AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Colombia Landslide: ಕೊಲಂಬಿಯಾದಲ್ಲಿ ಭಾರೀ ಭೂಕುಸಿತ, 34 ಜನರ ಸಾವು

ರಾಜಧಾನಿ ಬೊಗೋಟಾದಿಂದ ಸುಮಾರು 230ಕಿಮೀ ದೂರದ ರಿಸಾರಾಲ್ಡಾದ ಪ್ಯೂಬ್ಲೋ ರಿಕೊದಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಮಣ್ಣಿನಡಿಯಲ್ಲಿ ಸಿಲುಕಿ ಸಮಾಧಿಯಾಗಿದೆ. ಘಟನೆಯಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ

Colombia Landslide: ಕೊಲಂಬಿಯಾದಲ್ಲಿ ಭಾರೀ ಭೂಕುಸಿತ, 34 ಜನರ ಸಾವು
ಕೊಲಂಬಿಯಾದಲ್ಲಿ ಭಾರೀ ಭೂಕುಸಿತ, 34 ಜನರ ಸಾವುImage Credit source: ABC News
TV9 Web
| Updated By: ಆಯೇಷಾ ಬಾನು|

Updated on: Dec 06, 2022 | 8:07 AM

Share

ಕೊಲಂಬಿಯಾದಲ್ಲಿ ಭಾರೀ ಭೂಕುಸಿತ( Colombia Landslide) ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಮಣ್ಣಿನಡಿಯಲ್ಲಿ ಸಿಲುಕಿ ಸಮಾಧಿಯಾಗಿದೆ. ಘಟನೆಯಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಖಾಸಗಿ ಮಾಧ್ಯಮಗಳು ವರದಿ ಮಾಡಿವೆ. ಉತ್ತರ ಪ್ರಾಂತ್ಯದ ಚೋಕೊಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಭೂಕುಸಿತ ಸಂಭವಿಸಿತ್ತು. ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಘಟನೆ ಸಂಬಂಧ ಸೋಮವಾರದಂದು ಟ್ವೀಟ್‌ ಮಾಡಿ 27 ಜನ ಶವಗಳನ್ನು ಮಣ್ಣಿನಲ್ಲಿ ಸಿಲುಕಿರುವ ಬಸ್​ನಿಂದ ಹೊರ ತೆಗೆಯಲಾಗಿದೆ ಎಂದಿದ್ದರು. ಆದ್ರೆ ಈಗ ಸಾವಿನ ಸಂಖ್ಯೆ ಏರಿಕೆಯಾಗಿದೆ. 34 ಜನರು ಮೃತ ಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಸಾವಿನ ಸಂಖ್ಯೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.

ರಿಸಾರಾಲ್ಡಾದ ಪ್ಯೂಬ್ಲೋ ರಿಕೊದಲ್ಲಿ ನಡೆದ ದುರಂತದಲ್ಲಿ 3 ಅಪ್ರಾಪ್ತ ವಯಸ್ಕರು ಸೇರಿದಂತೆ 27 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾನು ದುಃಖದಿಂದ ಘೋಷಿಸಬೇಕಾಗಿದೆ. ಸಂತ್ರಸ್ತರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲುತ್ತದೆ. ರಾಷ್ಟ್ರೀಯ ಸರ್ಕಾರದಿಂದ ಸಮಗ್ರ ಬೆಂಬಲವನ್ನು ನೀಡಲಾಗುತ್ತದೆ ಎಂದು ಪೆಟ್ರೋ ಈ ಹಿಂದೆ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭೂ ಕುಸಿತ ತಡೆಗಟ್ಟಲು ಅರಣ್ಯ ಇಲಾಖೆಯಿಂದ ನೂತನ ಪ್ರಯೋಗ; ಡ್ರೋನ್ ಮೂಲಕ ಬೀಜ ಬಿತ್ತನೆ

ಇನ್ನು ರಾಜಧಾನಿ ಬೊಗೋಟಾದಿಂದ ಸುಮಾರು 230ಕಿಮೀ ದೂರದ ರಿಸಾರಾಲ್ಡಾದ ಪ್ಯೂಬ್ಲೋ ರಿಕೊದಲ್ಲಿ ನಡೆದ ಈ ಘಟನೆ ನಯನತಾರ ನಟನೆಯ O2 ಚಿತ್ರವನ್ನು ನೆನಪಿಸುತ್ತದೆ. ಸದ್ಯ ಬಸ್​ನಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ.

ಕೊಲಂಬಿಯಾದಲ್ಲಿ ಭಾರೀ ಮಳೆ ಸುರಿದಿದೆ, ಸರ್ಕಾರದ ಅಂಕಿಅಂಶಗಳ ಪ್ರಕಾರ, 2022 ರಲ್ಲಿ ಇಲ್ಲಿಯವರೆಗೆ ಭಾರೀ ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ 216 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 48 ಮಂದಿ ನಾಪತ್ತೆಯಾಗಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ