ವಿಡಿಯೊ: ತಾಲಿಬಾನ್ ಧ್ವಜ ಕಿತ್ತೆಸೆದು ಜಲಾಲಾಬಾದ್ ನಿವಾಸಿಗಳ ಆಕ್ರೋಶ: ಪ್ರತಿಭಟನೆ ನಡೆಸಿದವರ ಮೇಲೆ ಗುಂಡು ಹಾರಾಟ

ಜನರು ಅಫ್ಘಾನ್ ರಾಷ್ಟ್ರೀಯ ಧ್ವಜವನ್ನು ಭಾವುಕರಾಗಿ ಕೈಲಿ ಹಿಡಿದಿರುವ ಹಾಗೂ ತಾಲಿಬಾನ್ ಹೋರಾಟಗಾರರು ಅವರ ಮೇಲೆ ಗುಂಡು ಹಾರಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಡಿಯೊ: ತಾಲಿಬಾನ್ ಧ್ವಜ ಕಿತ್ತೆಸೆದು ಜಲಾಲಾಬಾದ್ ನಿವಾಸಿಗಳ ಆಕ್ರೋಶ: ಪ್ರತಿಭಟನೆ ನಡೆಸಿದವರ ಮೇಲೆ ಗುಂಡು ಹಾರಾಟ
ಜಲಾಲಾಬಾದ್​ ಬೀದಿಗಳಲ್ಲಿ ತಾಲಿಬಾನ್ ಹೋರಾಟಗಾರರು
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 18, 2021 | 4:04 PM

ಕಾಬೂಲ್: ಅಫ್ಘಾನಿಸ್ತಾನದ ಜಲಾಲಾಬಾದ್​ ನಗರದಲ್ಲಿ ನಾಗರಿಕರು ತಾಲಿಬಾನ್ ವಿರುದ್ಧ ಪ್ರತಿಭಟನೆ ನಡೆಸಿ, ಸರ್ಕಾರಿ ಕಟ್ಟಡಗಳ ಮೇಲೆ ಅಫ್ಘಾನಿಸ್ತಾನದ ರಾಷ್ಟ್ರೀಯ ಧ್ವಜ ಹಾರಿಸಬೇಕು ಎಂದು ಒತ್ತಾಯಿಸಿದರು. ತಾಲಿಬಾನ್ ಧ್ವಜ ಕಿತ್ತೆಸೆದು, ಅಫ್ಘಾನ್ ರಾಷ್ಟ್ರೀಯ ಧ್ವಜ ಹಾರಿಸಿದಾಗ ಪ್ರತಿಭಟನಾನಿರತರ ವಿರುದ್ಧ ಗುಂಡು ಹಾರಾಟ ನಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಜಲಾಲಾಬಾದ್​ನ ಜನನಿಬಿಡ ರಸ್ತೆಯೊಂದರಲ್ಲಿ ಜನರು ಅಫ್ಘಾನ್ ರಾಷ್ಟ್ರೀಯ ಧ್ವಜವನ್ನು ಭಾವುಕರಾಗಿ ಕೈಲಿ ಹಿಡಿದಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತಾಲಿಬಾನ್ ಹೋರಾಟಗಾರರು ಗುಂಡು ಹಾರಿಸುವ ಸದ್ದು ಸಹ ವಿಡಿಯೊದಲ್ಲಿ ದಾಖಲಾಗಿದೆ. ಗಾಯಾಳುಗಳ ಮಾಹಿತಿ ಲಭ್ಯವಾಗಿಲ್ಲ.

ಹಕ್ಕಾನಿ-ಕರ್ಜೈ ಭೇಟಿ ತಾಲಿಬಾನ್ ನಾಯಕ ಅನಸ್ ಹಕ್ಕಾನಿ ಮತ್ತು ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಬುಧವಾರ ಪರಸ್ಪರ ಭೇಟಿಯಾಗಿ ಸರ್ಕಾರ ರಚನೆ ಕುರಿತು ಚರ್ಚಿಸಿದರು.

ಫೋಟೊ ಬದಲಾವಣೆ ತಜಕಿಸ್ತಾನದ ಅಫ್ಘಾನ್ ರಾಯಭಾರ ಕಚೇರಿಯಲ್ಲಿದ್ದ ಆಫ್ಘನ್ ಅಧ್ಯಕ್ಷ ಅಶ್ರಫ್ ಘನಿ ಅವರ ಫೋಟೊ ಜಾಗದಲ್ಲಿ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವ ಅಮರುಲ್ಲಾ ಸಲೇಹಾ ಅವರ ಭಾವಚಿತ್ರ ಹಾಕಲಾಗಿದೆ.

ಮಾತು ನಂಬಬೇಡಿ ಎಂದ ಬ್ರಿಟನ್ ತಾಲಿಬಾನಿಗಳ ಮಾತಿನ ಮೇಲೆ ವಿಶ್ವಾಸ ಇರಿಸಲು ಆಗದು. ಅವರ ಕೆಲಸ ನೋಡಿ ನಿರ್ಧಾರಕ್ಕೆ ಬರಬೇಕು ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೆ ನೀಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ 40 ಮಂದಿ ಸಾವು ಕಾಬೂಲ್​ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಲಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. ಕಿಕ್ಕಿರಿದು ಸೇರಿದ್ದ ಜನರನ್ನು ಚೆದುರಿಸಲು ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಲಾಯಿತು ಎಂದು ಹೇಳಲಾಗಿದೆ. ಗುಂಡು ಹಾರಿಸಿದ್ದು ಅಮೆರಿಕ ಸೇನೆ ಎಂದು ತಾಲಿಬಾನ್ ಹೇಳಿದೆ.

(Civilians Protest in Jalalabad of Afghanistan Hoist Afghan National Flag Taliban Fires on Them)

ಇದನ್ನೂ ಓದಿ: Opinion ‘ಅಫ್ಘಾನಿಸ್ತಾನ, ತಾಲಿಬಾನ್ ಬಗ್ಗೆ ನಾನು ವಿದೇಶಾಂಗ ಸಚಿವನಾಗಿ ಕಲಿತದ್ದು’- ಯಶವಂತ್ ಸಿನ್ಹಾ ಬರಹ

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್​ ಅಭಯ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ