AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದ ಹುಟ್ಟೂರಲ್ಲಿ ಮತ್ತೆ ವೈರಸ್​ ಅಬ್ಬರ; ಆಸ್ಪತ್ರೆಗಳಲ್ಲಿ ಬೆಡ್​ ಕೊರತೆ, ತುಂಬಿರುವ ಶವಾಗಾರಗಳು, ಜನರು ಕಂಗಾಲು

ಜೀರೋ ಕೊವಿಡ್ ಕಾರ್ಯ ವಿಧಾನದ ನ್ಯೂನತೆಗಳನ್ನು ಹಾಂಗ್ ಕಾಂಗ್‌ನಲ್ಲಿ ಬಹಿರಂಗಪಡಿಸಲಾಗಿದೆ. ಅಲ್ಲಿ ದಕ್ಷಿಣ ಚೀನಾದ ನಗರದ ಸರ್ಕಾರದಿಂದ ಸಂದೇಶಗಳು ಆಹಾರ ಸರಬರಾಜುಗಳ ಸಂಗ್ರಹಣೆಗೆ ಉತ್ತೇಜನ ನೀಡಿವೆ.

ಕೊರೊನಾದ ಹುಟ್ಟೂರಲ್ಲಿ ಮತ್ತೆ ವೈರಸ್​ ಅಬ್ಬರ; ಆಸ್ಪತ್ರೆಗಳಲ್ಲಿ ಬೆಡ್​ ಕೊರತೆ, ತುಂಬಿರುವ ಶವಾಗಾರಗಳು, ಜನರು ಕಂಗಾಲು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Mar 13, 2022 | 10:25 AM

Share

ಕೊರೊನಾದ ಹುಟ್ಟೂರಾದ ಚೀನಾದಲ್ಲಿ ಕೊವಿಡ್​ 19, ಒಮಿಕ್ರಾನ್​​ (Omicron Cases in China) ಏರಿಕೆಯಾಗುತ್ತಲೇ ಇದೆ. ಈಗಾಗಲೇ ಈಶಾನ್ಯ ಚೀನಾದಲ್ಲಿ ಲಾಕ್​ಡೌನ್ (Lock Down In China)​ ಮಾಡಲು ಆದೇಶಿಸಲಾಗಿದೆ. ಇನ್ನೊಂದೆಡೆ ಹಾಂಗ್​​ ಕಾಂಗ್​​ನಲ್ಲಿ ಒಮಿಕ್ರಾನ್​ ಅತ್ಯಂತ ವೇಗವಾಗಿ ಹರಡುತ್ತಿದೆ. ಅಲ್ಲಿ ಸಾಮೂಹಿಕ ತಪಾಸಣೆ, ಕ್ವಾರಂಟೈನ್​ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮಧ್ಯೆ ಆಸ್ಪತ್ರೆಗಳಲ್ಲಿ ಬೆಡ್​ ಕೊರತೆ ಎದುರಾಗಿದೆ. ಮತ್ತೊಮ್ಮೆ ಲಾಕ್​ಡೌನ್ ಆಗಬಹುದು ಎಂಬ ಭಯದಲ್ಲಿ, ಅಗತ್ಯ ವಸ್ತುಗಳ ಖರೀದಿಗಾಗಿ ಸೂಪರ್​ ಮಾರ್ಕೆಟ್​, ಮಳಿಗೆಗಳಿಗೆ ಮುಗಿಬೀಳುತ್ತಿದ್ದಾರೆ. ಅದಕ್ಕಿಂತ ಭಯಾನಕವೆಂದರೆ ಶವಾಗಾರಗಳಲ್ಲೂ ಜಾಗವಿಲ್ಲದಂತಾಗಿದೆ. ಹೀಗಾಗಿ ಆಸ್ಪತ್ರೆ ಆಡಳಿತಗಳು ಶವಗಳನ್ನು ಶೈತ್ಯೀಕರಿಸಿದ ಶಿಪ್ಪಿಂಗ್​ ಕಂಟೇನರ್​ಗಳಲ್ಲಿ ಇಡುತ್ತಿದ್ದಾರೆ.

ಜಾಗತಿಕವಾಗಿ ಕೊರೊನಾದಿಂದ ಮೃತಪಡುವವರ ಸಂಖ್ಯೆ ಹೆಚ್ಚಿದೆ. ಈ ವಾರದಲ್ಲಿ ಆರು ಮಿಲಿಯನ್​ಗೆ ತಲುಪಿದೆ. ಹಾಂಗ್​ಕಾಂಗ್​​ನಲ್ಲಿ 2021ರ ಡಿಸೆಂಬರ್​ 31 ರಿಂದ ಇಲ್ಲಿಯವರೆಗೆ ಸುಮಾರು 2000 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.  ಲಸಿಕೆ ನೀಡಿಕೆ ವೇಗ ಕುಂಠಿತಗೊಂಡಿದ್ದೇ ಕೊರೊನಾ ಹೆಚ್ಚಲು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಅದರಲ್ಲೂ ವಯಸ್ಸಾದವರಿಗೆ ಲಸಿಕೆ ನೀಡಿಕೆ ಪ್ರಮಾಣ ತುಂಬ ಕಡಿಮೆಯಾಗಿದೆ. ಹಾಂಗ್​ಕಾಂಗ್​​ನಲ್ಲಿ ಪ್ರಾರಂಭವಾದ ಪ್ರಸಕ್ತ ಅಲೆಯಲ್ಲಿ ಸುಮಾರು 1153 ಮಂದಿ ಮೃತಪಟ್ಟವರಲ್ಲಿ ಶೇ.8ರಷ್ಟು ಮಂದಿ ಮಾತ್ರ ಎರಡೂ ಡೋಸ್​ ಕೊರೊನಾ ಲಸಿಕೆ ಪಡೆದವರು ಎಂಬುದು ದೃಢಪಟ್ಟಿದೆ.

ಜೀರೋ ಕೊವಿಡ್ ಕಾರ್ಯ ವಿಧಾನದ ನ್ಯೂನತೆಗಳನ್ನು ಹಾಂಗ್ ಕಾಂಗ್‌ನಲ್ಲಿ ಬಹಿರಂಗಪಡಿಸಲಾಗಿದೆ. ಅಲ್ಲಿ ದಕ್ಷಿಣ ಚೀನಾದ ನಗರದ ಸರ್ಕಾರದಿಂದ ಸಂದೇಶಗಳು ಆಹಾರ ಸರಬರಾಜುಗಳ ಸಂಗ್ರಹಣೆಗೆ ಉತ್ತೇಜನ ನೀಡಿವೆ ಮತ್ತು ಜನರನ್ನು ಪ್ರತ್ಯೇಕತೆಗೆ ಕರೆದೊಯ್ಯಲಾಗುತ್ತದೆ ಎಂಬ ಸಾರ್ವಜನಿಕ ಭಯವನ್ನು ಉಂಟುಮಾಡಿದೆ. ಶಾಂಘೈನಲ್ಲಿ, ಕೆಲವು ವಸ್ತುಸಂಗ್ರಹಾಲಯಗಳನ್ನು ಶುಕ್ರವಾರದಿಂದ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ನಗರ ಸರ್ಕಾರ ಹೇಳಿದೆ. ದಕ್ಷಿಣದ ನಗರವಾದ ಶೆನ್‌ಜೆನ್ ಫೆಬ್ರವರಿಯಲ್ಲಿ ಆನ್‌ಲೈನ್ ಶಿಕ್ಷಣಆರಂಭವಾದಾಗ ಅಲ್ಲಿ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸಿದವು ಮತ್ತು ಹಾಗೆಯೇ ಉಳಿದಿವೆ. ಬೀಜಿಂಗ್‌ನಲ್ಲಿ ಹಲವಾರು ವಸತಿ ಸಮುಚ್ಚಯ ಸಂಪೂರ್ಣವಾಗಿ ಅಥವಾ ಭಾಗಶಃ ಲಾಕ್‌ಡೌನ್ ಮಾಡಲಾಗಿದೆ.

ಇದನ್ನೂ ಓದಿ: Shane Warne: ಸ್ಪಿನ್ ದಿಗ್ಗಜರ ಶೇನ್ ವಾರ್ನ್ ಸಾವಿಗೆ ಮುಳುವಾಯಿತೇ ಈ ಒಂದು ಕಾರಣ?

Published On - 9:30 am, Sun, 13 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ