Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮರೆಯಬೇಡಿ, ಕೊವಿಡ್ 19 ಮುಂದಿನ ರೂಪಾಂತರ ಇನ್ನಷ್ಟು ಮಾರಣಾಂತಿಕವಾಗಿರಬಹುದು: ವಿಶ್ವ ಆರೋಗ್ಯ ಸಂಸ್ಥೆಯಿಂದ ಎಚ್ಚರಿಕೆ

ಡೆಲ್ಟಾ ನಂತರ ಹುಟ್ಟಿದ್ದು ಒಮಿಕ್ರಾನ್​. 2021ರ ನವೆಂಬರ್​ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಈ ವೈರಸ್ ಅತ್ಯಂತ ಕಡಿಮೆ ಸಮಯದಲ್ಲಿ ಜಗತ್ತನ್ನು ಆವರಿಸಿದೆ. ಡೆಲ್ಟಾಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೇಗವಾಗಿ ಹರಡಿದ ಒಮಿಕ್ರಾನ್ ಆರೋಗ್ಯದಲ್ಲಿ ಗಂಭೀರ ಸಮಸ್ಯೆಯನ್ನು ಉಂಟು ಮಾಡಿದ್ದು ತುಂಬ ಕಡಿಮೆ.

ಮೈಮರೆಯಬೇಡಿ, ಕೊವಿಡ್ 19 ಮುಂದಿನ ರೂಪಾಂತರ ಇನ್ನಷ್ಟು ಮಾರಣಾಂತಿಕವಾಗಿರಬಹುದು: ವಿಶ್ವ ಆರೋಗ್ಯ ಸಂಸ್ಥೆಯಿಂದ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Feb 09, 2022 | 12:58 PM

ಒಮಿಕ್ರಾನ್ ರೂಪಾಂತರದಿಂದ ಜಗತ್ತಿನಾದ್ಯಂತ ಅತ್ಯಂತ ಹೆಚ್ಚಾಗಿದ್ದ ಕೊರೊನಾ ಸೋಂಕಿನ (Coronavirus) ಪ್ರಮಾಣ ನಿಧಾನವಾಗಿ ತಗ್ಗುತ್ತಿದೆ. ಹಾಗೇ ಜಗತ್ತು ಕೂಡ ಒಂದೊಂದೇ ಹಂತವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಜನರು ನಿರ್ಲಕ್ಷ್ಯ ಮಾಡುವಂತಿಲ್ಲ. ಯಾಕೆಂದರೆ ಕೊವಿಡ್ 19ನ ಮುಂದಿನ ರೂಪಾಂತರ ಈ ಹಿಂದಿನ ಎಲ್ಲ ರೂಪಾಂತರಿ ವೈರಾಣುಗಳಿಗಿಂತಲೂ ಅತ್ಯಂತ ಹೆಚ್ಚು ಪ್ರಸರಣ ಹೊಂದುತ್ತದೆ ಮತ್ತು ಬಹುಶಃ ಒಮಿಕ್ರಾನ್​​ಗಿಂತಲೂ ಮಾರಣಾಂತಿಕವಾಗಿ ಇರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ ವಿಶ್ವ ಆರೋಗ್ಯ ಸಂಸ್ಥೆ (WHO)ಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞರಾದ ಡಾ.ಮಾರಿಯಾ ವ್ಯಾನ್ ಕೆರ್ಕೋವ್, ಕೊವಿಡ್​ 19 ಸಾಂಕ್ರಾಮಿಕ ಇನ್ನೂ ಕೊನೆಗೊಂಡಿಲ್ಲ. ಅದರ ಭವಿಷ್ಯದ ತಳಿಗಳು ಇನ್ನಷ್ಟು ಅಪಾಯಕಾರಿ ಎಂಬುದನ್ನು ಒತ್ತಿ ಹೇಳಿದ್ದಾರೆ. 

ಒಮಿಕ್ರಾನ್​ ಕೊವಿಡ್​ 19 ನ ಕೊನೇ ರೂಪಾಂತರವಲ್ಲ. ಇದರ ಮುಂದಿನ ರೂಪಾಂತರ ಇನ್ನಷ್ಟು ವೇಗವಾಗಿ ಅಂದರೆ ಇದೀಗ ಹರಡುತ್ತಿರುವ ಒಮಿಕ್ರಾನ್​​ನ್ನೂ ಹಿಂದಿಕ್ಕಿ ಪ್ರಸರಣಗೊಳ್ಳುತ್ತದೆ. ಆದರೆ ಅದರ ಗಂಭೀರತೆ ಎಷ್ಟಿರಲಿದೆ ಎಂಬುದು ಸದ್ಯ ಇರುವ ಪ್ರಶ್ನೆ.  ಮುಂದಿನ ರೂಪಾಂತರ ಮನುಷ್ಯರ ದೇಹದಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಅತ್ಯಂತ ಸುಲಭವಾಗಿ ತಗ್ಗಿಸಬಹುದು. ಈಗಾಗಲೇ ಇರುವ ಕೊವಿಡ್​ 19 ಲಸಿಕೆಗಳ ಶಕ್ತಿಯನ್ನೂ ಕುಂದಿಸುವಂತಿರಬಹುದು ಡಾ.ಮಾರಿಯಾ ವ್ಯಾನ್ ಕೆರ್ಕೋವ್ ಹೇಳಿದ್ದಾರೆ.

ಕೊವಿಡ್ 19 ವೈರಸ್​ ಶುರುವಾದ ಮೇಲೆ ಅದರಿಂದ ಹಲವು ರೂಪಾಂತರಗಳು ಉಂಟಾಗಿದ್ದರೂ, ಜಗತ್ತಿಗೆ ಹೆಚ್ಚು ಬಾಧಿಸಿದವು ಡೆಲ್ಟಾ ಮತ್ತು ಒಮಿಕ್ರಾನ್​. ಅದರಲ್ಲಿ ಡೆಲ್ಟಾ ಅತ್ಯಂತ ಮಾರಣಾಂತಿಕವಾಗಿ ಪರಿಣಮಿಸಿತ್ತು. ಅದಕ್ಕೆ ಹೋಲಿಸದರೆ ಒಮಿಕ್ರಾನ್​ ಗಂಭೀರತೆ ತುಂಬ ಕಡಿಮೆಯಿತ್ತು. ಡೆಲ್ಟಾ ಮೊಟ್ಟ ಮೊದಲು ಭಾರತದಲ್ಲಿ ಪತ್ತೆಯಾಗಿದ್ದು 2020ರ ಅಕ್ಟೋಬರ್​​ನಲ್ಲಿ. ಅದರ ಹಿಂದಿನ ಆಲ್ಪಾ ರೂಪಾಂತರಿಗಿಂತಲೂ ಶೇ.50ರಷ್ಟು ವೇಗವಾಗಿ ಹರಡಿತ್ತು. ಹಾಗೇ ಮೂಲ ವೈರಸ್ ಆದ ಕೊರೊನಾ ವೈರಸ್​ಗಿಂತಲೂ ಶೇ.50ರಷ್ಟು ಅಧಿಕ ಸಾಂಕ್ರಾಮಿಕವಾಗಿತ್ತು. ಈ ಡೆಲ್ಟಾ ಭಾರತದಲ್ಲಿ ಎರಡನೇ ಅಲೆಗೆ ಕಾರಣವಾಗಿತ್ತು. ಅದು ಬಿಟ್ಟರೆ ಯುಕೆ, ಇಸ್ರೇಲ್​, ರಷ್ಯಾ, ಆಸ್ಟ್ರೇಲಿಯಾ ಸೇರಿ ಜಗತ್ತಿನ ಇತರ ದೇಶಗಳಿಗೂ ಅತ್ಯಂತ ಹೆಚ್ಚಾಗಿ ಬಾಧಿಸಿತ್ತು.

ಡೆಲ್ಟಾ ನಂತರ ಹುಟ್ಟಿದ್ದು ಒಮಿಕ್ರಾನ್​. 2021ರ ನವೆಂಬರ್​ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಈ ವೈರಸ್ ಅತ್ಯಂತ ಕಡಿಮೆ ಸಮಯದಲ್ಲಿ ಜಗತ್ತನ್ನು ಆವರಿಸಿದೆ. ಡೆಲ್ಟಾಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೇಗವಾಗಿ ಹರಡಿದ ಒಮಿಕ್ರಾನ್ ಆರೋಗ್ಯದಲ್ಲಿ ಗಂಭೀರ ಸಮಸ್ಯೆಯನ್ನು ಉಂಟು ಮಾಡಿದ್ದು ತುಂಬ ಕಡಿಮೆ. ಹಾಗೇ, ಇದು ಡೆಲ್ಟಾಕ್ಕಿಂತಲೂ 5 ಪಟ್ಟು ಹೆಚ್ಚು ಮರುಸೋಂಕಿನ ಅಪಾಯ ಹೊಂದಿದೆ. ಸದ್ಯ ಭಾರತದಲ್ಲಿ ನಡೆಯುತ್ತಿರುವ ಮೂರನೇ ಅಲೆಗೆ ಕಾರಣವಾಗಿದ್ದು ಇದೇ ಒಮಿಕ್ರಾನ್ ಸೋಂಕಾಗಿದೆ.  ಒಮಿಕ್ರಾನ್ ಶುರುವಾದಾಗ, ಇದು ಕೊರೊನಾದ ಕೊನೇ ರೂಪಾಂತರ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಅದನ್ನೀಗ ಆರೋಗ್ಯ ತಜ್ಞರು ಅಲ್ಲಗಳೆದಿದ್ದಾರೆ.

ಇದನ್ನೂ ಓದಿ: Hijab Row: ಉಡುಪಿಯಲ್ಲಿ ತಲೆ ಎತ್ತಿದ್ದ ಹಿಜಾಬ್ ವಿವಾದ: ತಕ್ಷಣ ಉಪನಿರ್ದೇಶಕರಿಗೆ ಪ್ರಿನ್ಸಿಪಾಲ್ ಕಳಿಸಿದ್ದ ವಾಟ್ಸಾಪ್ ಸಂದೇಶ ಹೀಗಿದೆ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್