AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೊ: ತಾಲಿಬಾನ್ ಧ್ವಜ ಕಿತ್ತೆಸೆದು ಜಲಾಲಾಬಾದ್ ನಿವಾಸಿಗಳ ಆಕ್ರೋಶ: ಪ್ರತಿಭಟನೆ ನಡೆಸಿದವರ ಮೇಲೆ ಗುಂಡು ಹಾರಾಟ

ಜನರು ಅಫ್ಘಾನ್ ರಾಷ್ಟ್ರೀಯ ಧ್ವಜವನ್ನು ಭಾವುಕರಾಗಿ ಕೈಲಿ ಹಿಡಿದಿರುವ ಹಾಗೂ ತಾಲಿಬಾನ್ ಹೋರಾಟಗಾರರು ಅವರ ಮೇಲೆ ಗುಂಡು ಹಾರಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಡಿಯೊ: ತಾಲಿಬಾನ್ ಧ್ವಜ ಕಿತ್ತೆಸೆದು ಜಲಾಲಾಬಾದ್ ನಿವಾಸಿಗಳ ಆಕ್ರೋಶ: ಪ್ರತಿಭಟನೆ ನಡೆಸಿದವರ ಮೇಲೆ ಗುಂಡು ಹಾರಾಟ
ಜಲಾಲಾಬಾದ್​ ಬೀದಿಗಳಲ್ಲಿ ತಾಲಿಬಾನ್ ಹೋರಾಟಗಾರರು
TV9 Web
| Edited By: |

Updated on: Aug 18, 2021 | 4:04 PM

Share

ಕಾಬೂಲ್: ಅಫ್ಘಾನಿಸ್ತಾನದ ಜಲಾಲಾಬಾದ್​ ನಗರದಲ್ಲಿ ನಾಗರಿಕರು ತಾಲಿಬಾನ್ ವಿರುದ್ಧ ಪ್ರತಿಭಟನೆ ನಡೆಸಿ, ಸರ್ಕಾರಿ ಕಟ್ಟಡಗಳ ಮೇಲೆ ಅಫ್ಘಾನಿಸ್ತಾನದ ರಾಷ್ಟ್ರೀಯ ಧ್ವಜ ಹಾರಿಸಬೇಕು ಎಂದು ಒತ್ತಾಯಿಸಿದರು. ತಾಲಿಬಾನ್ ಧ್ವಜ ಕಿತ್ತೆಸೆದು, ಅಫ್ಘಾನ್ ರಾಷ್ಟ್ರೀಯ ಧ್ವಜ ಹಾರಿಸಿದಾಗ ಪ್ರತಿಭಟನಾನಿರತರ ವಿರುದ್ಧ ಗುಂಡು ಹಾರಾಟ ನಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಜಲಾಲಾಬಾದ್​ನ ಜನನಿಬಿಡ ರಸ್ತೆಯೊಂದರಲ್ಲಿ ಜನರು ಅಫ್ಘಾನ್ ರಾಷ್ಟ್ರೀಯ ಧ್ವಜವನ್ನು ಭಾವುಕರಾಗಿ ಕೈಲಿ ಹಿಡಿದಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತಾಲಿಬಾನ್ ಹೋರಾಟಗಾರರು ಗುಂಡು ಹಾರಿಸುವ ಸದ್ದು ಸಹ ವಿಡಿಯೊದಲ್ಲಿ ದಾಖಲಾಗಿದೆ. ಗಾಯಾಳುಗಳ ಮಾಹಿತಿ ಲಭ್ಯವಾಗಿಲ್ಲ.

ಹಕ್ಕಾನಿ-ಕರ್ಜೈ ಭೇಟಿ ತಾಲಿಬಾನ್ ನಾಯಕ ಅನಸ್ ಹಕ್ಕಾನಿ ಮತ್ತು ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಬುಧವಾರ ಪರಸ್ಪರ ಭೇಟಿಯಾಗಿ ಸರ್ಕಾರ ರಚನೆ ಕುರಿತು ಚರ್ಚಿಸಿದರು.

ಫೋಟೊ ಬದಲಾವಣೆ ತಜಕಿಸ್ತಾನದ ಅಫ್ಘಾನ್ ರಾಯಭಾರ ಕಚೇರಿಯಲ್ಲಿದ್ದ ಆಫ್ಘನ್ ಅಧ್ಯಕ್ಷ ಅಶ್ರಫ್ ಘನಿ ಅವರ ಫೋಟೊ ಜಾಗದಲ್ಲಿ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವ ಅಮರುಲ್ಲಾ ಸಲೇಹಾ ಅವರ ಭಾವಚಿತ್ರ ಹಾಕಲಾಗಿದೆ.

ಮಾತು ನಂಬಬೇಡಿ ಎಂದ ಬ್ರಿಟನ್ ತಾಲಿಬಾನಿಗಳ ಮಾತಿನ ಮೇಲೆ ವಿಶ್ವಾಸ ಇರಿಸಲು ಆಗದು. ಅವರ ಕೆಲಸ ನೋಡಿ ನಿರ್ಧಾರಕ್ಕೆ ಬರಬೇಕು ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೆ ನೀಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ 40 ಮಂದಿ ಸಾವು ಕಾಬೂಲ್​ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಲಾಗಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. ಕಿಕ್ಕಿರಿದು ಸೇರಿದ್ದ ಜನರನ್ನು ಚೆದುರಿಸಲು ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಲಾಯಿತು ಎಂದು ಹೇಳಲಾಗಿದೆ. ಗುಂಡು ಹಾರಿಸಿದ್ದು ಅಮೆರಿಕ ಸೇನೆ ಎಂದು ತಾಲಿಬಾನ್ ಹೇಳಿದೆ.

(Civilians Protest in Jalalabad of Afghanistan Hoist Afghan National Flag Taliban Fires on Them)

ಇದನ್ನೂ ಓದಿ: Opinion ‘ಅಫ್ಘಾನಿಸ್ತಾನ, ತಾಲಿಬಾನ್ ಬಗ್ಗೆ ನಾನು ವಿದೇಶಾಂಗ ಸಚಿವನಾಗಿ ಕಲಿತದ್ದು’- ಯಶವಂತ್ ಸಿನ್ಹಾ ಬರಹ

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಯಾವುದೇ ದೇಶಕ್ಕೆ ಬೆದರಿಕೆಯಿಲ್ಲ: ಮೊದಲ ಸುದ್ದಿಗೋಷ್ಠಿಯಲ್ಲಿ ತಾಲಿಬಾನ್​ ಅಭಯ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?