AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿವಾಸದ ಮೇಲೆ ನಿರ್ಬಂಧಿತ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವಿಮಾನ ಹಾರಾಟ

ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಅವರ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಡೆಲವೇರ್ ನಿವಾಸದ ಬಳಿ ನಿರ್ಬಂಧಿತ ವಾಯುಪ್ರದೇಶದಲ್ಲಿ ವಿಮಾನ ಹಾರಾಟ ನಡೆಸಿದೆ. ಮಾಹಿತಿಯ ಪ್ರಕಾರ, ನಾಗರಿಕ ವಿಮಾನವೊಂದು ಡೆಲವೇರ್‌ನ ವಿಲ್ಮಿಂಗ್ಟನ್‌ನ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು, ನಂತರ ಅಮೆರಿಕದ ಯುದ್ಧ ವಿಮಾನಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಿ ಅದನ್ನು ತಡೆದಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿವಾಸದ ಮೇಲೆ ನಿರ್ಬಂಧಿತ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವಿಮಾನ ಹಾರಾಟ
ಜೋ ಬೈಡನ್
ನಯನಾ ರಾಜೀವ್
|

Updated on: Oct 29, 2023 | 9:31 AM

Share

ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಅವರ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಡೆಲವೇರ್ ನಿವಾಸದ ಬಳಿ ನಿರ್ಬಂಧಿತ ವಾಯುಪ್ರದೇಶದಲ್ಲಿ ವಿಮಾನ ಹಾರಾಟ ನಡೆಸಿದೆ. ಮಾಹಿತಿಯ ಪ್ರಕಾರ, ನಾಗರಿಕ ವಿಮಾನವೊಂದು ಡೆಲವೇರ್‌ನ ವಿಲ್ಮಿಂಗ್ಟನ್‌ನ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು, ನಂತರ ಅಮೆರಿಕದ ಯುದ್ಧ ವಿಮಾನಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಿ ಅದನ್ನು ತಡೆದಿದೆ.

ಈ ಘಟನೆ ಅಕ್ಟೋಬರ್ 28 ರಂದು ನಡೆದಿದೆ, ಫ್ಯಾಕ್ಸ್​ ನ್ಯೂಸ್​ ಪ್ರಕಾರ, ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಲ್ಮಿಂಗ್ಟನ್‌ನ ಉತ್ತರಕ್ಕೆ ನಾಗರಿಕ ವಿಮಾನವು ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು ಎಂದು ಆಂಥೋನಿ ಗುಗ್ಲಿಲ್ಮಿ ಹೇಳಿದ್ದಾರೆ.

ಅಮೆರಿಕದ ಯುದ್ಧ ವಿಮಾನಗಳು ನಾಗರಿಕ ವಿಮಾನವನ್ನು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಿದೆ. ವಿಮಾನವು ವಿಲ್ಮಿಂಗ್ಟನ್‌ನ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿದಾಗ, ಯುಎಸ್ ಅಧ್ಯಕ್ಷ ಜೋ ಬಿಡನ್ ವಿಲ್ಮಿಂಗ್ಟನ್‌ನಲ್ಲಿರುವ ಅವರ ಮನೆಯಲ್ಲೇ ಇದ್ದರು.

ಮತ್ತಷ್ಟು ಓದಿ: ಹಮಾಸ್-ಇಸ್ರೇಲ್ ಸಂಘರ್ಷ: ಇಸ್ರೇಲ್​ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಬಹುದು ಎಂದ ಜೋ ಬೈಡನ್

ರಹಸ್ಯ ಸೇವೆ ಮತ್ತು ಫೆಡರಲ್ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ನ ಏಜೆಂಟ್‌ಗಳು ಈ ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಮೆರಿಕದ ಅಧ್ಯಕ್ಷರ ಭದ್ರತೆಯಲ್ಲಿ ಲೋಪವಾಗುತ್ತಿರುವುದು ಇದೇ ಮೊದಲಲ್ಲ.ಈ ಹಿಂದೆ ಜೂನ್‌ನಲ್ಲಿಯೂ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ರೆಹೋಬೋತ್ ಬೀಚ್ ಪ್ರದೇಶದ ನೋ ಫ್ಲೈ ಝೋನ್ ಅನ್ನು ವಿಮಾನವೊಂದು ಇದ್ದಕ್ಕಿದ್ದಂತೆ ಪ್ರವೇಶಿಸಿತ್ತು. ತಕ್ಷಣವೇ ಭದ್ರತಾ ಏಜೆನ್ಸಿಗಳು ಬೈಡನ್ ಹಾಗೂ ಅವರ ಪತ್ನಿಯನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದರು. ಇನ್ನೂ ಹಮಾಸ್ ಹಾಗೂ ಇಸ್ರೇಲ್​ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ, ಜೋ ಬೈಡನ್ ಇಸ್ರೇಲ್​ಗೆ ಬೆಂಬಲ ಸೂಚಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್