AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಟಿಬೆಟ್​ಗೆ ಭೇಟಿ ನೀಡಿದ ಚೀನಾ ಅಧ್ಯಕ್ಷ; ಷಿ ಜಿನ್​ಪಿಂಗ್​​ರ ಈ 3 ದಿನಗಳ ಪ್ರವಾಸದಿಂದ ಭಾರತಕ್ಕೆ ಅಪಾಯ ಎಂದ ಅಮೆರಿಕ ಸಂಸದ

ಕಳೆದ ವಾರ ಚೀನಾದ ಸರ್ವಾಧಿಕಾರಿ ಕ್ಸಿ ಜಿನ್​ಪಿಂಗ್ ಭಾರತದ ಗಡಿ ಸಮೀಪ ಇರುವ ಟಿಬೆಟ್​ಗೆ ಭೇಟಿ ಕೊಟ್ಟಿದ್ದರು. ನನಗೆ ಗೊತ್ತಿರುವ ಪ್ರಕಾರ ಕಳೆದ 30ವರ್ಷಗಳಲ್ಲಿ ಚೀನಾದ ಅಧ್ಯಕ್ಷರಾದವರು ಟಿಬೆಟ್​ಗೆ ಭೇಟಿ ಕೊಟ್ಟಿದ್ದು ಎಂದು ಅಮೆರಿಕ ಸಂಸದ ಹೇಳಿದ್ದಾರೆ.

ಏಕಾಏಕಿ ಟಿಬೆಟ್​ಗೆ ಭೇಟಿ ನೀಡಿದ ಚೀನಾ ಅಧ್ಯಕ್ಷ; ಷಿ ಜಿನ್​ಪಿಂಗ್​​ರ ಈ 3 ದಿನಗಳ ಪ್ರವಾಸದಿಂದ ಭಾರತಕ್ಕೆ ಅಪಾಯ ಎಂದ ಅಮೆರಿಕ ಸಂಸದ
ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​
TV9 Web
| Edited By: |

Updated on:Jul 27, 2021 | 2:43 PM

Share

ವಾಷಿಂಗ್ಟನ್​: ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ (Xi Jinping)​ ಅವರ ಕಳೆದ ವಾರದ ಟಿಬೆಟ್​ ಭೇಟಿ ಭಾರತಕ್ಕೆ ಅಪಾಯ ತಂದೊಡ್ಡಬಹುದು ಎಂದು ಅಮೆರಿಕ (America)ದ ಜನಪ್ರತಿನಿಧಿಯೊಬ್ಬರು ಹೇಳಿದ್ದಾರೆ. ಅಲ್ಲದೆ, ಅಮೆರಿಕ ಅಧ್ಯಕ್ಷ ಜೋ ಬೈಡನ್ (Jeo Biden)​ ಚೀನಾದ ಮುನ್ನುಗ್ಗುವಿಕೆಯನ್ನು ತಡೆಗಟ್ಟಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಚೀನಾ ಅಧ್ಯಕ್ಷ ಕಳೆದ ಬುಧವಾರದಿಂದ ಮೂರು ದಿನ ಟಿಬೆಟ್​ನ ನ್ಯಿಂಗ್​ಚೀ ಪ್ರವಾಸ ಕೈಗೊಂಡಿದ್ದರು. ಈ ಪ್ರದೇಶ ಅರುಣಾಚಲ ಪ್ರದೇಶದಿಂದ ತುಂಬ ಸನಿಹದಲ್ಲಿದೆ. ಚೀನಾ ಅಧ್ಯಕ್ಷ (Chinese President)ರು ಪ್ರವಾಸದ ಬಗ್ಗೆ ಮುಂಚಿತವಾಗಿ ಯಾವುದೇ ಘೋಷಣೆ ಮಾಡದೆ ಇರುವುದು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ಚೀನಾ ಕಮ್ಯೂನಿಸ್ಟ್​ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕ್ಸಿ ಜಿನ್​ಪಿಂಗ್​, ಟಿಬೆಟ್​​ನ ಮಿಲಿಟರಿ ಕಮಾಂಡ್​ ಅಧಿಕಾರಿಗಳನ್ನು ಭೇಟಿಯಾಗಿ, ಪ್ರಾದೇಶಿಕವಾಗಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅಮೆರಿಕ ರಿಪಬ್ಲಿಕನ್​ ಪಕ್ಷದ ಸಂಸದ ಡೆವಿನ್ ನುನ್ಸ್​, ಕಳೆದ ವಾರ ಚೀನಾದ ಸರ್ವಾಧಿಕಾರಿ ಷಿ ಜಿನ್​ಪಿಂಗ್ ಭಾರತದ ಗಡಿ ಸಮೀಪ ಇರುವ ಟಿಬೆಟ್​ಗೆ ಭೇಟಿ ಕೊಟ್ಟಿದ್ದರು. ನನಗೆ ಗೊತ್ತಿರುವ ಪ್ರಕಾರ ಕಳೆದ 30ವರ್ಷಗಳಲ್ಲಿ ಚೀನಾದ ಅಧ್ಯಕ್ಷರಾದವರು ಟಿಬೆಟ್​ಗೆ ಭೇಟಿ ಕೊಟ್ಟಿದ್ದು ಇದೇ ಮೊದಲು. ಖಂಡಿತ ಅವರ ಭೇಟಿ ಭಾರತಕ್ಕೆ ಅಪಾಯದ ಬೆದರಿಕೆಯಾಗಲಿದೆ. ಇನ್ನು ಈ ಪ್ರದೇಶದಲ್ಲಿ ಬ್ರಹ್ಮಪುತ್ರಾ ನದಿಗೆ (ಈ ನದಿಗೆ ಟಿಬೆಟಿಯನ್ ಭಾಷೆಯಲ್ಲಿ ಯಾರ್ಲುಂಗ್ ತ್ಸಾಂಗ್ಪೋ ಎಂದು ಕರೆಯುತ್ತಾರೆ) ಅಣೆಕಟ್ಟು ಕಟ್ಟುವ ದೊಡ್ಡ ಯೋಜನೆಯನ್ನು ಚೀನಾ ಹಾಕಿಕೊಂಡಿದ್ದು, ಇದರಿಂದ ಭಾರತಕ್ಕೆ ತೊಂದರೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಷಿ ಜಿನ್​ಪಿಂಗ್ ​ ಅವರು ನ್ಯಿಂಗ್​ ಚೀಗೆ ಭೇಟಿ ನೀಡಿದ್ದಾಗ, ಬ್ರಹ್ಮಪುತ್ರಾ ನದಿಯ ಜಲಾನಯನ ಪ್ರದೇಶದಲ್ಲಿನ ಪರಿಸರ ಸಂರಕ್ಷಣೆಯನ್ನು ಪರಿಶೀಲಿಸುವ ಸಲುವಾಗಿ ನ್ಯಾಂಗ್​ ನದಿಯ ಸೇತುವೆ ಬಳಿಯೂ ತೆರಳಿದ್ದರು. ಟಿಬೆಟ್​​ ಬಳಿ ಬ್ರಹ್ಮಪುತ್ರಾ ನದಿಗೆ, 14ನೇ ಪಂಚವಾರ್ಷಿಕ ಯೋಜನೆಯಡಿ ದೊಡ್ಡದಾದ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಈ ವರ್ಷ ಅನುಮೋದನೆ ನೀಡಿದ್ದು, ಇದರಿಂದ ಭಾರತ ಮತ್ತು ಬಾಂಗ್ಲಾದೇಶಗಳಿಗೆ ಸಹಜವಾಗಿಯೇ ಕಳವಳ ಉಂಟಾಗಿದೆ. ಅದರಲ್ಲೂ ಕಳೆದ ವಾರ ಷಿ ಜಿನ್​ಪಿಂಗ್​ ಟಿಬೆಟ್​ಗೆ ಭೇಟಿ ಕೊಟ್ಟಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇದರ ಬಗ್ಗೆ ನುನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದು, ಚೀನಾದ ಸರಹದ್ದು ದಾಟುವಿಕೆಯ ಪ್ರವೃತ್ತಿ ಹೆಚ್ಚುತ್ತಿದೆ. ಅದನ್ನು ನಿಯಂತ್ರಿಸಬೇಕು. ಆದರೆ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಕೂಡ ಗಮನ ಹರಿಸುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ವೇಟ್​ಲಿಫ್ಟಿಂಗ್​ ಮಾಡಿದ ಪುಟ್ಟ ಬಾಲಕಿ! ಮೀರಾಬಾಯಿ ಚಾನು ಅವರ ಪ್ರತಿಕ್ರಿಯೆ ಏನಿತ್ತು ನೋಡಿ

Chinese President Xi Jinping Tibet Visit is threat to India Says US Lawmaker

Published On - 12:40 pm, Tue, 27 July 21

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್