AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೀಸೆಸ್ಟರ್‌ನಲ್ಲಿ ಶಾಂತಿ ಕಾಪಾಡಲು ಕರೆ ನೀಡಿದ ಹಿಂದೂ- ಮುಸ್ಲಿಂ ಸಮುದಾಯದ ನಾಯಕರು

ನಮ್ಮ ಎರಡು ಧರ್ಮಗಳು ಈ ಅದ್ಭುತ ನಗರದಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸಾಮರಸ್ಯದಿಂದ ಬದುಕಿವೆ. ನಾವು ಒಟ್ಟಿಗೆ ಈ ನಗರಕ್ಕೆ ಬಂದಿದ್ದೇವೆ. ನಾವು ಅದೇ ಸವಾಲುಗಳನ್ನು ಒಟ್ಟಿಗೆ ಎದುರಿಸಿದ್ದೇವೆ....

ಲೀಸೆಸ್ಟರ್‌ನಲ್ಲಿ ಶಾಂತಿ ಕಾಪಾಡಲು ಕರೆ ನೀಡಿದ ಹಿಂದೂ- ಮುಸ್ಲಿಂ ಸಮುದಾಯದ ನಾಯಕರು
ಜಂಟಿ ಹೇಳಿಕೆ ನೀಡಿದ ನಾಯಕರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 20, 2022 | 10:06 PM

Share

ಲೀಸೆಸ್ಟರ್: ಕಳೆದ ತಿಂಗಳು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಕ್ರಿಕೆಟ್ ಪಂದ್ಯದ (Asia Cup cricket match) ನಂತರ ಭುಗಿಲೆದ್ದಿದ್ದ ಸಂಘರ್ಷವನ್ನು ಕೊನೆಗೊಳಿಸುವಂತೆ ಯುಕೆಯಲ್ಲಿರುವ ಲೀಸೆಸ್ಟರ್‌ನ (Leicester) ಹಿಂದೂಗಳು ಮತ್ತು ಮುಸ್ಲಿಮರ ಸಮುದಾಯದ ಮುಖಂಡರು ಇಂದು (ಮಂಗಳವಾರ)  ಜಂಟಿ ಹೇಳಿಕೆ ನೀಡಿದ್ದಾರೆ. ನಾವು, ಲೀಸೆಸ್ಟರ್‌ನ ಕುಟುಂಬ, ಹಿಂದೂಗಳು ಮತ್ತು ಮುಸ್ಲಿಮರಾಗಿ ಮಾತ್ರವಲ್ಲದೆ ಸಹೋದರ ಸಹೋದರಿಯರಂತೆ ನಿಮ್ಮ ಮುಂದೆ ನಿಂತಿದ್ದೇವೆ” ಎಂದು ಮುಖಂಡರೊಬ್ಬರು ಜಂಟಿ ಹೇಳಿಕೆಯನ್ನು ಓದಿದ್ದಾರೆ. ಸಮುದಾಯಗಳ ವಿಭಜನೆಗೆ ಕಾರಣವಾಗುವ ಯಾವುದೇ ವಿದೇಶಿ ಉಗ್ರಗಾಮಿ ಸಿದ್ಧಾಂತಕ್ಕೆ ಲೀಸೆಸ್ಟರ್‌ನಲ್ಲಿ ಸ್ಥಾನವಿಲ್ಲ” ಎಂದು ಅವರು ಒತ್ತಿ ಹೇಳಿದರು. “ನಮ್ಮ ಎರಡು ಧರ್ಮಗಳು ಈ ಅದ್ಭುತ ನಗರದಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸಾಮರಸ್ಯದಿಂದ ಬದುಕಿವೆ. ನಾವು ಒಟ್ಟಿಗೆ ಈ ನಗರಕ್ಕೆ ಬಂದಿದ್ದೇವೆ. ನಾವು ಅದೇ ಸವಾಲುಗಳನ್ನು ಒಟ್ಟಿಗೆ ಎದುರಿಸಿದ್ದೇವೆ. ನಾವು ಜನಾಂಗೀಯ ದ್ವೇಷಿಗಳ ವಿರುದ್ಧ ಒಟ್ಟಿಗೆ ಹೋರಾಡಿದ್ದೇವೆ. ಒಟ್ಟಾಗಿ ಈ ನಗರವನ್ನು ವೈವಿಧ್ಯತೆ ಮತ್ತು ಸಮುದಾಯದ ಒಗ್ಗಟ್ಟಿನ ದಾರಿದೀಪವನ್ನಾಗಿ ಮಾಡಿದೆವು ಎಂದಿದ್ದಾರೆ. ಸಭ್ಯ ಸಮಾಜದ ಭಾಗವಾಗಿರದ ಉದ್ವೇಗ ಮತ್ತು ಹಿಂಸೆಯ ಬಗ್ಗೆ ಸಮುದಾಯಗಳಿಗೆ ಚಿಂತೆ ಮತ್ತು ಆಘಾತವಾಗಿದೆ ಎಂದಿದ್ದಾರೆ ಅವರು.

ನಾವು ಒಂದೇ ಕುಟುಂಬದವರು. ನಾವು ಇಲ್ಲಿ ಈ ನಗರದಲ್ಲಿ ಒಟ್ಟಿಗೆ ನೆಲೆಸಿದ್ದೇವೆ, ನಾವು ಒಟ್ಟಿಗೆ ಜನಾಂಗೀಯ ದ್ವೇಷಿಗಳ ವಿರುದ್ಧ ಹೋರಾಡಿದ್ದೇವೆ, ನಾವು  ಒಟ್ಟಿಗೆ ನಿರ್ಮಿಸಿದ್ದೇವೆ. ಇತ್ತೀಚಿನ ಹಿಂಸಾಚಾರವು ನಮ್ಮ ನಗರಕ್ಕೆ ತಕ್ಕುದಾದದಲ್ಲ. ನಾವು ಏನು ನೋಡಿದ್ದೇವೆಯೋ ಅದು ಆಗಬಾರದಿತ್ತು. “ಧಾರ್ಮಿಕ ಸ್ಥಳಗಳು, ಮಸೀದಿಗಳು ಮತ್ತು ದೇವಾಲಯಗಳ ಪವಿತ್ರತೆಯನ್ನು ಗೌರವಿಸಲು ನಾವು ಎಲ್ಲರಲ್ಲೂ ಮನವಿ ಮಾಡುತ್ತೇವೆ ಎಂದು ಅವರು ಹೇಳಿದರು. ಅದೇ ವೇಳೆ ಜೋರಾಗಿ ಸಂಗೀತ, ಧ್ವಜಾರೋಹಣ, ಅವಹೇಳನಕಾರಿ ಘೋಷಣೆಗಳು ಅಥವಾ ಪೂಜೆಯ ಬಟ್ಟೆಯ ವಿರುದ್ಧ ದೈಹಿಕ ದಾಳಿ ಮೊದಲಾದವುಗಳಿಂದ ಪ್ರಚೋದನೆಗೊಳಗಾಗಬೇಡಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
BIG NEWS: ಲೀಸೆಸ್ಟರ್‌ನಲ್ಲಿರುವ ಹಿಂದೂ ಧಾರ್ಮಿಕ ಸ್ಥಳಗಳ ಧ್ವಂಸ, ಭಾರತ ಖಂಡನೆ
Image
ಲೀಸೆಸ್ಟರ್‌ನಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯ ನಡುವೆ ಗಲಭೆ; ಇಬ್ಬರ ಬಂಧನ

ಆಗಸ್ಟ್ 28 ರ ಕ್ರಿಕೆಟ್ ಪಂದ್ಯದ ಬಳಿಕ ಇಲ್ಲಿ ಘರ್ಷಣೆಯುಂಟಾಗಿತ್ತು. ಧಾರ್ಮಿಕ ಸ್ಥಳಗಳಿಗೆ ಹಾನಿಯಾಗಿದೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇದು ಬೇರೆಯೇ ಆಯಾಮವನ್ನು ಪಡೆಯಿತು. ಇದಾದ ನಂತರ ಶನಿವಾರ ಮತ್ತು ಭಾನುವಾರದಂದು ಕಿಡಿಕಾರುವ ಘೋಷಣೆಗಳೊಂದಿಗೆ ಪ್ರತಿಭಟನೆಗಳು ಮತ್ತು ರ್ಯಾಲಿಗಳು ನಡೆದವು. ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಇದುವರೆಗೆ ಹದಿನೈದು ಜನರನ್ನು ಬಂಧಿಸಲಾಗಿದೆ ಎಂದು ಲೀಸೆಸ್ಟರ್‌ಶೈರ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕೂಡ ಲೀಸೆಸ್ಟರ್‌ನಲ್ಲಿನ ದೇವಸ್ಥಾನವನ್ನು ಧ್ವಂಸವಾಗಿದೆ ಎಂಬ ಸುದ್ದಿಯ ವಿರುದ್ಧ ಮಧ್ಯ ಪ್ರವೇಶಿಸಿತ್ತು. ಮುಸ್ಲಿಂ ಸಮುದಾಯವು ಕೆಲವು ಹಿಂದೂ ಗುಂಪುಗಳ ರ್ಯಾಲಿಯನ್ನು “ಪ್ರಚೋದನಕಾರಿ” ಮತ್ತು “ನಿಂದನೀಯ” ಎಂದು ಉಲ್ಲೇಖಿಸಿದೆ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ