Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19: ಚೀನಾದಲ್ಲಿ ಒಂದೇ ತಿಂಗಳಲ್ಲಿ ಕೋವಿಡ್​ನಿಂದ 60,000 ಸಾವು

2022ರ ಡಿಸೆಂಬರ್ 8ರಿಂದ 2023ರ ಜನವರಿ 12ರ ಅವಧಿಯಲ್ಲಿ 59,938 ಮಂದಿ ಕೋವಿಡ್​​ನಿಂದಾಗಿ ಮೃತಪಟ್ಟಿದ್ದಾರೆ. ಈ ಪೈಕಿ 5,503 ಮಂದಿ ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಮೃತಪಟ್ಟರೆ 54,435 ಮಂದಿ ನೇರವಾಗಿ ಕೋವಿಡ್​ನಿಂದ ಮೃತಪಟ್ಟಿದ್ದಾರೆ ಎಂದು ಎನ್​ಎಚ್​ಸಿ ತಿಳಿಸಿದೆ.

Covid-19: ಚೀನಾದಲ್ಲಿ ಒಂದೇ ತಿಂಗಳಲ್ಲಿ ಕೋವಿಡ್​ನಿಂದ 60,000 ಸಾವು
ಚೀನಾದಲ್ಲಿ ಕೋವಿಡ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Jan 14, 2023 | 7:07 PM

ಬೀಜಿಂಗ್: ಚೀನಾದಲ್ಲಿ (China) ಕೇವಲ ಒಂದು ತಿಂಗಳ ಅವಧಿಯಲ್ಲಿ ಕೋವಿಡ್ ಸಂಬಂಧಿತ (Covid-19) ಸಮಸ್ಯೆಗಳಿಂದ ಸುಮಾರು 60,000 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 2022ರ ಡಿಸೆಂಬರ್​ ಆರಂಭದಲ್ಲಿ ಕೋವಿಡ್ ಸಂಬಂಧಿತ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಚೀನಾದ ಅಧಿಕಾರಿಗಳು ಇದೇ ಮೊದಲ ಬಾರಿಗೆ ಕೋವಿಡ್ ಸಾವಿಗೆ ಸಂಬಂಧಿಸಿದ ವಿವರ ಬಹಿರಂಗಪಡಿಸಿದ್ದಾರೆ. ಕೋವಿಡ್ ವಿರುದ್ಧದ ಶೂನ್ಯ ಸಹನೆ ನೀತಿಯನ್ನು ಕೈಬಿಟ್ಟ ಬಳಿಕ ಚೀನಾವು ಕೋವಿಡ್ ಸಾವಿಗೆ ಸಂಬಂಧಿಸಿ ಅಂಕಿಅಂಶಗಳನ್ನು ಮರೆಮಾಚುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿದ್ದು, ಇದರ ಮಧ್ಯೆಯೇ ಅಂಕಿಅಂಶ ಬಿಡುಗಡೆ ಮಾಡಲಾಗಿದೆ.

ಕೋವಿಡ್​ನಿಂದಾಗಿ ಕೆಲವೇ ಕೆಲವು ಸಾವುಗಳು ಸಂಭವಿಸಿವೆ ಎಂದು ಈ ಹಿಂದೆ ಚೀನಾ ಹೇಳಿತ್ತು. ಆದರೆ ಈಗ ಚೀನಾದ ರಾಷ್ಟ್ರೀಯ ಆರೋಗ್ಯ ಸಮಿತಿ (ಎನ್​ಎಚ್​ಸಿ) ಬಹಿರಂಗಪಡಿಸಿರುವ ವರದಿ ಬೇರೆಯೇ ಲೆಕ್ಕಾಚಾರಗಳನ್ನು ಜನರ ಮುಂದಿಟ್ಟಿದೆ. 2022ರ ಡಿಸೆಂಬರ್ 8ರಿಂದ 2023ರ ಜನವರಿ 12ರ ಅವಧಿಯಲ್ಲಿ 59,938 ಮಂದಿ ಕೋವಿಡ್​​ನಿಂದಾಗಿ ಮೃತಪಟ್ಟಿದ್ದಾರೆ. ಈ ಪೈಕಿ 5,503 ಮಂದಿ ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಮೃತಪಟ್ಟರೆ 54,435 ಮಂದಿ ನೇರವಾಗಿ ಕೋವಿಡ್​ನಿಂದ ಮೃತಪಟ್ಟಿದ್ದಾರೆ ಎಂದು ಎನ್​ಎಚ್​ಸಿ ತಿಳಿಸಿದೆ.

ಇದನ್ನೂ ಓದಿ: Omicron subvariant XBB.1.5: ವಿಶ್ವದಲ್ಲಿ ಹೆಚ್ಚುತ್ತಿದೆ XBB.1.5, WHO ಕಳವಳ; ಭಾರತದಲ್ಲಿ 0.01% ಕೋವಿಡ್ ಪಾಸಿಟಿವಿಟಿ

ಚೀನಾದಲ್ಲಿ ಮುಂದಿನ 2-3 ತಿಂಗಳುಗಳಲ್ಲಿ ಕೊರೊನಾ ಸೋಂಕು ಉತ್ತುಂಗಕ್ಕೆ ತಲುಪಲಿದ್ದು, ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ಳಲಿದೆ ಎಂದು ಅಲ್ಲಿನ ಉನ್ನತ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಶುಕ್ರವಾರ ಹೇಳಿದ್ದರು. ಚೀನಾದಲ್ಲಿ ಹೊಸ ವರ್ಷ ಆಗಮನ ಇನ್ನಷ್ಟೇ ಆಗಬೇಕಿದೆ. ಹೀಗಾಗಿ ಹೊಸ ವರ್ಷದ ಅಂಗವಾಗಿ ಜನವರಿ 21ರಿಂದ ಕೋಟ್ಯಂತರ ಮಂದಿ ತಮ್ಮ ಊರುಗಳಿಗೆ ಹಿಂದಿರುಗುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.

ಶೂನ್ಯ ಕೋವಿಡ್ ನೀತಿಯಿಂದಾಗಿ ಚೀನಾದ ಜನರು ತತ್ತರಿಸಿಹೋಗಿದ್ದರು. ನವೆಂಬರ್​ ಅಂತ್ಯದ ವೇಳೆಗೆ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಬಳಿಕ ಅಲ್ಲಿನ ಸರ್ಕಾರ ಡಿಸೆಂಬರ್ ಮೊದಲ ವಾರದಲ್ಲಿ ಲಾಕ್​ಡೌನ್​ ತೆರವು ಮಾಡಿತ್ತು. ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಿದ್ದಲ್ಲದೆ, ಅಂತಾರಾಷ್ಟ್ರೀಯ ಗಡಿಗಳನ್ನು ಕೂಡ ತೆರೆದಿತ್ತು. ಬಳಿಕ ಕೋವಿಡ್ ಪ್ರಕರಣಗಳು ತಾರಕಕ್ಕೇರಿದ್ದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ