AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

King Charles III: ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ, ಭಾರತದ ಉಪರಾಷ್ಟ್ರಪತಿ ಭಾಗಿ, ಕಾರ್ಯಕ್ರಮದ ನಿರೂಪಣೆಗೆ ನಟಿ ಸೋನಮ್ ಕಪೂರ್

ಇಂದು ಲಂಡನ್‌ನಲ್ಲಿ ನಡೆಯಲಿರುವ ಕಿಂಗ್ ಚಾರ್ಲ್ಸ್ IIIರ ಪಟ್ಟಾಭಿಷೇಕ ಸಮಾರಂಭಕ್ಕೆ ಆಹ್ವಾನಿತರಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ನಟಿ ಸೋನಮ್ ಕಪೂರ್ ಭಾಗವಹಿಸಲಿದ್ದಾರೆ.

King Charles III: ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ, ಭಾರತದ ಉಪರಾಷ್ಟ್ರಪತಿ ಭಾಗಿ, ಕಾರ್ಯಕ್ರಮದ ನಿರೂಪಣೆಗೆ ನಟಿ ಸೋನಮ್ ಕಪೂರ್
ಜಗದೀಪ್ ಧಂಖರ್
ಅಕ್ಷಯ್​ ಪಲ್ಲಮಜಲು​​
|

Updated on: May 06, 2023 | 11:07 AM

Share

ಲಂಡನ್: ಇಂದು ಲಂಡನ್‌ನಲ್ಲಿ ನಡೆಯಲಿರುವ ಕಿಂಗ್ ಚಾರ್ಲ್ಸ್ III(King Charles III) ಪಟ್ಟಾಭಿಷೇಕ ಸಮಾರಂಭಕ್ಕೆ ಆಹ್ವಾನಿತರಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ನಟಿ ಸೋನಮ್ ಕಪೂರ್ ಭಾಗವಹಿಸಲಿದ್ದಾರೆ. ವೆಸ್ಟ್‌ಮಿನಿಸ್ಟರ್ ಅಬ್ಬೆಯಲ್ಲಿ ಈ ಸಮಾರಂಭ ನಡೆಯಲಿದೆ. 70 ವರ್ಷಗಳ ಹಿಂದೆ ಕಿಂಗ್ ಚಾರ್ಲ್ಸ್ III ಅವರ ತಾಯಿ ಎಲಿಜಬೆತ್ ಪಟ್ಟಾಭಿಷೇಕಗೊಂಡಾಗ ಅನೇಕ ದೇಶದ ಗಣ್ಯರು, ಜನರು, ರಾಜಮನೆತನಗಳು, ಸರ್ಕಾರಗಳು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು, ಆದರೆ ಇದೀಗ ಮತ್ತೆ ಅದೇ ಸಂಭ್ರಮಕ್ಕೆ ಅನೇಕ ದೇಶದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದೀಗ ಭಾರತದಿಂದ ಪ್ರತಿನಿಧಿಸುತ್ತಿರುವ ದೇಶ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಅವರ ಪತ್ನಿ ಸುದೇಶ್ ಧಂಖರ್ ಅವರೊಂದಿಗೆ ಲಂಡನ್ ತಲುಪಿದ್ದಾರೆ.

ಈ ಸಂಭ್ರಮದ ನಿರೂಪಣೆಯನ್ನು ಮಾಡಲು ಬಾಲಿವುಡ್​​ ನಟಿ ಸೋನಮ್ ಕಪೂರ್ ಭಾಗವಹಿಸಲಿದ್ದಾರೆ ಎಂದು ವೆರೈಟಿ ವರದಿ ಮಾಡಿದೆ. ಇದಲ್ಲದೆ, ಮುಂಬೈನ ಇಬ್ಬರು ಡಬ್ಬಾವಾಲಾಗಳು ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ. ವಿಶೇಷವಾಗಿ ರಾಜನಿಗೆ ಉಡುಗೊರೆಯಾಗಿ ನೀಡಲು ಅವರು ಪುಣೇರಿ ಪೇಟ ಮತ್ತು ವಾರಕರಿ ಸಮುದಾಯದಿಂದ ತಯಾರಿಸಿದ ಶಾಲನ್ನು ತಂದಿದ್ದಾರೆ.

ಚಾರ್ಲ್ಸ್ ಅವರು 2003ರಲ್ಲಿ ತಮ್ಮ ಭಾರತ ಭೇಟಿಯ ಸಂದರ್ಭದಲ್ಲಿ ಮುಂಬೈನ ಪ್ರಖ್ಯಾತ ಲಂಚ್‌ಬಾಕ್ಸ್ ಡೆಲಿವರಿ ವ್ಯಕ್ತಿಯನ್ನು ಭೇಟಿ ಮಾಡಿದ್ದರು. ಕ್ಯಾಮಿಲ್ಲಾ ಪಾರ್ಕರ್ ಬೌಲ್ಸ್ ಅವರೊಂದಿಗಿನ ಚಾರ್ಲ್ಸ್ ಅವರ ಮದುವೆಗೆ ಡಬ್ಬಾವಾಲಾಗಳನ್ನು ಸಹ ಆಹ್ವಾನಿಸಲಾಯಿತು.

ರಾಜನ ಚಾರಿಟಿ ಅಧಿಕಾರ ವಲಯದಲ್ಲಿರುವ ಮತ್ತು ರಾಜನ ಜತೆಗೆ ನಿಕಟ ಸಂಬಂಧವನ್ನು ಹೊಂದಿರುವ ಭಾರತದ ವ್ಯಕ್ತಿಗಳನ್ನು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಆಹ್ವಾನದಲ್ಲಿ ಕೆಲವೊಂದು ಸಲಹೆಗಾರ ಮತ್ತು ಬಾಣಸಿಗ ಕೂಡ ಸೇರಿದ್ದಾರೆ. ಚಾರ್ಲ್ಸ್ ಫೌಂಡೇಶನ್‌ನ ಬಿಲ್ಡಿಂಗ್ ಕ್ರಾಫ್ಟ್ ಪ್ರೋಗ್ರಾಂ ಮತ್ತು ಪ್ರಿನ್ಸ್ ಫೌಂಡೇಶನ್ ಸ್ಕೂಲ್ ಆಫ್ ಟ್ರೆಡಿಷನಲ್ ಆರ್ಟ್ಸ್‌ನಿಂದ ಪದವಿ ಪಡೆದ 37 ವರ್ಷದ ಪುಣೆ ಮೂಲದ ಆರ್ಕಿಟೆಕ್ಟ್ ಸೌರಭ್ ಫಡ್ಕೆ ಅವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಇದನ್ನೂ ಓದಿ: King Charles III Coronation: ಮೇ 6ರಂದು ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ : ಕಾರ್ಯಕ್ರಮದ ವೇಳಾಪಟ್ಟಿ, ನೇರ ಪ್ರಸಾರದ ಬಗ್ಗೆ ಇಲ್ಲಿದೆ ಮಾಹಿತಿ

ಕೆನಡಾದ ಭಾರತೀಯ ಮೂಲದ ಜೇ ಪಟೇಲ್ ಅವರು ಕಳೆದ ಮೇ ತಿಂಗಳಲ್ಲಿ ಪ್ರಿನ್ಸ್ ಟ್ರಸ್ಟ್ ಕೆನಡಾದ ಯುವ ಉದ್ಯೋಗಿ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅವರು ಟೊರೊಂಟೊದ ಐಕಾನಿಕ್ ಸಿಎನ್ ಟವರ್‌ನಲ್ಲಿ ಬಾಣಸಿಗ ಹುದ್ದೆಯನ್ನು ಹೊಂದಿದ್ದಾರೆ ಎಂದು ಅರಮನೆ ತಿಳಿಸಿದೆ.

ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿ ರಿಷಿ ಸುನಕ್ ಅವರು ಪಟ್ಟಾಭಿಷೇಕ ಸಮಾರಂಭದಲ್ಲಿ ಬೈಬಲ್‌ನ ಕೊಲೊಸ್ಸಿಯನ್ಸ್ ಪುಸ್ತಕವನ್ನು ಬೋಧಿಸಲಿದದ್ದು, ಪ್ರಧಾನಿ ಅವರ ಪತ್ನಿ ಅಕ್ಷತಾ ಮೂರ್ತಿ ಕೂಡ ಧ್ವಜಾರೋಹಣದಲ್ಲಿ ಭಾಗವಹಿಸಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?