ಕಾಂಗೋ: ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನ, 129 ಕೈದಿಗಳು ಸಾವು, 59 ಜನರಿಗೆ ಗಾಯ

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ ರಾಜಧಾನಿ ಕಿನ್ಶಾಸಾದಲ್ಲಿರುವ ಕೇಂದ್ರ ಮಕಾಲಾ ಜೈಲಿನಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಕನಿಷ್ಠ 129 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 59 ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಹೇಳಿದೆ.

ಕಾಂಗೋ: ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನ, 129 ಕೈದಿಗಳು ಸಾವು, 59 ಜನರಿಗೆ ಗಾಯ
ಕೈದಿಗಳುImage Credit source: Firstpost
Follow us
|

Updated on: Sep 03, 2024 | 2:09 PM

ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿರುವ ಸೆಂಟ್ರಲ್ ಮಕಾಲಾ ಜೈಲಿನಿಂದ ತಪ್ಪಿಸಿಕೊಳ್ಳಲು ಹೋಗಿ 129 ಕೈದಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಜತೆಗೆ 59 ಕೈದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲ್ಲರೂ ಸೇರಿ ಜೈಲಿನಿಂದ ಓಡಿ ಹೋಗಲು ಪ್ರಯತ್ನ ಮಾಡಿದ್ದರು. ಆಂತರಿಕ ಸಚಿವ ಶಬಾನಿ ಲುಕೋ ಈ ವಿವರಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಮಕಾಲಾ ಜೈಲಿನಿಂದ ಕೈದಿಗಳು ಪರಾರಿಯಾಗಲು ಯತ್ನಿಸಿದ್ದರು, ಜೈಲು ಸಿಬ್ಬಂದಿ ಎಚ್ಚೆತ್ತು ಪರಿಸ್ಥಿತಿ ನಿಭಾಯಿಸಲು ಹೋದಾಗ ಮಾರಾಮಾರಿ ನಡೆದಿದೆ.

ಈ ವೇಳೆ ಅಡುಗೆ ಕೋಣೆಯಿಂದ ಬೆಂಕಿ ಆವರಿಸಿ 129 ಕೈದಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಜೈಲಿನ ಕಟ್ಟಡಕ್ಕೂ ಹಾನಿಯಾಗಿದೆ ಎಂದು ಸಚಿವ ಶಬಾನಿ ಲುಕೋ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಜೈಲಿನಲ್ಲಿ ಬೀಡಿ, ಸಿಗರೇಟ್​ಗೆ ಅವಕಾಶ ಇರುತ್ತಾ? ನಿವೃತ್ತ ಪೊಲೀಸ್ ಅಧಿಕಾರಿ ತೆರೆದಿಟ್ಟ ಸತ್ಯ

ಕೆಲವರು ನೂಕು ನುಗ್ಗಲು ಹಾಗೂ ಉಸಿರುಗಟ್ಟುವಿಕೆಯಿಂದಾಗಿ ಸಾವನ್ನಪ್ಪಿದ್ದಾರೆ. ಯಾವುದೇ ಕೈದಿಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸಿದವರು ಸಾವನ್ನಪ್ಪಿದ್ದಾರೆ ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಕಾಲಾ ಕಾರಾಗೃಹವು ಕಾಂಗೋದಲ್ಲಿರುವ ಪ್ರಮುಖ ಸೆರೆಮನೆಯಾಗಿದೆ ಮತ್ತು 1,500 ಸಾಮರ್ಥ್ಯವನ್ನು ಹೊಂದಿದೆ, ಆದರೆ ಪ್ರಸ್ತುತ 12,000 ಕೈದಿಗಳನ್ನು ಬಂಧಿಸಲಾಗಿದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಇತ್ತೀಚಿನ ದೇಶದ ವರದಿಯ ಪ್ರಕಾರ , ಹೆಚ್ಚಿನ ಕೈದಿಗಳು ವಿಚಾರಣೆಗಾಗಿ ಕಾಯುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ