AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗೋ: ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನ, 129 ಕೈದಿಗಳು ಸಾವು, 59 ಜನರಿಗೆ ಗಾಯ

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ ರಾಜಧಾನಿ ಕಿನ್ಶಾಸಾದಲ್ಲಿರುವ ಕೇಂದ್ರ ಮಕಾಲಾ ಜೈಲಿನಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಕನಿಷ್ಠ 129 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 59 ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಹೇಳಿದೆ.

ಕಾಂಗೋ: ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನ, 129 ಕೈದಿಗಳು ಸಾವು, 59 ಜನರಿಗೆ ಗಾಯ
ಕೈದಿಗಳುImage Credit source: Firstpost
ನಯನಾ ರಾಜೀವ್
|

Updated on: Sep 03, 2024 | 2:09 PM

Share

ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿರುವ ಸೆಂಟ್ರಲ್ ಮಕಾಲಾ ಜೈಲಿನಿಂದ ತಪ್ಪಿಸಿಕೊಳ್ಳಲು ಹೋಗಿ 129 ಕೈದಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಜತೆಗೆ 59 ಕೈದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲ್ಲರೂ ಸೇರಿ ಜೈಲಿನಿಂದ ಓಡಿ ಹೋಗಲು ಪ್ರಯತ್ನ ಮಾಡಿದ್ದರು. ಆಂತರಿಕ ಸಚಿವ ಶಬಾನಿ ಲುಕೋ ಈ ವಿವರಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಮಕಾಲಾ ಜೈಲಿನಿಂದ ಕೈದಿಗಳು ಪರಾರಿಯಾಗಲು ಯತ್ನಿಸಿದ್ದರು, ಜೈಲು ಸಿಬ್ಬಂದಿ ಎಚ್ಚೆತ್ತು ಪರಿಸ್ಥಿತಿ ನಿಭಾಯಿಸಲು ಹೋದಾಗ ಮಾರಾಮಾರಿ ನಡೆದಿದೆ.

ಈ ವೇಳೆ ಅಡುಗೆ ಕೋಣೆಯಿಂದ ಬೆಂಕಿ ಆವರಿಸಿ 129 ಕೈದಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಜೈಲಿನ ಕಟ್ಟಡಕ್ಕೂ ಹಾನಿಯಾಗಿದೆ ಎಂದು ಸಚಿವ ಶಬಾನಿ ಲುಕೋ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಜೈಲಿನಲ್ಲಿ ಬೀಡಿ, ಸಿಗರೇಟ್​ಗೆ ಅವಕಾಶ ಇರುತ್ತಾ? ನಿವೃತ್ತ ಪೊಲೀಸ್ ಅಧಿಕಾರಿ ತೆರೆದಿಟ್ಟ ಸತ್ಯ

ಕೆಲವರು ನೂಕು ನುಗ್ಗಲು ಹಾಗೂ ಉಸಿರುಗಟ್ಟುವಿಕೆಯಿಂದಾಗಿ ಸಾವನ್ನಪ್ಪಿದ್ದಾರೆ. ಯಾವುದೇ ಕೈದಿಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸಿದವರು ಸಾವನ್ನಪ್ಪಿದ್ದಾರೆ ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಕಾಲಾ ಕಾರಾಗೃಹವು ಕಾಂಗೋದಲ್ಲಿರುವ ಪ್ರಮುಖ ಸೆರೆಮನೆಯಾಗಿದೆ ಮತ್ತು 1,500 ಸಾಮರ್ಥ್ಯವನ್ನು ಹೊಂದಿದೆ, ಆದರೆ ಪ್ರಸ್ತುತ 12,000 ಕೈದಿಗಳನ್ನು ಬಂಧಿಸಲಾಗಿದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಇತ್ತೀಚಿನ ದೇಶದ ವರದಿಯ ಪ್ರಕಾರ , ಹೆಚ್ಚಿನ ಕೈದಿಗಳು ವಿಚಾರಣೆಗಾಗಿ ಕಾಯುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ