AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಸಿಕೆ ತೆಗೆದುಕೊಂಡರೆ ಮಹಿಳೆಯರಿಗೆ ಗಡ್ಡ ಬರಬಹುದು.. ನೀವು ಮೊಸಳೆಯಾಗಬಹುದು’ -ಯಾರಪ್ಪಾ ಹೀಗಂದಿದ್ದು!

ಲಸಿಕೆಯ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸದ ಬ್ರೆಜಿಲ್​ ಅಧ್ಯಕ್ಷ, ತಮ್ಮ ರಾಷ್ಟ್ರದಲ್ಲಿ ಲಸಿಕೆ ಉಚಿತ ಆದರೆ ಕಡ್ಡಾಯವಲ್ಲ ಎಂದಿದ್ದಾರೆ..ಆದರೆ ಅಲ್ಲಿನ ಸುಪ್ರೀಂಕೋರ್ಟ್​, ಜನರಿಗೆ ಲಸಿಕೆಯನ್ನು ತೆಗೆದುಕೊಳ್ಳಲು ಬಲವಂತ ಮಾಡಬಾರದು..ಆದರೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದಿದೆ.

‘ಲಸಿಕೆ ತೆಗೆದುಕೊಂಡರೆ ಮಹಿಳೆಯರಿಗೆ ಗಡ್ಡ ಬರಬಹುದು.. ನೀವು ಮೊಸಳೆಯಾಗಬಹುದು’ -ಯಾರಪ್ಪಾ ಹೀಗಂದಿದ್ದು!
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ
Lakshmi Hegde
|

Updated on:Dec 19, 2020 | 4:23 PM

Share

ಬ್ರೆಸಿಲಿಯಾ: ಬ್ರೆಜಿಲ್​ ಅಧ್ಯಕ್ಷ ಜೈರ್​ ಬೋಲ್ಸನಾರೊ ಕೊರೊನಾ ಲಸಿಕೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊವಿಡ್​-19 ಒಂದು ಸಣ್ಣ ಜ್ವರ ಎಂದು ಈ ಹಿಂದೆಯೇ ಹೇಳಿಕೆ ನೀಡಿದ್ದ ಜೈರ್​ ಬೊಲ್ಸನಾರೋ, ನಾನಂತೂ ಯಾವ ಕಾರಣಕ್ಕೂ ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ ಎಂದು ಇತ್ತೀಚೆಗಷ್ಟೇ ಸ್ಪಷ್ಟವಾಗಿ ಹೇಳಿಬಿಟ್ಟಿದ್ದಾರೆ. ಅಷ್ಟೇ ಅಲ್ಲ, ಲಸಿಕೆ ತಯಾರಕರ ವಿರುದ್ಧವೂ ವ್ಯಂಗ್ಯವಾಡಿದ್ದಾರೆ.

ಸದ್ಯ ಅಮೆರಿಕದಲ್ಲಿ ಬಳಕೆಯಾಗುತ್ತಿರುವ, ಬ್ರೆಜಿಲ್​ನಲ್ಲಿ ಪರೀಕ್ಷಾ ಹಂತದಲ್ಲಿರುವ ಫಿಜರ್​ ಲಸಿಕೆಯ ಬಗ್ಗೆ ಮಾತನಾಡಿದ ಅಧ್ಯಕ್ಷ, ಫಿಜರ್​ ಕಾಂಟ್ರಾಕ್ಟ್​ನಲ್ಲಿಯೇ ಸ್ಪಷ್ಟವಾಗಿ ಹೇಳಿಬಿಟ್ಟಿದ್ದಾರೆ, ಲಸಿಕೆಯಿಂದ ಯಾವುದೇ ಅಡ್ಡಪರಿಣಾಮ ಆದರೂ ನಾವು ಜವಾಬ್ದಾರರು ಅಲ್ಲವೆಂದು.. ಅಂದರೆ ಲಸಿಕೆ ತೆಗೆದುಕೊಂಡ ಬಳಿಕ ನೀವು ಮೊಸಳೆಯಾಗಬಹುದು.. ಸೂಪರ್​ ಶಕ್ತಿಯುಳ್ಳ ಮನುಷ್ಯರಾಗಬಹುದು, ಮಹಿಳೆಯರಿಗೆ ಗಡ್ಡ ಬೆಳೆಯಬಹುದು.. ಹಾಗೇ ಪುರುಷರು  ಮಹಿಳೆಯರ ಧ್ವನಿಯಲ್ಲಿ ಮಾತನಾಡುವಂತೆ ಆಗಬಹುದು.. ಆದರೆ ಏನೇ ಆದರೂ ಲಸಿಕೆ ತಯಾರಕ ಕಂಪನಿ ಜವಾಬ್ದಾರಿ ಆಗುವುದಿಲ್ಲ ಎಂದು ಬೊಲ್ಸನಾರೋ ಹೇಳಿದ್ದಾರೆ.

ಲಸಿಕೆಯ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸದ ಬ್ರೆಜಿಲ್​ ಅಧ್ಯಕ್ಷ, ತಮ್ಮ ರಾಷ್ಟ್ರದಲ್ಲಿ ಲಸಿಕೆ ಉಚಿತ ಆದರೆ ಕಡ್ಡಾಯವಲ್ಲ ಎಂದಿದ್ದಾರೆ..ಆದರೆ ಅಲ್ಲಿನ ಸುಪ್ರೀಂಕೋರ್ಟ್​, ಜನರಿಗೆ ಲಸಿಕೆಯನ್ನು ತೆಗೆದುಕೊಳ್ಳಲು ಬಲವಂತ ಮಾಡಬಾರದು..ಆದರೆ ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಮಾಡಬೇಕು  ಎಂದಿದೆ. ಅಂದರೆ ಯಾರು ಲಸಿಕೆ ತೆಗೆದುಕೊಂಡಿಲ್ಲವೋ ಅವರಿಗೆ ಆಯ್ದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನೀಡಬಾರದು ಎಂಬ ಸೂಚನೆಯನ್ನು ಕೋರ್ಟ್​ ನೀಡಿದೆ.

ಬ್ರೆಜಿಲ್​ನಲ್ಲಿ ಈವರೆಗೆ 71 ಲಕ್ಷ ಜನರಿಗೆ ಕೊರೊನಾ ಸೋಂಕು ತಗುಲಿದ್ದು, 185,000 ಮಂದಿ ಮೃತಪಟ್ಟಿದ್ದಾರೆ.

Published On - 4:17 pm, Sat, 19 December 20

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ