತಾಪಿಸಲಿಲ್ಲ. ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ಚೀನಾ ಈವರೆಗೆ ಬಹಿರಂಗವಾಗಿ ಖಂಡಿಸಿಲ್ಲ. ಉಕ್ರೇನ್ ಮೇಲಿನ ಆಕ್ರಮಣ ಎಂದೂ ಚೀನಾ ಈವರೆಗೆ ಒಪ್ಪಿಕೊಂಡಿಲ್ಲ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ