Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನದಿಗಳಿಗೆ ವಿಷ ಅನಿಲ ಸೋರಿಕೆಯ ನೋಡಿಯೂ ಸುಳ್ಳು ಸುದ್ದಿ ಎನ್ನುತ್ತಾ ಕಣ್ಣುಮುಚ್ಚಿ ಕುಳಿತ ಪರಿಸರ ಹೋರಾಟಗಾರರು

ಭಾರತ ಸೇರಿದಂತೆ ಅಭಿವೃದ್ಧಿ ಶೀಲ ರಾಷ್ಟ್ರಗಳಲ್ಲಿನ ಪರಿಸರ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಇತರೆ ದೇಶಗಳ ಪರಿಸರ ಹೋರಾಟಗಾರರು ಪರಿಸರವನ್ನು ಹಾಳು ಮಾಡುತ್ತಿರುವ ಬಗ್ಗೆ ದೊಡ್ಡ ಕೂಗನ್ನು ಎಬ್ಬಿಸುತ್ತಿದ್ದಾರೆ.

ಅಮೆರಿಕದ ನದಿಗಳಿಗೆ ವಿಷ ಅನಿಲ ಸೋರಿಕೆಯ ನೋಡಿಯೂ ಸುಳ್ಳು ಸುದ್ದಿ ಎನ್ನುತ್ತಾ ಕಣ್ಣುಮುಚ್ಚಿ ಕುಳಿತ ಪರಿಸರ ಹೋರಾಟಗಾರರು
ರೈಲು ದುರಂತImage Credit source: OpIndia
Follow us
ನಯನಾ ರಾಜೀವ್
|

Updated on:Feb 19, 2023 | 3:54 PM

ಭಾರತ ಸೇರಿದಂತೆ ಅಭಿವೃದ್ಧಿ ಶೀಲ ರಾಷ್ಟ್ರಗಳಲ್ಲಿನ ಪರಿಸರ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಇತರೆ ದೇಶಗಳ ಪರಿಸರ ಹೋರಾಟಗಾರರು ಪರಿಸರವನ್ನು ಹಾಳು ಮಾಡುತ್ತಿರುವ ಬಗ್ಗೆ ದೊಡ್ಡ ಕೂಗನ್ನು ಎಬ್ಬಿಸುತ್ತಿದ್ದಾರೆ. ಆದರೆ ಅಮೆರಿಕದಲ್ಲಿ ರಾಸಾಯನಿಕಗಳನ್ನು ತುಂಬಿದ್ದ ರೈಲು ಹಳಿ ತಪ್ಪಿ ಸಾವಿರಾರು ಮೀನುಗಳು ಹಾಗೂ ಜಲಚರಗಳು ಸಾವನ್ನಪ್ಪಿದರೂ ಕೂಡ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಪ್ರಕರಣವನ್ನು ಮುಚ್ಚಿಹಾಕಲು ನೋಡುತ್ತಿದ್ದಾರೆ. ಇದು ಪರಿಸರ ಹೋರಾಟಗಾರರ ದ್ವಂದ್ವ ಹಾಗೂ ಪರಿಸರ ಕಾಳಜಿ.

ಅಮೆರಿಕದ ಓಹಿಯೋದಲ್ಲಿ ರಾಸಾಯನಿಕಗಳನ್ನು ಹೊತ್ತೊಯ್ಯುತ್ತಿದ್ದ ರೈಲಿನ ಬೋಗಿಗಳು ಹಳಿ ತಪ್ಪಿ, ಅವೆಲ್ಲವೂ ನೀರು ಸೇರಿ ಸಾವಿರಾರು ಮೀನುಗಳು ಸೇರಿದಂತೆ ಇತರೆ ಜಲಚರಗಳು ಸಾವನ್ನಪ್ಪಿದ್ದರೂ ಕೆಲವು ಹೋರಾಟಗಾರರು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಹೇಳುತ್ತಾ ಕಾಲ ಕಳೆಯುತ್ತಿದ್ದಾರೆ. ಕಾರ್ಯಕರ್ತರ ಧ್ವನಿಯೇ ಬದಲಾಗಿದೆ, ನೀರು ಹಾಗೂ ವಾಯು ಮಾಲಿನ್ಯದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಏನೂ ಆಗಿಲ್ಲ ಎಂದು ಹೇಳುತ್ತಾ ತಿರುಗುತ್ತಿದ್ದಾರೆ.

ಹೇಳುತ್ತಾ ಘೋಷಣೆ ಕೂಗುತ್ತಿದ್ದಾರೆ ಆದರೆ ಇದೇ ಕಾರ್ಯಕರ್ತರು ಡಾಲ್ಫಿನ್‌ಗಳಿಗೆ ಶಬ್ದದಿಂದ ಅಡಚಣೆಯಾಗುತ್ತದೆ ಎಂದು ಗಂಗಾ ನದಿಯ ವಿಹಾರವನ್ನು ಸ್ಥಗಿತಗೊಳಿಸಲು ಬಯಸಿದ್ದರು. ಆದರೆ ಇದೇ ಹೋರಾಟಗಾರರು, ಈಗ ಕೇವಲ ಅಮೆರಿಕದ ದೊಡ್ಡ ಕಂಪನಿಗಳ ಹಿತಾಸಕ್ತಿಯನ್ನು ಕಾಪಾಡಲು ಬಯಸುತ್ತಿದ್ದಾರೆ ಎಂದು ಅಂಕಣಕಾರರೊಬ್ಬರು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.‘

ಅಮೆರಿಕದ ಓಹಿಯೋ ನಗರದ ಪೂರ್ವ ಪ್ಯಾಲೆಸ್ತೀನ್ ಬಳಿ ರೈಲಿನ ಸುಮಾರು 50 ಬೋಗಿಗಳು ಹಳಿ ತಪ್ಪಿತ್ತು. ಫೆಬ್ರವರಿ 3 ರಂದು ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ, ನಾರ್ಫೋಕ್ ಸದರ್ನ್ ರೈಲಿನ ಬೋಗಿಗಳಲ್ಲಿ ಅಪಾಯಕಾರಿ ರಾಸಾಯನಿಕಗಳನ್ನು ತುಂಬಿಸಲಾಗಿತ್ತು. ಹಳಿತಪ್ಪಿದ ನಂತರ ಬೆಂಕಿ ಹೊತ್ತಿಕೊಂಡಿತ್ತು.

ರೈಲಿಗೆ ಬೆಂಕಿ ತಗುಲಿದ ಬಳಿಕ ಅಪಾಯಕಾರಿ ರಾಸಾಯನಿಕಗಳು ಸೇರಿಕೊಂಡಿದ್ದರಿಂದ ರೈಲಿನ ಬೆಂಕಿ ನಂದಿಸಲು ಸಾಧ್ಯವಾಗಿರಲಿಲ್ಲ.

ಓಹಿಯೋದ ಪೂರ್ವದ ಪ್ಯಾಲೆಸ್ಟೈನ್ 5,000 ಜನಸಂಖ್ಯೆಯನ್ನು ಹೊಂದಿದೆ. ಸ್ಫೋಟವನ್ನು ನಿಯಂತ್ರಿಸಲು ಅಧಿಕಾರಿಗಳು ಅಲ್ಲಿ ವಾಸಿಸುತ್ತಿದ್ದ ನೂರಾರು ಜನರನ್ನು ಸ್ಥಳಾಂತರಿಸಿದರು.

ಫಾಸ್ಜೀನ್ ಒಂದು ವಿಷಕಾರಿ ಅನಿಲ

ಫಾಸ್ಜೀನ್ ಒಂದು ವಿಷಕಾರಿ ಅನಿಲವಾಗಿದ್ದು, ಇದು ವಾಂತಿ ಮತ್ತು ಉಸಿರಾಟದ ತೊಂದರೆಗಳನ್ನು ಉಂಟುಮಾಡುತ್ತದೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Sun, 19 February 23

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ