AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 3 ದಶಕಗಳಲ್ಲೇ 2023ರಲ್ಲಿ ಅತಿ ಹೆಚ್ಚು ಒಣಗಿದ ನದಿಗಳು; ಅಪಾಯದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ಕಳೆದ 33 ವರ್ಷಗಳಲ್ಲಿ ಜಾಗತಿಕ ನದಿಗಳು ಅತಿ ಹೆಚ್ಚು ಒಣಗಿರುವ ವರ್ಷವಾಗಿ 2023ನೇ ಇಸವಿ ಗುರುತಿಸಲ್ಪಟ್ಟಿದೆ. ಕಳೆದ ವರ್ಷ ಹಿಮನದಿಗಳು 50 ವರ್ಷಗಳಲ್ಲಿ ಅತಿ ಹೆಚ್ಚು ಒಣಗಿವೆ ಎಂದು ವಿಶ್ವಸಂಸ್ಥೆ ಹೇಳಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಜಾಗತಿಕ ತಾಪಮಾನವನ್ನು ನಿಯಂತ್ರಿಸದಿದ್ದರೆ ಯಾವೆಲ್ಲ ರೀತಿಯ ಅಪಾಯಗಳು ಉಂಟಾಗುತ್ತವೆ ಎಂಬುದರ ಕುರಿತು ಇದು ಚರ್ಚೆಯನ್ನು ಹುಟ್ಟುಹಾಕಿದೆ.

ಕಳೆದ 3 ದಶಕಗಳಲ್ಲೇ 2023ರಲ್ಲಿ ಅತಿ ಹೆಚ್ಚು ಒಣಗಿದ ನದಿಗಳು; ಅಪಾಯದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Oct 07, 2024 | 7:07 PM

Share

ನವದೆಹಲಿ: ವಿಶ್ವದ ನದಿಗಳು 2023ರಲ್ಲಿ ಕಳೆದ ಮೂರು ದಶಕಗಳಲ್ಲಿ ಅತ್ಯಂತ ಒಣ ವರ್ಷವನ್ನು ಅನುಭವಿಸಿವೆ ಎಂದು ಯುಎನ್​ ಹವಾಮಾನ ಸಂಸ್ಥೆ ಹೇಳಿದೆ. 2023ರ ವರ್ಷವು 33 ವರ್ಷಗಳಲ್ಲಿ ಜಾಗತಿಕ ನದಿಗಳಿಗೆ ಅತ್ಯಂತ ಶುಷ್ಕವಾಗಿತ್ತು. ಹಿಮನದಿಗಳು 50 ವರ್ಷಗಳಲ್ಲಿ ಅತಿದೊಡ್ಡ ಸಾಮೂಹಿಕ ನಷ್ಟವನ್ನು ಅನುಭವಿಸಿವೆ ಎಂದು ಯುಎನ್ ಹವಾಮಾನ ಸಂಸ್ಥೆ ಹವಾಮಾನ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿದೆ.

ಯುಎನ್ ಹವಾಮಾನ ಏಜೆನ್ಸಿಯು 2023 ವಿಶ್ವದ ನದಿಗಳಿಗೆ ಮೂರು ದಶಕಗಳಿಗಿಂತಲೂ ಹೆಚ್ಚು ಶುಷ್ಕ ವರ್ಷವಾಗಿದೆ ಎಂದು ವರದಿ ಮಾಡಿದೆ. ಏಕೆಂದರೆ ಕಳೆದ ವರ್ಷ ಕೆಲವು ಸ್ಥಳಗಳಲ್ಲಿ ದೀರ್ಘಕಾಲದ ಬರಗಾಲ ಉಂಟಾಗಿತ್ತು. ಕಳೆದ ಐದು ದಶಕಗಳಲ್ಲಿ ಅನೇಕ ದೇಶಗಳಲ್ಲಿ ನದಿಗಳನ್ನು ಪೋಷಿಸುವ ಹಿಮನದಿಗಳು ಅತಿದೊಡ್ಡ ದ್ರವ್ಯರಾಶಿಯ ನಷ್ಟವನ್ನು ಅನುಭವಿಸಿದೆ. ಐಸ್ ಕರಗುವಿಕೆಯು ಜಾಗತಿಕವಾಗಿ ಲಕ್ಷಾಂತರ ಜನರಿಗೆ ದೀರ್ಘಕಾಲೀನ ನೀರಿನ ತೊಂದರೆಯನ್ನು ಉಂಟುಮಾಡುತ್ತದೆ ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ

ಜಗತ್ತಿನಲ್ಲಿ ದಕ್ಷಿಣ ಯುನೈಟೆಡ್ ಸ್ಟೇಟ್ಸ್, ಮಧ್ಯ ಅಮೇರಿಕಾ ಮತ್ತು ದಕ್ಷಿಣ ಅಮೆರಿಕಾದ ದೇಶಗಳಾದ ಅರ್ಜೆಂಟೀನಾ, ಬ್ರೆಜಿಲ್, ಪೆರು ಮತ್ತು ಉರುಗ್ವೆಗಳು ವ್ಯಾಪಕವಾದ ಬರ ಪರಿಸ್ಥಿತಿಗಳನ್ನು ಎದುರಿಸುತ್ತಿವೆ. ಪೆರು ಮತ್ತು ಬೊಲಿವಿಯಾ ನಡುವಿನ ಗಡಿಯಲ್ಲಿರುವ ಅಮೆಜಾನ್ ಮತ್ತು ಟಿಟಿಕಾಕಾ ಸರೋವರದಲ್ಲಿ ಇದುವರೆಗೆ ಗಮನಿಸಿದ ಅತ್ಯಂತ ಕಡಿಮೆ ನೀರಿನ ಮಟ್ಟ 2023ರಲ್ಲಿ ದಾಖಲಾಗಿದೆ ಎಂದು ವರದಿ ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ