AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COP28: ನಾವೆಲ್ಲರೂ ಒಂದೇ ಮಣ್ಣಿನಿಂದ ಬಂದವರು, ನಾವು ತಿನ್ನುವ ಆಹಾರ ಒಂದೇ ಮಣ್ಣಿನದ್ದು: ಸದ್ಗುರು

ಹವಾಮಾನ ಬದಲಾವಣೆ ಕುರಿತು ದುಬೈನಲ್ಲಿ ಆಯೋಜಿಸಲಾಗಿರುವ ಕಾನ್ಫರೆನ್ಸ್ ಆಫ್ ಪಾರ್ಟಿಸ್​ 28ನೇ ಸಮ್ಮೇಳದಲ್ಲಿ ಈಶ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಮಣ್ಣಿನ ಮಹತ್ವದ ಬಗ್ಗೆ ತಿಳಿಸಿದ್ದಾರೆ. ಅಲ್ಲದೇ ಮಣ್ಣನ್ನು ಸಂರಕ್ಷಿಸಿಸಲು ಜನರಲ್ಲಿ ಆತ್ಮವಿಶ್ವಾಸ ತುಂಬಲು ವಿಶ್ವನಾಯಕರೆಲ್ಲರೂ ಒಗ್ಗೂಡಬೇಕು ಎಂದು ಕೋರಿದ್ದಾರೆ.

COP28: ನಾವೆಲ್ಲರೂ ಒಂದೇ ಮಣ್ಣಿನಿಂದ ಬಂದವರು, ನಾವು ತಿನ್ನುವ ಆಹಾರ ಒಂದೇ ಮಣ್ಣಿನದ್ದು: ಸದ್ಗುರು
TV9 Web
| Edited By: |

Updated on: Dec 02, 2023 | 9:59 AM

Share

ದುಬೈ, (ಡಿಸೆಂಬರ್ 02): ನೀವು ಯಾರು, ನೀವು ಏನು ನಂಬುತ್ತೀರಿ, ನೀವು ಸ್ವರ್ಗಕ್ಕೆ ಹೋಗುತ್ತೀರಾ ಅಥವಾ ನರಕಕ್ಕೆ ಹೋಗುತ್ತೀರಾ ಎಂಬುದು ಮುಖ್ಯವಲ್ಲ. ನಾವೆಲ್ಲರೂ ಒಂದೇ ಮಣ್ಣಿನಿಂದ ಬಂದವರು. ನಾವು ತಿನ್ನುವ ಆಹಾರ ಒಂದೇ ಮಣ್ಣಿನಿಂದ ಬರುತ್ತದೆ. ಕೊನೆಗೆ ನಾವು ಸಾಯುವಾಗ ಅದೇ ಮಣ್ಣಿನಲ್ಲಿ ಭೇಟಿಯಾಗುತ್ತೇವೆ. ಮಣ್ಣು ಎನ್ನುವುದು ಅಂತಿಮ ಏಕೀಕರಣ ಎಂದು ಈಶ ಫೌಂಡೇಶನ್ (Isha Foundation) ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ( Sadhguru) ಮಣ್ಣಿನ ಮಹತ್ವದ ಬಗ್ಗೆ ಹೇಳಿದರು.

ಹವಾಮಾನ ಬದಲಾವಣೆ ಕುರಿತು ದುಬೈನಲ್ಲಿ (Dubai) ಆಯೋಜಿಸಲಾಗಿರುವ ಕಾನ್ಫರೆನ್ಸ್ ಆಫ್ ಪಾರ್ಟಿಸ್​ 28ನೇ ಸಮ್ಮೇಳದಲ್ಲಿ ಮಾತನಾಡಿದ ಸದ್ಗುರು, ಈ ಗ್ರಹದಲ್ಲಿ ಮಣ್ಣು ಅಕ್ಷರಶಃ ಜೀವವೈವಿಧ್ಯದ ತಾಯಿಯಾಗಿದೆ. ಸಮೃದ್ಧ ಮಣ್ಣಿನಿಲ್ಲದೆ, ಜೀವವೈವಿಧ್ಯಕ್ಕೆ ಅವಕಾಶವಿಲ್ಲ. ಈ ಗ್ರಹದಲ್ಲಿ ಜೀವಕ್ಕೆ ಜನ್ಮ ನೀಡುವ ಗರ್ಭವೇ ಮಣ್ಣು. ಮಣ್ಣಿನ ಪುನರುಜ್ಜೀವನ ನೀತಿಗಳನ್ನು ಜಾರಿಗೆ ತರಲು ಜನರನ್ನು ಪ್ರಭಾವಿಸಲು ನಾಯಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ತಿಳಿಸಿದರು.

ಮಣ್ಣಿನ ಪುನರುಜ್ಜೀವನ ನೀತಿಗಳನ್ನು ಜಾರಿಗೆ ತರಲು ಜನರನ್ನು ಪ್ರೇರೇಪಣೆ ಮಾಡುವುದರಲ್ಲಿ ನಾಯಕರ ಪ್ರಮುಖ ಪಾತ್ರ ವಹಿಸುತ್ತದೆ. ನಂಬಿಕೆಯ ಹೆಸರಿನಲ್ಲಿ ಜಗತ್ತನ್ನು ವಿಭಜಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ಮುಖಂಡರು ತಮ್ಮ ಪ್ರಭಾವವನ್ನು ಬಳಸಿಕೊಂಡು ಮಣ್ಣನ್ನು ಉಳಿಸಲು ಜನರನ್ನು ಪ್ರೇರೇಪಿಸಬೇಕು. ಏಕೆಂದರೆ ನಾವು ಅರಿವಿಲ್ಲದೆ ಸೃಷ್ಟಿಸಿದ ಎಲ್ಲಾ ವಿಭಾಗಗಳನ್ನು ಮೀರಿ ಮಣ್ಣು ನಮ್ಮನ್ನು ಒಂದುಗೂಡಿಸುತ್ತದೆ ಎಂದರು.

ದುಬೈನಲ್ಲಿ ನಡೆಯುತ್ತಿರುವ ಸಿಒಪಿ28 (ಪ್ರತಿನಿಧಿಗಳ 28ನೇ ಸಮ್ಮೇಳನ)ದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಯುಎಇ, ಫ್ರಾನ್ಸ್, ಇಟಲಿ, ಇಂಡೋನೇಷ್ಯಾ ಪ್ರಧಾನಿಗಳು, ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಸೇರಿದಂತೆ ವಿಶ್ವದ ಅನೇಕ ಗಣ್ಯರು ಭಾಗಿಯಾಗಿದ್ದರು.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ